<p><strong>ಬೀದರ್:</strong> ರಾಷ್ಟ್ರೀಯ ಬಸವ ದಳ ಬೀದರ್, ಲಿಂಗಾಯತ ಸಮಾಜ ಮತ್ತು ಬಸವ ಮಂಟಪದ ಆಶ್ರಯದಲ್ಲಿ ಮಾಸಿಕ ಬಸವಜ್ಯೋತಿ, ಬುದ್ಧ–ಬಸವ–ಅಂಬೇಡ್ಕರ್ ಜಯಂತಿ ಸಮಾರಂಭವನ್ನು ನಗರದ ಮೈಲೂರಿನಲ್ಲಿ ಇತ್ತೀಚೆಗೆ ಆಚರಿಸಲಾಯಿತು.</p>.<p>ಮನೋಹರ ಘಾಳೆಪ್ಪ ಮಾತನಾಡಿ, ಬುದ್ಧನ ಅಹಿಂಸೆ, ಕರುಣೆ ಮತ್ತು ಮಾನವೀಯತೆ ಸಮಾಜದಲ್ಲಿ ಶಾಂತಿ ಮತ್ತು ಸಹಬಾಳ್ವೆಗೆ ಮಾರ್ಗದರ್ಶಕ. ಬಸವಣ್ಣನ ‘ಕಾಯಕವೇ ಕೈಲಾಸ’ ಮತ್ತು ‘ದಾಸೋಹ’ ತತ್ವಗಳು ಶ್ರಮಕ್ಕೆ ಗೌರವ, ಸಮಾನತೆ ಮತ್ತು ವರ್ಣವ್ಯವಸ್ಥೆಯ ವಿರೋಧವನ್ನು ಸಾರುತ್ತವೆ ಎಂದು ಹೇಳಿದರು.</p>.<p>ಅಂಬೇಡ್ಕರ್ ಅವರ ಸಂವಿಧಾನಿಕ ಮೌಲ್ಯಗಳು ಸಮಾನ ಹಕ್ಕು, ಶಿಕ್ಷಣದ ಮಹತ್ವ ಮತ್ತು ಸಾಮಾಜಿಕ ನ್ಯಾಯವನ್ನು ಸ್ಥಾಪಿಸಲು ಮುಖ್ಯವಾಗಿವೆ. ಈ ಮೂವರ ಚಿಂತನೆಗಳನ್ನು ತತ್ವಗಳಾಗಿ ಒಗ್ಗೂಡಿಸಿ, ಇಂದಿನ ಸಮಾಜದಲ್ಲಿ ಜಾತಿ-ಮತ ಭೇದವಿಲ್ಲದೆ ಸಮಾನತೆ, ಮಹಿಳಾ ಸಬಲೀಕರಣ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು.</p>.<p>ಬಸವಾನಂದ ಗಡ್ಡೆ ವಚನ ಗಾಯನ, ಪ್ರಾರ್ಥನೆ ಮತ್ತು ಸ್ವಾಗತ ನಡೆಸಿಕೊಟ್ಟರು. ಬಸವರಾಜ ಬಿರಾದಾರ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-33-1480503020</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ರಾಷ್ಟ್ರೀಯ ಬಸವ ದಳ ಬೀದರ್, ಲಿಂಗಾಯತ ಸಮಾಜ ಮತ್ತು ಬಸವ ಮಂಟಪದ ಆಶ್ರಯದಲ್ಲಿ ಮಾಸಿಕ ಬಸವಜ್ಯೋತಿ, ಬುದ್ಧ–ಬಸವ–ಅಂಬೇಡ್ಕರ್ ಜಯಂತಿ ಸಮಾರಂಭವನ್ನು ನಗರದ ಮೈಲೂರಿನಲ್ಲಿ ಇತ್ತೀಚೆಗೆ ಆಚರಿಸಲಾಯಿತು.</p>.<p>ಮನೋಹರ ಘಾಳೆಪ್ಪ ಮಾತನಾಡಿ, ಬುದ್ಧನ ಅಹಿಂಸೆ, ಕರುಣೆ ಮತ್ತು ಮಾನವೀಯತೆ ಸಮಾಜದಲ್ಲಿ ಶಾಂತಿ ಮತ್ತು ಸಹಬಾಳ್ವೆಗೆ ಮಾರ್ಗದರ್ಶಕ. ಬಸವಣ್ಣನ ‘ಕಾಯಕವೇ ಕೈಲಾಸ’ ಮತ್ತು ‘ದಾಸೋಹ’ ತತ್ವಗಳು ಶ್ರಮಕ್ಕೆ ಗೌರವ, ಸಮಾನತೆ ಮತ್ತು ವರ್ಣವ್ಯವಸ್ಥೆಯ ವಿರೋಧವನ್ನು ಸಾರುತ್ತವೆ ಎಂದು ಹೇಳಿದರು.</p>.<p>ಅಂಬೇಡ್ಕರ್ ಅವರ ಸಂವಿಧಾನಿಕ ಮೌಲ್ಯಗಳು ಸಮಾನ ಹಕ್ಕು, ಶಿಕ್ಷಣದ ಮಹತ್ವ ಮತ್ತು ಸಾಮಾಜಿಕ ನ್ಯಾಯವನ್ನು ಸ್ಥಾಪಿಸಲು ಮುಖ್ಯವಾಗಿವೆ. ಈ ಮೂವರ ಚಿಂತನೆಗಳನ್ನು ತತ್ವಗಳಾಗಿ ಒಗ್ಗೂಡಿಸಿ, ಇಂದಿನ ಸಮಾಜದಲ್ಲಿ ಜಾತಿ-ಮತ ಭೇದವಿಲ್ಲದೆ ಸಮಾನತೆ, ಮಹಿಳಾ ಸಬಲೀಕರಣ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು.</p>.<p>ಬಸವಾನಂದ ಗಡ್ಡೆ ವಚನ ಗಾಯನ, ಪ್ರಾರ್ಥನೆ ಮತ್ತು ಸ್ವಾಗತ ನಡೆಸಿಕೊಟ್ಟರು. ಬಸವರಾಜ ಬಿರಾದಾರ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-33-1480503020</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>