<p><strong>ಬೀದರ್:</strong> ‘ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಆಡಿರುವ ಮಾತುಗಳು ಖಂಡನಾರ್ಹವಾಗಿದ್ದು, ಯತ್ನಾಳ ಮಾತು ಇತಿಹಾಸ ಅರಿವಿಲ್ಲದ ಮಾತು’ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದ್ದಾರೆ.</p><p>ಬಸವಣ್ಣನ ಜನ್ಮಭೂಮಿಯಲ್ಲಿ ಹುಟ್ಟಿರುವ ಯತ್ನಾಳ ಅವರು ಬಸವಣ್ಣನವರ ಕುರಿತು ಇಂಥ ಮಾತುಗಳು ಆಡಿರುವುದು ಅವರಿಗೆ ಶೋಭೆ ತರುವಂಥದ್ದಲ್ಲ. ಬಸವಣ್ಣನವರ ತತ್ವಗಳನ್ನು ಜಗತ್ತೆ ಅನುಸರಿಸುತ್ತಿರುವ ಸಂದರ್ಭದಲ್ಲಿ ಯತ್ನಾಳ ಅವರಿಗೆ ಬಸವಣ್ಣನವರ ಚರಿತ್ರೆ, ಸಿದ್ಧಾಂತಗಳು ಸರಿಯಾಗಿ ಗೊತ್ತಿಲ್ಲದಿರುವುದು ವಿಷಾದನೀಯ ಸಂಗತಿ ಎಂದು ಶನಿವಾರ ತಿಳಿಸಿದ್ದಾರೆ.</p><p>ಯತ್ನಾಳ ಅವರು ಬಸವ ಪ್ರಜ್ಞೆಯನ್ನು ಬೆಳೆಸಿಕೊಂಡು ಬಸವಣ್ಣನವರ ನಿಜವಾದ ಚರಿತ್ರೆಯ ಅಧ್ಯಯನ ಮಾಡಬೇಕು. ಬಸವಣ್ಣನವರ ಕುರಿತು ಇಲ್ಲಸಲ್ಲದ ಮಾತುಗಳನ್ನು ಆಡಿ ಜನರ ಭಾವನೆಗೆ ಧಕ್ಕೆ ಉಂಟು ಮಾಡಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>‘ಬಸವಣ್ಣನವರಂತೆ ಹೊಳ್ಯಾಗ ಜಿಗಿಬೇಕು, ಇಲ್ಲವಾದರೆ ಸಾಬ್ರು ಆಗಿ’ ಎಂದು ಯತ್ನಾಳ ಅವರು ನವೆಂಬರ್ 25ರಂದು ಬೀದರ್ನಲ್ಲಿ ಹಮ್ಮಿಕೊಂಡಿದ್ದ ವಕ್ಫ್ ವಿರೋಧಿ ಪ್ರತಿಭಟನಾ ಸಭೆಯಲ್ಲಿ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಆಡಿರುವ ಮಾತುಗಳು ಖಂಡನಾರ್ಹವಾಗಿದ್ದು, ಯತ್ನಾಳ ಮಾತು ಇತಿಹಾಸ ಅರಿವಿಲ್ಲದ ಮಾತು’ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದ್ದಾರೆ.</p><p>ಬಸವಣ್ಣನ ಜನ್ಮಭೂಮಿಯಲ್ಲಿ ಹುಟ್ಟಿರುವ ಯತ್ನಾಳ ಅವರು ಬಸವಣ್ಣನವರ ಕುರಿತು ಇಂಥ ಮಾತುಗಳು ಆಡಿರುವುದು ಅವರಿಗೆ ಶೋಭೆ ತರುವಂಥದ್ದಲ್ಲ. ಬಸವಣ್ಣನವರ ತತ್ವಗಳನ್ನು ಜಗತ್ತೆ ಅನುಸರಿಸುತ್ತಿರುವ ಸಂದರ್ಭದಲ್ಲಿ ಯತ್ನಾಳ ಅವರಿಗೆ ಬಸವಣ್ಣನವರ ಚರಿತ್ರೆ, ಸಿದ್ಧಾಂತಗಳು ಸರಿಯಾಗಿ ಗೊತ್ತಿಲ್ಲದಿರುವುದು ವಿಷಾದನೀಯ ಸಂಗತಿ ಎಂದು ಶನಿವಾರ ತಿಳಿಸಿದ್ದಾರೆ.</p><p>ಯತ್ನಾಳ ಅವರು ಬಸವ ಪ್ರಜ್ಞೆಯನ್ನು ಬೆಳೆಸಿಕೊಂಡು ಬಸವಣ್ಣನವರ ನಿಜವಾದ ಚರಿತ್ರೆಯ ಅಧ್ಯಯನ ಮಾಡಬೇಕು. ಬಸವಣ್ಣನವರ ಕುರಿತು ಇಲ್ಲಸಲ್ಲದ ಮಾತುಗಳನ್ನು ಆಡಿ ಜನರ ಭಾವನೆಗೆ ಧಕ್ಕೆ ಉಂಟು ಮಾಡಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>‘ಬಸವಣ್ಣನವರಂತೆ ಹೊಳ್ಯಾಗ ಜಿಗಿಬೇಕು, ಇಲ್ಲವಾದರೆ ಸಾಬ್ರು ಆಗಿ’ ಎಂದು ಯತ್ನಾಳ ಅವರು ನವೆಂಬರ್ 25ರಂದು ಬೀದರ್ನಲ್ಲಿ ಹಮ್ಮಿಕೊಂಡಿದ್ದ ವಕ್ಫ್ ವಿರೋಧಿ ಪ್ರತಿಭಟನಾ ಸಭೆಯಲ್ಲಿ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>