<p>ಭಾಲ್ಕಿ: ತಾಲ್ಲೂಕಿನ ಭಾತಂಬ್ರಾ ಗ್ರಾಮದ ಸರ್ಕಾರಿ ಆಸ್ಪತ್ರೆ ಸಮೀಪದ ಮುಖ್ಯ ರಸ್ತೆಯಲ್ಲಿ ಬಸವ ಜಯಂತಿ ಹಿನ್ನೆಲೆಯಲ್ಲಿ ನಿರ್ಮಿಸಿದ್ದ ಬಸವೇಶ್ವರ ಕಟ್ಟೆಯನ್ನು ತಾಲ್ಲೂಕು ಆಡಳಿತ ತೆರವು ಗೊಳಿಸಿರುವುದನ್ನು ಖಂಡಿಸಿ ಬಸವ ಭಕ್ತರು ಶುಕ್ರವಾರ ತಡ ರಾತ್ರಿವರೆಗೆ ಪ್ರತಿಭಟನೆ ನಡೆಸಿದರು.</p>.<p>ನಂತರ ಪೊಲೀಸ್ ಅಧಿಕಾರಿಗಳು, ತಾಲ್ಲೂಕು ಆಡಳಿತ ಅಧಿಕಾರಿಗಳ ಮನವೊಲಿಕೆಯ ನಂತರ ಪ್ರತಿಭಟನೆಯನ್ನು ಹಿಂಪಡೆದಿದ್ದರು.</p>.<p>ಸ್ಥಳ ಅತಿಕ್ರಮಣ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ನೀಡಿರುವ ದೂರಿನ ಮೇರೆಗೆ ಒಟ್ಟು ನಾಲ್ಕು ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಪರಿಸ್ಥಿತಿಯ ಮೇಲೆ ನಿಗಾ ಇಡಲು ಸದ್ಯ ಗ್ರಾಮದಲ್ಲಿ ಸ್ಥಳೀಯ ಪೊಲೀಸ್ ಸಿಬ್ಬಂದಿ, ಒಂದು ಡಿ.ಆರ್. ವ್ಯಾನ್ ಇದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-33-1858144564</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ತಾಲ್ಲೂಕಿನ ಭಾತಂಬ್ರಾ ಗ್ರಾಮದ ಸರ್ಕಾರಿ ಆಸ್ಪತ್ರೆ ಸಮೀಪದ ಮುಖ್ಯ ರಸ್ತೆಯಲ್ಲಿ ಬಸವ ಜಯಂತಿ ಹಿನ್ನೆಲೆಯಲ್ಲಿ ನಿರ್ಮಿಸಿದ್ದ ಬಸವೇಶ್ವರ ಕಟ್ಟೆಯನ್ನು ತಾಲ್ಲೂಕು ಆಡಳಿತ ತೆರವು ಗೊಳಿಸಿರುವುದನ್ನು ಖಂಡಿಸಿ ಬಸವ ಭಕ್ತರು ಶುಕ್ರವಾರ ತಡ ರಾತ್ರಿವರೆಗೆ ಪ್ರತಿಭಟನೆ ನಡೆಸಿದರು.</p>.<p>ನಂತರ ಪೊಲೀಸ್ ಅಧಿಕಾರಿಗಳು, ತಾಲ್ಲೂಕು ಆಡಳಿತ ಅಧಿಕಾರಿಗಳ ಮನವೊಲಿಕೆಯ ನಂತರ ಪ್ರತಿಭಟನೆಯನ್ನು ಹಿಂಪಡೆದಿದ್ದರು.</p>.<p>ಸ್ಥಳ ಅತಿಕ್ರಮಣ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ನೀಡಿರುವ ದೂರಿನ ಮೇರೆಗೆ ಒಟ್ಟು ನಾಲ್ಕು ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಪರಿಸ್ಥಿತಿಯ ಮೇಲೆ ನಿಗಾ ಇಡಲು ಸದ್ಯ ಗ್ರಾಮದಲ್ಲಿ ಸ್ಥಳೀಯ ಪೊಲೀಸ್ ಸಿಬ್ಬಂದಿ, ಒಂದು ಡಿ.ಆರ್. ವ್ಯಾನ್ ಇದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-33-1858144564</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>