<p><strong>ಬೀದರ್</strong>: ‘ದಾಸರು ಅಜ್ಞಾನ ಮತ್ತು ಅಂಧಕಾರದಿಂದ ಬಳಲುತ್ತಿರುವ ಜನಸಾಮಾನ್ಯರಿಗೆ ಅವರ ಆಡುಭಾಷೆಯಲ್ಲೇ ಭಕ್ತಿ ಮಾರ್ಗ ತೋರಿಸಿದ್ದಾರೆ’ ಎಂದು ಅಹಿಲ್ಯಾಬಾಯಿ ಹೊಳ್ಕರ್ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಸೈಯದ್ ಸಲಾವುದ್ದೀನ್ ತಿಳಿಸಿದರು.</p>.<p>ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಅಹಿಲ್ಯಾಬಾಯಿ ಹೊಳ್ಕರ ಪ್ರೌಢ ಶಾಲೆಯ ಆವರಣದಲ್ಲಿ ಶಿವರಾತ್ರಿ ನಿಮಿತ್ತ ಏರ್ಪಡಿಸಿದ್ದ ‘ಹರಿದಾಸರ ದಾಸ ಸಾಹಿತ್ಯ ಸೌರಭ್ಯ ಮಾಲಿಕೆಯ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ದಾಸರು ಸಾತ್ವಿಕ ವಿಚಾರಗಳಿಂದ ಲೋಕದ ಡೊಂಕನ್ನು ತಿದ್ದಿದ್ದಾರೆ. ಅದಕ್ಕಾಗಿ ಜನರಾಡುವ ಭಾಷೆಯಲ್ಲಿ ಸಾಹಿತ್ಯ ರಚಿಸಿದ್ದಾರೆ ಎಂದರು.</p>.<p>ಸಾಹಿತಿ ಸುನೀತಾ ಕೂಡ್ಲಿಕರ್ ಮಾತನಾಡಿ, ಹರಿದಾಸರು ಶಿವ ಭಕ್ತಿ ಪಾರಮ್ಯ ಮೆರೆದಿರುವುದು ವಿಶಿಷ್ಟ. ಅವರು ರುದ್ರದೇವರನ್ನು ಆಪ್ತ ದೇವರಾಗಿ ಸ್ತುತಿಸಿದ್ದಾರೆ. ಹರಿದಾಸರು ಶಿವ, ಮಹಾದೇವ, ಮಹಾರುದ್ರರ ಭಕ್ತಿ ಪರಾಕಾಷ್ಠೆಯನ್ನು ಅವರ ಕೀರ್ತನೆಗಳಲ್ಲಿ ಕಾಣಬಹುದು ಎಂದು ಹೇಳಿದರು.</p>.<p>ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷ ರವೀಂದ್ರ ಲಂಜವಾಡಕರ ಅಧ್ಯಕ್ಷತೆ ವಹಿಸಿ, ಹರಿದಾಸರು ಕನ್ನಡ ಸಾಹಿತ್ಯಕ್ಕೆ ಅಮೂಲ್ಯವಾದ ಕಾಣಿಕೆ ನೀಡಿದ್ದಾರೆ. ಹರಿದಾಸರ ತನು ಮನ ಶೋಧಿಸಿ ಬಾಳು ಬೆಳಗಿಸಿಕೊಳ್ಳುವ ಸಂದೇಶಗಳು ನಿರಂತರ ಪ್ರಚಾರ ಮಾಡಲಾಗುವುದು ಎಂದರು.</p>.<p>ವೈಜಿನಾಥ ಬಿರಾದಾರ ಅತಿಥಿಯಾಗಿ ಭಾಗವಹಿಸಿದ್ದರು. ಬಾಲಮ್ಮ ನಿರೂಪಿಸಿದರೆ, ರೋಹಿಣಿ ಸ್ವಾಗತಿಸಿದರೆ, ಪಲ್ಲವಿ ವಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ದಾಸರು ಅಜ್ಞಾನ ಮತ್ತು ಅಂಧಕಾರದಿಂದ ಬಳಲುತ್ತಿರುವ ಜನಸಾಮಾನ್ಯರಿಗೆ ಅವರ ಆಡುಭಾಷೆಯಲ್ಲೇ ಭಕ್ತಿ ಮಾರ್ಗ ತೋರಿಸಿದ್ದಾರೆ’ ಎಂದು ಅಹಿಲ್ಯಾಬಾಯಿ ಹೊಳ್ಕರ್ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಸೈಯದ್ ಸಲಾವುದ್ದೀನ್ ತಿಳಿಸಿದರು.</p>.<p>ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಅಹಿಲ್ಯಾಬಾಯಿ ಹೊಳ್ಕರ ಪ್ರೌಢ ಶಾಲೆಯ ಆವರಣದಲ್ಲಿ ಶಿವರಾತ್ರಿ ನಿಮಿತ್ತ ಏರ್ಪಡಿಸಿದ್ದ ‘ಹರಿದಾಸರ ದಾಸ ಸಾಹಿತ್ಯ ಸೌರಭ್ಯ ಮಾಲಿಕೆಯ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ದಾಸರು ಸಾತ್ವಿಕ ವಿಚಾರಗಳಿಂದ ಲೋಕದ ಡೊಂಕನ್ನು ತಿದ್ದಿದ್ದಾರೆ. ಅದಕ್ಕಾಗಿ ಜನರಾಡುವ ಭಾಷೆಯಲ್ಲಿ ಸಾಹಿತ್ಯ ರಚಿಸಿದ್ದಾರೆ ಎಂದರು.</p>.<p>ಸಾಹಿತಿ ಸುನೀತಾ ಕೂಡ್ಲಿಕರ್ ಮಾತನಾಡಿ, ಹರಿದಾಸರು ಶಿವ ಭಕ್ತಿ ಪಾರಮ್ಯ ಮೆರೆದಿರುವುದು ವಿಶಿಷ್ಟ. ಅವರು ರುದ್ರದೇವರನ್ನು ಆಪ್ತ ದೇವರಾಗಿ ಸ್ತುತಿಸಿದ್ದಾರೆ. ಹರಿದಾಸರು ಶಿವ, ಮಹಾದೇವ, ಮಹಾರುದ್ರರ ಭಕ್ತಿ ಪರಾಕಾಷ್ಠೆಯನ್ನು ಅವರ ಕೀರ್ತನೆಗಳಲ್ಲಿ ಕಾಣಬಹುದು ಎಂದು ಹೇಳಿದರು.</p>.<p>ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷ ರವೀಂದ್ರ ಲಂಜವಾಡಕರ ಅಧ್ಯಕ್ಷತೆ ವಹಿಸಿ, ಹರಿದಾಸರು ಕನ್ನಡ ಸಾಹಿತ್ಯಕ್ಕೆ ಅಮೂಲ್ಯವಾದ ಕಾಣಿಕೆ ನೀಡಿದ್ದಾರೆ. ಹರಿದಾಸರ ತನು ಮನ ಶೋಧಿಸಿ ಬಾಳು ಬೆಳಗಿಸಿಕೊಳ್ಳುವ ಸಂದೇಶಗಳು ನಿರಂತರ ಪ್ರಚಾರ ಮಾಡಲಾಗುವುದು ಎಂದರು.</p>.<p>ವೈಜಿನಾಥ ಬಿರಾದಾರ ಅತಿಥಿಯಾಗಿ ಭಾಗವಹಿಸಿದ್ದರು. ಬಾಲಮ್ಮ ನಿರೂಪಿಸಿದರೆ, ರೋಹಿಣಿ ಸ್ವಾಗತಿಸಿದರೆ, ಪಲ್ಲವಿ ವಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>