<p><strong>ಬೀದರ್: </strong>ಶುಕ್ರವಾರ(ಫೆ.7)ದಿಂದ ಮೂರು ದಿನಗಳ ಕಾಲ ನಡೆಯಲಿರುವ 17ನೆಯ ವಚನ ವಿಜಯೋತ್ಸವಕ್ಕೆ ಇಲ್ಲಿಯ ಬಸವಗಿರಿ ಸಜ್ಜುಗೊಂಡಿದೆ.</p>.<p>ವಿಜಯೋತ್ಸವಕ್ಕಾಗಿ ವಿಶಾಲ ಮಂಟಪ, ವೇದಿಕೆ ಹಾಗೂ ಮಹಾದ್ವಾರಗಳನ್ನು ನಿರ್ಮಿಸಲಾಗಿದೆ.</p>.<p>ಮಂಟಪಕ್ಕೆ ಡಾ. ಚನ್ನಬಸವ ಪಟ್ಟದ್ದೇವರು, ವೇದಿಕೆಗೆ ಲಿಂಗಾನಂದ ಸ್ವಾಮೀಜಿ ಹಾಗೂ ಮಹಾದ್ವಾರಕ್ಕೆ 770 ಅಮರಗಣಂಗಳ ಹೆಸರು ಇಡಲಾಗಿದೆ. ಮಂಟಪದಲ್ಲಿ ಏಕಕಾಲಕ್ಕೆ ಹತ್ತಾರು ಸಾವಿರ ಜನ ಕುಳಿತುಕೊಳ್ಳಬಹುದಾಗಿದೆ.<br />ಭಕ್ತರಿಗೆ ಪ್ರಸಾದಕ್ಕಾಗಿ ಪ್ರತ್ಯೇಕ ನೀಲಾಂಬಿಕೆ ಪ್ರಸಾದ ಮಂಟಪ ಹಾಗೂ ದಾಸೋಹ ಮಂಟಪ ನಿರ್ಮಾಣ ಮಾಡಲಾಗಿದೆ.</p>.<p>ಮೂರೂ ದಿನ ನಿರಂತರ ಪ್ರಸಾದ ವ್ಯವಸ್ಥೆ ಇರಲಿದೆ. ಸಜ್ಜೆ, ಜೋಳದ ರೊಟ್ಟಿ, ಶೇಂಗಾ ಹೋಳಿಗೆ, ಗೋಧಿ ಹುಗ್ಗಿ, ಭಜ್ಜಿ, ಅನ್ನ ಸಾರು ಪ್ರಸಾದದ ವಿಶೇಷ ಆಗಿರಲಿವೆ. ಬಸವಗಿರಿಯ ಎಲ್ಲೆಡೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.</p>.<p>ನೌಬಾದ್, ಮಂಗಲಪೇಟ್, ಚೌಬಾರಾದಿಂದ ಬೆಳಿಗ್ಗೆ 7.30 ರಿಂದ ರಾತ್ರಿ 8.30 ರ ವರೆಗೆ ನಗರ ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಪಾಪನಾಶದಿಂದ ಬಸವಗಿರಿಯವರೆಗೆ ಉಚಿತ ವಾಹನ ಸೌಕರ್ಯ ಕೂಡ ಇರಲಿದೆ.</p>.<p>‘ವಚನ ಸಾಹಿತ್ಯದ ಸಂರಕ್ಷಣೆಗಾಗಿ ಶರಣರು ಮಾಡಿದ ತ್ಯಾಗ ಹಾಗೂ ಬಲಿದಾನದ ಸ್ಮರಣೆಗಾಗಿ ಪ್ರತಿ ವರ್ಷ ವಚನ ವಿಜಯೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿಯ ವಚನ ವಿಜಯೋತ್ಸವವು ಹಿಂದಿಗಿಂತಲೂ ಅರ್ಥಪೂರ್ಣವಾಗಿರಲಿದೆ’ ಎಂದು ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ ತಿಳಿಸುತ್ತಾರೆ.</p>.<p>‘ಕರ್ನಾಟಕದ ಎಲ್ಲ ಜಿಲ್ಲೆಗಳು ಹಾಗೂ ನೆರೆ ರಾಜ್ಯಗಳ ಅಸಂಖ್ಯಾತ ಭಕ್ತರು ವಚನ ವಿಜಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಜಯೋತ್ಸವದ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ’ ಎಂದು ಹೇಳುತ್ತಾರೆ.</p>.<p>‘ಸ್ವಾಗತ ಸೇರಿದಂತೆ 22 ಸಮಿತಿಗಳನ್ನು ರಚಿಸಲಾಗಿದೆ. ವಿವಿಧ ಸಮಿತಿಗಳ 150ಕ್ಕೂ ಹೆಚ್ಚು ಸದಸ್ಯರು ವಚನ ವಿಜಯೋತ್ಸವದ ಯಶಸ್ಸಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ’ ಎಂದು ತಿಳಿಸುತ್ತಾರೆ.</p>.<p>ಮುಖ್ಯಮಂತ್ರಿ ಚಾಲನೆ: ಶುಕ್ರವಾರ ಬೆಳಿಗ್ಗೆ 7.30ಕ್ಕೆ ಷಟ್ಸ್ಥಲ ಧ್ವಜಾರೋಹಣ, ಗುರುವಚನ ಪರುಷ ಕಟ್ಟೆಯಲ್ಲಿ ಧರ್ಮಗ್ರಂಥ ಗೌರವಾರ್ಪಣೆಯ ನಂತರ ಸಾಮೂಹಿಕ ಇಷ್ಟಲಿಂಗಯೋಗದೊಂದಿಗೆ ವಚನ ವಿಜಯೋತ್ಸವ ಆರಂಭವಾಗಲಿದೆ. ಬೆಳಿಗ್ಗೆ 11ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಜಯೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಶುಕ್ರವಾರ(ಫೆ.7)ದಿಂದ ಮೂರು ದಿನಗಳ ಕಾಲ ನಡೆಯಲಿರುವ 17ನೆಯ ವಚನ ವಿಜಯೋತ್ಸವಕ್ಕೆ ಇಲ್ಲಿಯ ಬಸವಗಿರಿ ಸಜ್ಜುಗೊಂಡಿದೆ.</p>.<p>ವಿಜಯೋತ್ಸವಕ್ಕಾಗಿ ವಿಶಾಲ ಮಂಟಪ, ವೇದಿಕೆ ಹಾಗೂ ಮಹಾದ್ವಾರಗಳನ್ನು ನಿರ್ಮಿಸಲಾಗಿದೆ.</p>.<p>ಮಂಟಪಕ್ಕೆ ಡಾ. ಚನ್ನಬಸವ ಪಟ್ಟದ್ದೇವರು, ವೇದಿಕೆಗೆ ಲಿಂಗಾನಂದ ಸ್ವಾಮೀಜಿ ಹಾಗೂ ಮಹಾದ್ವಾರಕ್ಕೆ 770 ಅಮರಗಣಂಗಳ ಹೆಸರು ಇಡಲಾಗಿದೆ. ಮಂಟಪದಲ್ಲಿ ಏಕಕಾಲಕ್ಕೆ ಹತ್ತಾರು ಸಾವಿರ ಜನ ಕುಳಿತುಕೊಳ್ಳಬಹುದಾಗಿದೆ.<br />ಭಕ್ತರಿಗೆ ಪ್ರಸಾದಕ್ಕಾಗಿ ಪ್ರತ್ಯೇಕ ನೀಲಾಂಬಿಕೆ ಪ್ರಸಾದ ಮಂಟಪ ಹಾಗೂ ದಾಸೋಹ ಮಂಟಪ ನಿರ್ಮಾಣ ಮಾಡಲಾಗಿದೆ.</p>.<p>ಮೂರೂ ದಿನ ನಿರಂತರ ಪ್ರಸಾದ ವ್ಯವಸ್ಥೆ ಇರಲಿದೆ. ಸಜ್ಜೆ, ಜೋಳದ ರೊಟ್ಟಿ, ಶೇಂಗಾ ಹೋಳಿಗೆ, ಗೋಧಿ ಹುಗ್ಗಿ, ಭಜ್ಜಿ, ಅನ್ನ ಸಾರು ಪ್ರಸಾದದ ವಿಶೇಷ ಆಗಿರಲಿವೆ. ಬಸವಗಿರಿಯ ಎಲ್ಲೆಡೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.</p>.<p>ನೌಬಾದ್, ಮಂಗಲಪೇಟ್, ಚೌಬಾರಾದಿಂದ ಬೆಳಿಗ್ಗೆ 7.30 ರಿಂದ ರಾತ್ರಿ 8.30 ರ ವರೆಗೆ ನಗರ ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಪಾಪನಾಶದಿಂದ ಬಸವಗಿರಿಯವರೆಗೆ ಉಚಿತ ವಾಹನ ಸೌಕರ್ಯ ಕೂಡ ಇರಲಿದೆ.</p>.<p>‘ವಚನ ಸಾಹಿತ್ಯದ ಸಂರಕ್ಷಣೆಗಾಗಿ ಶರಣರು ಮಾಡಿದ ತ್ಯಾಗ ಹಾಗೂ ಬಲಿದಾನದ ಸ್ಮರಣೆಗಾಗಿ ಪ್ರತಿ ವರ್ಷ ವಚನ ವಿಜಯೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿಯ ವಚನ ವಿಜಯೋತ್ಸವವು ಹಿಂದಿಗಿಂತಲೂ ಅರ್ಥಪೂರ್ಣವಾಗಿರಲಿದೆ’ ಎಂದು ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ ತಿಳಿಸುತ್ತಾರೆ.</p>.<p>‘ಕರ್ನಾಟಕದ ಎಲ್ಲ ಜಿಲ್ಲೆಗಳು ಹಾಗೂ ನೆರೆ ರಾಜ್ಯಗಳ ಅಸಂಖ್ಯಾತ ಭಕ್ತರು ವಚನ ವಿಜಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಜಯೋತ್ಸವದ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ’ ಎಂದು ಹೇಳುತ್ತಾರೆ.</p>.<p>‘ಸ್ವಾಗತ ಸೇರಿದಂತೆ 22 ಸಮಿತಿಗಳನ್ನು ರಚಿಸಲಾಗಿದೆ. ವಿವಿಧ ಸಮಿತಿಗಳ 150ಕ್ಕೂ ಹೆಚ್ಚು ಸದಸ್ಯರು ವಚನ ವಿಜಯೋತ್ಸವದ ಯಶಸ್ಸಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ’ ಎಂದು ತಿಳಿಸುತ್ತಾರೆ.</p>.<p>ಮುಖ್ಯಮಂತ್ರಿ ಚಾಲನೆ: ಶುಕ್ರವಾರ ಬೆಳಿಗ್ಗೆ 7.30ಕ್ಕೆ ಷಟ್ಸ್ಥಲ ಧ್ವಜಾರೋಹಣ, ಗುರುವಚನ ಪರುಷ ಕಟ್ಟೆಯಲ್ಲಿ ಧರ್ಮಗ್ರಂಥ ಗೌರವಾರ್ಪಣೆಯ ನಂತರ ಸಾಮೂಹಿಕ ಇಷ್ಟಲಿಂಗಯೋಗದೊಂದಿಗೆ ವಚನ ವಿಜಯೋತ್ಸವ ಆರಂಭವಾಗಲಿದೆ. ಬೆಳಿಗ್ಗೆ 11ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಜಯೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>