<p><strong>ಬೀದರ್:</strong> ಒಂದುವರೆ ವರ್ಷದ ಹಿಂದೆ ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ನಾಗರಿಕ ವಿಮಾನಯಾನ ಸೇವೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಗರದ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಜೆ ಕೇಕ್ ಕತ್ತರಿಸಿ ಚಾಲನೆ ನೀಡಿದರು.</p><p>ಏ. 17ರಂದು ಬೀದರ್ ನಿಂದ ಬೆಂಗಳೂರಿಗೆ ಪಯಣ ಬೆಳೆಸಲಿರುವ ಐದು ಜನರಿಗೆ ಬೋರ್ಡಿಂಗ್ ಪಾಸ್ ವಿತರಿಸಿ, ವಿದ್ಯುಕ್ತವಾಗಿ ಹಸಿರು ನಿಶಾನೆ ತೋರಿದರು.</p><p>ಸ್ಟಾರ್ ಏರ್ ವಿಮಾನವು ಪ್ರತಿದಿನ ಬೆಳಿಗ್ಗೆ 7.30ಕ್ಕೆ ಬೆಂಗಳೂರಿನಿಂದ ಹೊರಟು, ಬೆಳಿಗ್ಗೆ 8.45ಕ್ಕೆ ಬೀದರ್ ತಲುಪಲಿದೆ. ಅದೇ ದಿನ ಬೆಳಿಗ್ಗೆ 9.10ಕ್ಕೆ ಬೀದರ್ ನಿಂದ ಹೊರಟು ಬೆಳಿಗ್ಗೆ 10.25ಕ್ಕೆ ಬೆಂಗಳೂರು ಸೇರಲಿದೆ. </p><p>ಈಶ್ವರ ಬಿ. ಖಂಡ್ರೆ ಮಾತನಾಡಿ, ಕೇಂದ್ರ ಸಹಾಯ ಧನ ಸ್ಥಗಿತಗೊಳಿಸಿತ್ತು. ಡಬಲ್ ಎಂಜಿನ್ ಸರ್ಕಾರ ಇದ್ದರೂ ಏನೂ ಮಾಡಿರಲಿಲ್ಲ. ನಮ್ಮ ಸರ್ಕಾರ ವಿಮಾನಯಾನ ಸೇವೆ ಆರಂಭಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ₹14 ಕೋಟಿ ಮೀಸಲಿಡಲಾಗಿದೆ ಎಂದರು. ಮುಖ್ಯಮಂತ್ರಿ ಸೇರಿದಂತೆ ಬೇರೆ ಯಾರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿಲ್ಲ. </p><p>ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವರಾದ ಈಶ್ವರ ಬಿ. ಖಂಡ್ರೆ, ರಹೀಂ ಖಾನ್, ಎಂ.ಸಿ. ಸುಧಾಕರ್ , ರಾಮಲಿಂಗಾರೆಡ್ಡಿ, ಸಂಸದ ಸಾಗರ್ ಖಂಡ್ರೆ, ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ,</p><p>ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಬುಡಾ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಒಂದುವರೆ ವರ್ಷದ ಹಿಂದೆ ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ನಾಗರಿಕ ವಿಮಾನಯಾನ ಸೇವೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಗರದ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಜೆ ಕೇಕ್ ಕತ್ತರಿಸಿ ಚಾಲನೆ ನೀಡಿದರು.</p><p>ಏ. 17ರಂದು ಬೀದರ್ ನಿಂದ ಬೆಂಗಳೂರಿಗೆ ಪಯಣ ಬೆಳೆಸಲಿರುವ ಐದು ಜನರಿಗೆ ಬೋರ್ಡಿಂಗ್ ಪಾಸ್ ವಿತರಿಸಿ, ವಿದ್ಯುಕ್ತವಾಗಿ ಹಸಿರು ನಿಶಾನೆ ತೋರಿದರು.</p><p>ಸ್ಟಾರ್ ಏರ್ ವಿಮಾನವು ಪ್ರತಿದಿನ ಬೆಳಿಗ್ಗೆ 7.30ಕ್ಕೆ ಬೆಂಗಳೂರಿನಿಂದ ಹೊರಟು, ಬೆಳಿಗ್ಗೆ 8.45ಕ್ಕೆ ಬೀದರ್ ತಲುಪಲಿದೆ. ಅದೇ ದಿನ ಬೆಳಿಗ್ಗೆ 9.10ಕ್ಕೆ ಬೀದರ್ ನಿಂದ ಹೊರಟು ಬೆಳಿಗ್ಗೆ 10.25ಕ್ಕೆ ಬೆಂಗಳೂರು ಸೇರಲಿದೆ. </p><p>ಈಶ್ವರ ಬಿ. ಖಂಡ್ರೆ ಮಾತನಾಡಿ, ಕೇಂದ್ರ ಸಹಾಯ ಧನ ಸ್ಥಗಿತಗೊಳಿಸಿತ್ತು. ಡಬಲ್ ಎಂಜಿನ್ ಸರ್ಕಾರ ಇದ್ದರೂ ಏನೂ ಮಾಡಿರಲಿಲ್ಲ. ನಮ್ಮ ಸರ್ಕಾರ ವಿಮಾನಯಾನ ಸೇವೆ ಆರಂಭಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ₹14 ಕೋಟಿ ಮೀಸಲಿಡಲಾಗಿದೆ ಎಂದರು. ಮುಖ್ಯಮಂತ್ರಿ ಸೇರಿದಂತೆ ಬೇರೆ ಯಾರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿಲ್ಲ. </p><p>ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವರಾದ ಈಶ್ವರ ಬಿ. ಖಂಡ್ರೆ, ರಹೀಂ ಖಾನ್, ಎಂ.ಸಿ. ಸುಧಾಕರ್ , ರಾಮಲಿಂಗಾರೆಡ್ಡಿ, ಸಂಸದ ಸಾಗರ್ ಖಂಡ್ರೆ, ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ,</p><p>ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಬುಡಾ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>