<p>ಬೀದರ್: ಬೀದರ್ನಿಂದ ನಾಗರಿಕ ವಿಮಾನಯಾನ ಸೇವೆಯನ್ನು ಯಾವುದೇ ರೀತಿಯ ತೊಡಕಿಲ್ಲದಂತೆ ಮುಂದುವರಿಸಬೇಕು. ಹೊಸ ಮಾರ್ಗಗಳನ್ನು ಸೇರಿಸಲು ಸಂಬಂಧಿಸಿದ ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕು ಎಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಆಗ್ರಹಿಸಿದೆ.</p>.<p>ಈ ಸಂಬಂಧ ಸಂಸ್ಥೆಯ ಅಧ್ಯಕ್ಷ ಬಿ.ಜಿ.ಶೆಟಕಾರ್, ಕಾರ್ಯದರ್ಶಿ ವೀರೇಂದ್ರ ಶಾಸ್ತ್ರಿ ಅವರು ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.</p>.<p>ಬೀದರ್–ಬೆಂಗಳೂರು ನಡುವೆ ಸಂಚರಿಸುತ್ತಿದ್ದ ವಿಮಾನದಲ್ಲಿ ಮಾಸಿಕ 15 ಸಾವಿರಕ್ಕೂ ಅಧಿಕ ಜನ ಪ್ರಯಾಣ ಮಾಡಿದ್ದಾರೆ. 2024ಕ್ಕೆ ಹೋಲಿಸಿದರೆ 2025ನೇ ಸಾಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 60ರಷ್ಟು ಹೆಚ್ಚಾಗಿದೆ. ಒಪ್ಪಂದದ ಅವಧಿ ಮುಗಿದ ಹಿನ್ನೆಲೆಯಲ್ಲಿ ವಿಮಾನ ಸಂಚಾರ ನಿಂತು ಹೋಗಿದೆ. ಈ ವಿಷಯ ಗೊತ್ತಿದ್ದರೂ ಜಿಲ್ಲಾಡಳಿತ ತಯಾರಿ ಮಾಡಿಕೊಂಡಿರಲಿಲ್ಲ. ಪದೇ ಪದೇ ವಿಮಾನ ಸೇವೆ ಸ್ಥಗಿತಗೊಳ್ಳುತ್ತಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯ ಸಾಧಿಸಿ, ಅಗತ್ಯ ಅನುದಾನ ಬಿಡುಗಡೆಗೊಳಿಸಿ, ವಿಮಾನ ಸಂಚಾರ ಆರಂಭಿಸಬೇಕು. ಬೆಂಗಳೂರಿನೊಂದಿಗೆ ಚೆನ್ನೈ, ನವದೆಹಲಿ, ಮುಂಬೈ ಸೇರಿದಂತೆ ಇತರೆ ನಗರಗಳಿಗೂ ವಿಮಾನ ಸೇವೆ ವಿಸ್ತರಿಸಬೇಕು. ನಾಗರಿಕರು, ಉದ್ಯಮಿಗಳು ಹಾಗೂ ಪ್ರವಾಸಿಗರಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-33-1166872105</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಬೀದರ್ನಿಂದ ನಾಗರಿಕ ವಿಮಾನಯಾನ ಸೇವೆಯನ್ನು ಯಾವುದೇ ರೀತಿಯ ತೊಡಕಿಲ್ಲದಂತೆ ಮುಂದುವರಿಸಬೇಕು. ಹೊಸ ಮಾರ್ಗಗಳನ್ನು ಸೇರಿಸಲು ಸಂಬಂಧಿಸಿದ ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕು ಎಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಆಗ್ರಹಿಸಿದೆ.</p>.<p>ಈ ಸಂಬಂಧ ಸಂಸ್ಥೆಯ ಅಧ್ಯಕ್ಷ ಬಿ.ಜಿ.ಶೆಟಕಾರ್, ಕಾರ್ಯದರ್ಶಿ ವೀರೇಂದ್ರ ಶಾಸ್ತ್ರಿ ಅವರು ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.</p>.<p>ಬೀದರ್–ಬೆಂಗಳೂರು ನಡುವೆ ಸಂಚರಿಸುತ್ತಿದ್ದ ವಿಮಾನದಲ್ಲಿ ಮಾಸಿಕ 15 ಸಾವಿರಕ್ಕೂ ಅಧಿಕ ಜನ ಪ್ರಯಾಣ ಮಾಡಿದ್ದಾರೆ. 2024ಕ್ಕೆ ಹೋಲಿಸಿದರೆ 2025ನೇ ಸಾಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 60ರಷ್ಟು ಹೆಚ್ಚಾಗಿದೆ. ಒಪ್ಪಂದದ ಅವಧಿ ಮುಗಿದ ಹಿನ್ನೆಲೆಯಲ್ಲಿ ವಿಮಾನ ಸಂಚಾರ ನಿಂತು ಹೋಗಿದೆ. ಈ ವಿಷಯ ಗೊತ್ತಿದ್ದರೂ ಜಿಲ್ಲಾಡಳಿತ ತಯಾರಿ ಮಾಡಿಕೊಂಡಿರಲಿಲ್ಲ. ಪದೇ ಪದೇ ವಿಮಾನ ಸೇವೆ ಸ್ಥಗಿತಗೊಳ್ಳುತ್ತಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯ ಸಾಧಿಸಿ, ಅಗತ್ಯ ಅನುದಾನ ಬಿಡುಗಡೆಗೊಳಿಸಿ, ವಿಮಾನ ಸಂಚಾರ ಆರಂಭಿಸಬೇಕು. ಬೆಂಗಳೂರಿನೊಂದಿಗೆ ಚೆನ್ನೈ, ನವದೆಹಲಿ, ಮುಂಬೈ ಸೇರಿದಂತೆ ಇತರೆ ನಗರಗಳಿಗೂ ವಿಮಾನ ಸೇವೆ ವಿಸ್ತರಿಸಬೇಕು. ನಾಗರಿಕರು, ಉದ್ಯಮಿಗಳು ಹಾಗೂ ಪ್ರವಾಸಿಗರಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-33-1166872105</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>