ಮಕ್ಕಳ ವಿಜ್ಞಾನ ಹಬ್ಬದ ರಾಜ್ಯ ಸಂಪನ್ಮೂಲ ವ್ಯಕ್ತಿ ಎಂ.ಎಸ್.ಮನೋಹರ ಮಾತನಾಡಿ, ‘ಸಮಾಜದಲ್ಲಿ ರೂಢಿಯಲ್ಲಿರುವ ಮೂಢ ನಂಬಿಕೆಗಳ ಬಗ್ಗೆ ಮಕ್ಕಳಿಗೆ ಮನವರಿಕೆ ಮಾಡಿಸಿ ಅವರಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸಲು ಮಕ್ಕಳ ವಿಜ್ಞಾನ ಹಬ್ಬ ನೆರವಾಗಲಿದೆ’ ಎಂದು ಹೇಳಿದರು.
ಭಾರತ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಗೌರವಾಧ್ಯಕ್ಷ ಚಂದ್ರಪ್ಪ ಹೆಬ್ಬಾಳಕರ್, ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಕಲಾಲ್ ದೇವಿಪ್ರಸಾದ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಮಹೇಶ ಗೋರನಾಳಕರ್, ಕಲಾವಿದರಾದ ಶೇಷಪ್ಪ ಚಿಟ್ಟಾ, ಶಂಭುಲಿಂಗ ವಾಲ್ದೊಡ್ಡಿ, ಶ್ರೀನಿವಾಸ ಬಾಳೂವಾಲೆ, ಬಿಂದುಸಾರ್ ಧನ್ನೂರ, ಸೈಯದ್ ಇಮ್ರಾನ್, ಸೂರ್ಯಕಾಂತ ಮೊರೆ, ಗೌರಿಶಂಕರ ಪರ್ತಾಪೂರೆ, ಕಸ್ತೂರಿ ಪಟಪಳ್ಳಿ, ಜಗದೇವಿ ಭೋಸ್ಲೆ, ವಿಜಯಲಕ್ಷ್ಮಿ, ಶಿಲ್ಪಾ ಮಾಳಗೆ, ರೋಹಿತ್, ನಿವೇದಿತಾ ಇದ್ದರು.