ಭಾಲ್ಕಿ ತಾಲ್ಲೂಕಿನಲ್ಲಿ ವಸತಿ ಯೋಜನೆಯ ಮನೆಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದ ವಿವಾದ ದಿನಕ್ಕೊಂದು ಸ್ವರೂಪ ಪಡೆಯುತ್ತಿದೆ. ಎಚ್.ಆರ್.ಮಹಾದೇವ ಅವರು ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ನೀಡಿರುವ ವರದಿ ಹಾಗೂ ಭಾಲ್ಕಿಯ ಬಿಜೆಪಿ ಮುಖಂಡ ಡಿ.ಕೆ.ಸಿದ್ರಾಮ ಮಾಡಿರುವ ಆರೋಪವನ್ನು ಉಲ್ಲೇಖಿಸಿ ನೋಟಿಸ್ ಜಾರಿ ಮಾಡಿದ್ದರಿಂದ ಈಶ್ವರ ಖಂಡ್ರೆ ಅವರ ಕ್ರೋಧಕ್ಕೆ ಗುರಿಯಾಗಿದ್ದರು. ಮುಖ್ಯಮಂತ್ರಿ, ವಿಧಾನಸಭಾಧ್ಯಕ್ಷ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೂ ಲಿಖಿತ ದೂರು ನೀಡಿದ್ದರು.