ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಳು ಹೇಳುವುದೇ ಕಾಂಗ್ರೆಸ್‌ ಕೆಲಸ

ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಟೀಕೆ
Last Updated 2 ಜೂನ್ 2020, 13:37 IST
ಅಕ್ಷರ ಗಾತ್ರ

ಬೀದರ್‌: ‘ಜನರ ದಿಕ್ಕು ತಪ್ಪಿಸುವುದು ಹಾಗೂ ಸುಳ್ಳು ಹೇಳುವುದೇ ಕಾಂಗ್ರೆಸ್‌ನ ಕೆಲಸ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.

‘ರಾಜ್ಯದಲ್ಲಿ ಅತಿವೃಷ್ಟಿಯಿಂದ ತೀವ್ರ ನಷ್ಟ ಉಂಟಾಗಿದ್ದಕ್ಕೆ ಕೇಂದ್ರ ಸರ್ಕಾರ ಮೊದಲ ಕಂತಿನ ಪರಿಹಾರವಾಗಿ ₹ 1,200 ಕೋಟಿ ಹಾಗೂ ಎರಡನೇ ಕಂತಾಗಿ ₹ 1,869 ಕೋಟಿ ಒದಗಿಸಿದೆ. ಬೀದರ್‌ ಜಿಲ್ಲೆಗೆ ರಾಜ್ಯ ಸರ್ಕಾರ ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ₹ 6 ಕೋಟಿ ಬಿಡುಗಡೆ ಮಾಡಿದೆ’ ಎಂದು ಇಲ್ಲಿಯ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಮಂಗಳವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.

‘ಕೇಂದ್ರ ಸರ್ಕಾರ ಸಾಕಷ್ಟು ನೆರವು ಒದಗಿಸಿದರೂ ಕಾಂಗ್ರೆಸ್‌ ಮುಖಂಡರು ಸುಳ್ಳು ಹೇಳುವುದನ್ನು ನಿಲ್ಲಿಸಿಲ್ಲ’ ಎಂದು ಟೀಕಿಸಿದರು.

‘ಕೋವಿಡ್ 19 ನಿಯಂತ್ರಿಸುವಲ್ಲಿ ಕರ್ನಾಟಕ ದೇಶದಲ್ಲೇ ಉತ್ತಮ ಕೆಲಸ ಮಾಡುತ್ತಿದೆ. ಪ್ರಧಾನಮಂತ್ರಿ ಅವರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಹಾಗೂ ಜನ ಕಲ್ಯಾಣಕ್ಕೆ ಬಿಜೆಪಿ ಸರ್ಕಾರ ಬದ್ಧವಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT