ಭೂ ಕಾಲುವೆ ಅಭಿವೃದ್ಧಿಗೆ ಅನುದಾನ ಕಲ್ಪಿಸಬೇಕು. ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ರೂ. 30 ಕೋಟಿ ನೆರವು ನೀಡಬೇಕು. ಔರಾದ್ ತಾಲ್ಲೂಕಿನಲ್ಲಿ ಸೋಲಾರ್ ವಿದ್ಯುತ್ ಘಟಕ ಸ್ಥಾಪಿಸಬೇಕು. ಗೋದಾವರಿ ಜಲಾನಯನ ಪ್ರದೇಶದಲ್ಲಿ ನಾಲ್ಕು ಬ್ರಿಜ್ ಕಂ ಬ್ಯಾರೇಜ್ ನಿರ್ಮಿಸಲು ಅನುದಾನ ಒದಗಿಸಬೇಕು. ಪೊಲೀಸರಿಗೆ ವಸತಿಗೃಹ, ಈಗಾಗಲೇ ಮಂಜೂರು ಮಾಡಲಾದ ಮಹಿಳಾ ಪೊಲೀಸ್ ತರಬೇತಿ ಕೇಂದ್ರದ ಕಟ್ಟಡ ನಿರ್ಮಾಣ, ಎನ್ಇಕೆಆರ್ಟಿಸಿ ಚಾಲಕ, ನಿರ್ವಾಹಕ ಹಾಗೂ ಇತರ ಸಿಬ್ಬಂದಿ ವಸತಿ ಗೃಹ ನಿರ್ಮಾಣಕ್ಕೆ ಅನುದಾನ ಕೊಡಬೇಕು. ಜಿಲ್ಲೆಯಲ್ಲಿ ರೇಷ್ಮೆ ಮಾರಾಟ ಹಾಗೂ ಖರೀದಿ ಕೇಂದ್ರ ಸ್ಥಾಪಿಸಬೇಕು. ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಸ್ಥಗಿತಗೊಳಿಸಲಾದ ಕ್ರೈಸ್ತ ಅಭಿವೃದ್ಧಿ ನಿಗಮ ಪ್ರಾರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.