<p><strong>ಬೀದರ್:</strong> ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ನಗರದ ಅಲಿಯಾಬಾದ್ ಸಮೀಪದ ‘ಕರೇಜ್’ಗೆ ಭೇಟಿ ನೀಡಿ ಪರಿಶೀಲಿಸಿದರು.</p><p>ಖಾಸಗಿಯವರು ಅಭಿವೃದ್ಧಿ ಕಾಮಗಾರಿಗೆ ನೆಲ ಅಗೆದಿರುವುದನ್ನು ಪರಿಶೀಲಿಸಿ ಮಾಹಿತಿ ಪಡೆದರು. ‘ಕರೇಜ್ ಮೌತ್’ ಹಾಗೂ ಅದರ ಸುತ್ತಮುತ್ತ ಯಾವುದೇ ಕಾಮಗಾರಿಗಳು ನಡೆಯದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p><p>ಕರೇಜ್ ಸಂರಕ್ಷಣೆಗೆ ಸಂಬಂಧಿಸಿದಂತೆ ಚರ್ಚಿಸಲು ಜಿಲ್ಲಾಧಿಕಾರಿ ಅವರು ಶುಕ್ರವಾರ (ಜ.16) ಸಭೆ ಕರೆದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರೂ ಆದ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯ್ ಕುಮಾರ್ ಮಾಳಗೆ ತಿಳಿಸಿದ್ದಾರೆ.</p><p>‘ನೆಲದಾಳದ ವಿಸ್ಮಯ ಮಾರ್ಗಕ್ಕೆ ಹಾನಿ’, ಕರೇಜ್ ಪರಿಧಿಯಲ್ಲಿ ಕಾಮಗಾರಿ ಅವ್ಯಾಹತ–ಜಿಲ್ಲಾಡಳಿತ ಮೌನ, ಶೀರ್ಷಿಕೆಯಡಿ ‘ಪ್ರಜಾವಾಣಿ’ ಬುಧವಾರ (ಜ.14) ವರದಿ ಪ್ರಕಟಿಸಿತ್ತು.</p>.ಬೀದರ್ | ‘ನೆಲದಾಳದ ವಿಸ್ಮಯ’ ಬಹಮನಿ ಅರಸರ ಕಾಲದ ಕರೇಜ್ ಮಾರ್ಗಕ್ಕೆ ಹಾನಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ನಗರದ ಅಲಿಯಾಬಾದ್ ಸಮೀಪದ ‘ಕರೇಜ್’ಗೆ ಭೇಟಿ ನೀಡಿ ಪರಿಶೀಲಿಸಿದರು.</p><p>ಖಾಸಗಿಯವರು ಅಭಿವೃದ್ಧಿ ಕಾಮಗಾರಿಗೆ ನೆಲ ಅಗೆದಿರುವುದನ್ನು ಪರಿಶೀಲಿಸಿ ಮಾಹಿತಿ ಪಡೆದರು. ‘ಕರೇಜ್ ಮೌತ್’ ಹಾಗೂ ಅದರ ಸುತ್ತಮುತ್ತ ಯಾವುದೇ ಕಾಮಗಾರಿಗಳು ನಡೆಯದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p><p>ಕರೇಜ್ ಸಂರಕ್ಷಣೆಗೆ ಸಂಬಂಧಿಸಿದಂತೆ ಚರ್ಚಿಸಲು ಜಿಲ್ಲಾಧಿಕಾರಿ ಅವರು ಶುಕ್ರವಾರ (ಜ.16) ಸಭೆ ಕರೆದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರೂ ಆದ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯ್ ಕುಮಾರ್ ಮಾಳಗೆ ತಿಳಿಸಿದ್ದಾರೆ.</p><p>‘ನೆಲದಾಳದ ವಿಸ್ಮಯ ಮಾರ್ಗಕ್ಕೆ ಹಾನಿ’, ಕರೇಜ್ ಪರಿಧಿಯಲ್ಲಿ ಕಾಮಗಾರಿ ಅವ್ಯಾಹತ–ಜಿಲ್ಲಾಡಳಿತ ಮೌನ, ಶೀರ್ಷಿಕೆಯಡಿ ‘ಪ್ರಜಾವಾಣಿ’ ಬುಧವಾರ (ಜ.14) ವರದಿ ಪ್ರಕಟಿಸಿತ್ತು.</p>.ಬೀದರ್ | ‘ನೆಲದಾಳದ ವಿಸ್ಮಯ’ ಬಹಮನಿ ಅರಸರ ಕಾಲದ ಕರೇಜ್ ಮಾರ್ಗಕ್ಕೆ ಹಾನಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>