<p><strong>ಬೀದರ್:</strong> ರಾಜ್ಯ ಬಜೆಟ್ನಲ್ಲಿ ಪರಿಶಿಷ್ಟರಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಬೀದರ್ ಜಿಲ್ಲಾ ಘಟಕ ಆಗ್ರಹಿಸಿದೆ.</p>.<p>ಈ ಸಂಬಂಧ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಸಲ್ಲಿಸಿ ಒತ್ತಾಯಿಸಿದೆ.</p>.<p>ದೇಶಕ್ಕೆ ಸ್ವಾತಂತ್ರ್ಯ ಬಂದು 75ಕ್ಕೂ ಹೆಚ್ಚು ವರ್ಷಗಳಾಗಿವೆ. ಆದರೆ ಪರಿಶಿಷ್ಟರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಇನ್ನೂ ಬೆಳೆದಿಲ್ಲ. ಹಲವು ಸರ್ಕಾರಗಳು ಅಧಿಕಾರಕ್ಕೆ ಬಂದರೂ ನಮ್ಮ ಸಮುದಾಯದ ಅಭಿವೃದ್ಧಿ ಅಷ್ಟಕಷ್ಟೇ. ಇತ್ತೀಚೆಗೆ ಅನುದಾನ ಮೀಸಲಿಟ್ಟು ಅದನ್ನು ಸರ್ಕಾರದ ವಿವಿಧ ಇಲಾಖೆಗಳ ಹಾಗೂ ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಂಡು ನಮ್ಮ ಸಮುದಾಯಕ್ಕೆ ಸರ್ಕಾರ ಮಣ್ಣೆರೆಚ್ಚುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.</p>.<p>ನಮ್ಮ ಸಮುದಾಯದ ಅಭಿವೃದ್ಧಿ ಮಾಡುವುದಾಗಿ ಬಾಬಾ ಸಾಹೇಬರು ಮತ್ತು ಸಂವಿಧಾನದ ಹೆಸರಲ್ಲಿ ಮತ ಪಡೆದ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ ಕಳೆದರೂ ಸಮುದಾಯದ ಕಡೆಗೆ ತಿರುಗಿಯೂ ನೋಡದಿರುವುದು ನಾಚಿಕೆಗೇಡಿನ ಸಂಗತಿ. ಈ ಸಲದ ಬಜೆಟ್ನಲ್ಲಿ ಶೇ30ರಷ್ಟು ಅನುದಾನ ಮೀಸಲಿಡಬೇಕು. ಮೂರು ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳಿಗೆ ಬಳಸಿದ ಅನುದಾನ ಸಮುದಾಯದ ಏಳಿಗೆಗೆ ಪೂರ್ಣ ಪ್ರಮಾಣದಲ್ಲಿ ಹಿಂತಿರುಗಿಸಬೇಕು. ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ನಡೆಯುವ ಮೆಟ್ರಿಕ್ ಪೂರ್ವ/ ನಂತರದ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯಕ್ಕೆ ಹೆಚ್ಚಿನ ಅನುದಾನ ಕಲ್ಪಿಸಬೇಕು. ವಿದ್ಯಾರ್ಥಿ ನಿಲಯಗಳ ಗ್ರಂಥಾಲಯಗಳನ್ನು ಡಿಜಿಟಲೀಕರಣಗೊಳಿಸಿ ಇಬ್ಬರು ವಿದ್ಯಾರ್ಥಿಗಳಿಗೆ ಒಂದರಂತೆ ಕಂಪ್ಯೂಟರ್ ಗಳನ್ನು ಒದಗಿಸಬೇಕು. ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳ ಊಟದ ವೆಚ್ಚವನ್ನು ₹2,500ಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿದೆ.<br /><br /> ಪರಿಷತ್ ಜಿಲ್ಲಾ ಸಂಚಾಲಕ ಸಂದೀಪ್ ಕಾಂಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಮಾಲೆ, ಮಹೇಂದ್ರಕುಮಾರ್ ಹೊಸಮನಿ, ಜನಾರ್ದನ ದೀನೆ, ಸಾಯಿ ಕೌರವ್ ಸೇರಿದಂತೆ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ರಾಜ್ಯ ಬಜೆಟ್ನಲ್ಲಿ ಪರಿಶಿಷ್ಟರಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಬೀದರ್ ಜಿಲ್ಲಾ ಘಟಕ ಆಗ್ರಹಿಸಿದೆ.</p>.<p>ಈ ಸಂಬಂಧ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಸಲ್ಲಿಸಿ ಒತ್ತಾಯಿಸಿದೆ.</p>.<p>ದೇಶಕ್ಕೆ ಸ್ವಾತಂತ್ರ್ಯ ಬಂದು 75ಕ್ಕೂ ಹೆಚ್ಚು ವರ್ಷಗಳಾಗಿವೆ. ಆದರೆ ಪರಿಶಿಷ್ಟರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಇನ್ನೂ ಬೆಳೆದಿಲ್ಲ. ಹಲವು ಸರ್ಕಾರಗಳು ಅಧಿಕಾರಕ್ಕೆ ಬಂದರೂ ನಮ್ಮ ಸಮುದಾಯದ ಅಭಿವೃದ್ಧಿ ಅಷ್ಟಕಷ್ಟೇ. ಇತ್ತೀಚೆಗೆ ಅನುದಾನ ಮೀಸಲಿಟ್ಟು ಅದನ್ನು ಸರ್ಕಾರದ ವಿವಿಧ ಇಲಾಖೆಗಳ ಹಾಗೂ ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಂಡು ನಮ್ಮ ಸಮುದಾಯಕ್ಕೆ ಸರ್ಕಾರ ಮಣ್ಣೆರೆಚ್ಚುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.</p>.<p>ನಮ್ಮ ಸಮುದಾಯದ ಅಭಿವೃದ್ಧಿ ಮಾಡುವುದಾಗಿ ಬಾಬಾ ಸಾಹೇಬರು ಮತ್ತು ಸಂವಿಧಾನದ ಹೆಸರಲ್ಲಿ ಮತ ಪಡೆದ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ ಕಳೆದರೂ ಸಮುದಾಯದ ಕಡೆಗೆ ತಿರುಗಿಯೂ ನೋಡದಿರುವುದು ನಾಚಿಕೆಗೇಡಿನ ಸಂಗತಿ. ಈ ಸಲದ ಬಜೆಟ್ನಲ್ಲಿ ಶೇ30ರಷ್ಟು ಅನುದಾನ ಮೀಸಲಿಡಬೇಕು. ಮೂರು ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳಿಗೆ ಬಳಸಿದ ಅನುದಾನ ಸಮುದಾಯದ ಏಳಿಗೆಗೆ ಪೂರ್ಣ ಪ್ರಮಾಣದಲ್ಲಿ ಹಿಂತಿರುಗಿಸಬೇಕು. ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ನಡೆಯುವ ಮೆಟ್ರಿಕ್ ಪೂರ್ವ/ ನಂತರದ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯಕ್ಕೆ ಹೆಚ್ಚಿನ ಅನುದಾನ ಕಲ್ಪಿಸಬೇಕು. ವಿದ್ಯಾರ್ಥಿ ನಿಲಯಗಳ ಗ್ರಂಥಾಲಯಗಳನ್ನು ಡಿಜಿಟಲೀಕರಣಗೊಳಿಸಿ ಇಬ್ಬರು ವಿದ್ಯಾರ್ಥಿಗಳಿಗೆ ಒಂದರಂತೆ ಕಂಪ್ಯೂಟರ್ ಗಳನ್ನು ಒದಗಿಸಬೇಕು. ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳ ಊಟದ ವೆಚ್ಚವನ್ನು ₹2,500ಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿದೆ.<br /><br /> ಪರಿಷತ್ ಜಿಲ್ಲಾ ಸಂಚಾಲಕ ಸಂದೀಪ್ ಕಾಂಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಮಾಲೆ, ಮಹೇಂದ್ರಕುಮಾರ್ ಹೊಸಮನಿ, ಜನಾರ್ದನ ದೀನೆ, ಸಾಯಿ ಕೌರವ್ ಸೇರಿದಂತೆ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>