ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ನಿಯಮ ಸಡಿಲಿಸಲು ಆಗ್ರಹ

ಚಿಟಗುಪ್ಪ: ನಾಗರಿಕ ಸಮಿತಿ ಪದಾಧಿಕಾರಿಗಳಿಂದ ಪ್ರತಿಭಟನೆ
Last Updated 10 ಜೂನ್ 2020, 10:59 IST
ಅಕ್ಷರ ಗಾತ್ರ

ಚಿಟಗುಪ್ಪ: ಪಟ್ಟಣದಲ್ಲಿ ಕೊವೀಡ್–19 ನಿರ್ಬಂಧ ಸಡಿಲಿಸಬೇಕು ಎಂದು ಆಗ್ರಹಿಸಿ ನಾಗರಿಕ ಸಮಿತಿ ಪದಾಧಿಕಾರಿಗಳು ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

‘ಕಳೆದ ಎರಡು ತಿಂಗಳುಗಳಿಂದ ತಾಲ್ಲೂಕು ಆಡಳಿತ ಬೆಳಿಗ್ಗೆ 7 ಗಂಟೆಯಿಂದ 11 ಗಂಟೆಯ ವರೆಗೆ ನಾಗರಿಕರಿಗೆ ದಿನಸಿ, ಹಾಲು ಖರೀದಿಸಲು ಅವಕಾಶ ನೀಡಿದೆ. ಜನದಟ್ಟಣೆ ಹೆಚ್ಚಾಗಿ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ. ನಾಗರಿಕರು ಮಾಸ್ಕ್ ಧರಿಸುತ್ತಿಲ್ಲ. ಹೀಗಾಗಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಉದ್ಯೋಗಿಗಳು, ಅಂಗಡಿ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಸದ್ಯಕ್ಕೆ ಕೇಂದ್ರ ಸರ್ಕಾರ ದೇಶದ ಎಲ್ಲೆಡೆ ನಿರ್ಬಂಧ ಸಡಿಲಿಸಿದೆ. ಪಟ್ಟಣದಲ್ಲೂ ಸಂಜೆಯವರೆಗೂ ವ್ಯಾಪಾರ ನಡೆಸಲು ಅವ ಕಾಶ ಕೊಡಬೇಕು ಎಂದು ಪುರಸಭೆ ಸದಸ್ಯ ದಿಲೀಪಕುಮಾರ ಬಗ್ದಲಕರ್, ಮಾಜಿ ಸದಸ್ಯ ಮಲ್ಲಿಕಾರ್ಜುನ ಪಾಟೀಲ ಅವರು ಆಗ್ರಹಿಸಿದರು.

ತಹಶೀಲ್ದಾರ್ ಜಿಯಾವುಲ್ಲ ಮನವಿ ಪತ್ರ ಸ್ವಿಕರಿಸಿ ಮಾತನಾಡಿ,‘ಮೇಲಾಧಿಕಾರಿಗಳ ಗಮನಕ್ಕೆ ತಂದು ವಸ್ತುಸ್ಥಿತಿ ಕುರಿತು ಚರ್ಚೆ ನಡೆಸಲಾಗುವುದು. ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಪಟ್ಟಣದ ಗಾಂಧಿ ಚೌಕ್‌ನಿಂದ ತಹಶೀಲ್ದಾರ್‌ ಕಚೇರಿ ವರೆಗೂ ಮೆರವಣಿಗೆ ನಡೆಸಲಾಯಿತು. ಮುಜಾಫರ್ ಪಟೇಲ್, ಸುಭಾಷ ಕುಂಬಾರ, ಬಾಬಾ,ನಸೀರ್‍ಖಾನ್, ಶಾಮ್, ರೇವಣಪ್ಪ ಹಾಗೂ ಸಚಿನ್ ಮಠಪತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT