<p><strong>ಬೀದರ್</strong>: ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಮುಖ್ಯ ಕಚೇರಿ ಎದುರು ನಡೆದ ದರೋಡೆ ಪ್ರಕರಣದ ಇಬ್ಬರು ದರೋಡೆಕೋರರ ಗುರುತು ಪತ್ತೆ ಹಚ್ಚುವಲ್ಲಿ ಬೀದರ್ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.</p><p>ಬಿಹಾರ ರಾಜ್ಯದ ವೈಶಾಲಿ ಜಿಲ್ಲೆಯ ಫತೇಪುರ ಫುಲ್ವರಿಯಾ ನಿವಾಸಿ ಅಮನ್ ಕುಮಾರ್ ರಾಜಕಿಶೋರ್ ಸಿಂಗ್ ಹಾಗೂ ಅದೇ ಜಿಲ್ಲೆಯ ಮಹಿಸೋರ್ ನಿವಾಸಿ ಅಲೋಕ್ ಕುಮಾರ್ ಅಲಿಯಾಸ್ ಅಶುತೋಷ್ ಶತ್ರುಘ್ನ ಪ್ರಸಾದ್ ಸಿಂಗ್ ಕೃತ್ಯ ಎಸಗಿದವರು ಎಂದು ಗುರುತಿಸಿದ್ದಾರೆ.</p><p>ಇಬ್ಬರೂ ಉತ್ತರ ಪ್ರದೇಶದ ಮಿರ್ಜಾಪುರ ಸೇರಿದಂತೆ ಹಲವೆಡೆ ಈ ರೀತಿಯ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಆರೋಪಿಗಳಿಬ್ಬರ ಕುಟುಂಬದವರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಖಚಿತ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.</p><p>ಇಬ್ಬರ ಗುರುತು ಪತ್ತೆಯಾದ ನಂತರ ಬೀದರ್ ಜಿಲ್ಲಾ ಪೊಲೀಸರು ಬಿಹಾರದ ಹಲವೆಡೆ ‘ಬೇಕಾಗಿದ್ದಾರೆ’ ಎಂದು ಪೋಸ್ಟರ್ ಅಂಟಿಸಿದ್ದಾರೆ. ಇಬ್ಬರ ಬಗ್ಗೆ ಮಾಹಿತಿ ಕೊಟ್ಟವರಿಗೆ ₹5 ಲಕ್ಷ ನಗದು ಬಹುಮಾನ ಕೂಡ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ. </p><p>ಜನವರಿ 16ರಂದು ಬ್ಯಾಂಕಿನಿಂದ ಎಟಿಎಂಗಳಿಗೆ ಜಮೆ ಮಾಡಲು ಹಣ ಕೊಂಡೊಯ್ಯುತ್ತಿದ್ದ ಎಸ್ಬಿಐನ ಸಿಎಂಎಸ್ ಕಂಪನಿಯ ಇಬ್ಬರು ನೌಕರರ ಮೇಲೆ ಗುಂಡಿನ ದಾಳಿ ನಡೆಸಿ, ₹83 ಲಕ್ಷ ನಗದು ಹಣವಿದ್ದ ಟ್ರಂಕ್ನೊಂದಿಗೆ ಬೈಕ್ ಮೇಲೆ ಪರಾರಿಯಾಗಿದ್ದರು. ಘಟನೆಯಲ್ಲಿ ಸಿಎಂಎಸ್ ಕಂಪನಿಯ ಕ್ಯಾಶ್ ಕಸ್ಟೋಡಿಯನ್ ಗಿರಿ ವೆಂಕಟೇಶ ಸ್ಥಳದಲ್ಲೇ ಮೃತಪಟ್ಟಿದ್ದರು. ಶಿವಕುಮಾರ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಮುಖ್ಯ ಕಚೇರಿ ಎದುರು ನಡೆದ ದರೋಡೆ ಪ್ರಕರಣದ ಇಬ್ಬರು ದರೋಡೆಕೋರರ ಗುರುತು ಪತ್ತೆ ಹಚ್ಚುವಲ್ಲಿ ಬೀದರ್ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.</p><p>ಬಿಹಾರ ರಾಜ್ಯದ ವೈಶಾಲಿ ಜಿಲ್ಲೆಯ ಫತೇಪುರ ಫುಲ್ವರಿಯಾ ನಿವಾಸಿ ಅಮನ್ ಕುಮಾರ್ ರಾಜಕಿಶೋರ್ ಸಿಂಗ್ ಹಾಗೂ ಅದೇ ಜಿಲ್ಲೆಯ ಮಹಿಸೋರ್ ನಿವಾಸಿ ಅಲೋಕ್ ಕುಮಾರ್ ಅಲಿಯಾಸ್ ಅಶುತೋಷ್ ಶತ್ರುಘ್ನ ಪ್ರಸಾದ್ ಸಿಂಗ್ ಕೃತ್ಯ ಎಸಗಿದವರು ಎಂದು ಗುರುತಿಸಿದ್ದಾರೆ.</p><p>ಇಬ್ಬರೂ ಉತ್ತರ ಪ್ರದೇಶದ ಮಿರ್ಜಾಪುರ ಸೇರಿದಂತೆ ಹಲವೆಡೆ ಈ ರೀತಿಯ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಆರೋಪಿಗಳಿಬ್ಬರ ಕುಟುಂಬದವರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಖಚಿತ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.</p><p>ಇಬ್ಬರ ಗುರುತು ಪತ್ತೆಯಾದ ನಂತರ ಬೀದರ್ ಜಿಲ್ಲಾ ಪೊಲೀಸರು ಬಿಹಾರದ ಹಲವೆಡೆ ‘ಬೇಕಾಗಿದ್ದಾರೆ’ ಎಂದು ಪೋಸ್ಟರ್ ಅಂಟಿಸಿದ್ದಾರೆ. ಇಬ್ಬರ ಬಗ್ಗೆ ಮಾಹಿತಿ ಕೊಟ್ಟವರಿಗೆ ₹5 ಲಕ್ಷ ನಗದು ಬಹುಮಾನ ಕೂಡ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ. </p><p>ಜನವರಿ 16ರಂದು ಬ್ಯಾಂಕಿನಿಂದ ಎಟಿಎಂಗಳಿಗೆ ಜಮೆ ಮಾಡಲು ಹಣ ಕೊಂಡೊಯ್ಯುತ್ತಿದ್ದ ಎಸ್ಬಿಐನ ಸಿಎಂಎಸ್ ಕಂಪನಿಯ ಇಬ್ಬರು ನೌಕರರ ಮೇಲೆ ಗುಂಡಿನ ದಾಳಿ ನಡೆಸಿ, ₹83 ಲಕ್ಷ ನಗದು ಹಣವಿದ್ದ ಟ್ರಂಕ್ನೊಂದಿಗೆ ಬೈಕ್ ಮೇಲೆ ಪರಾರಿಯಾಗಿದ್ದರು. ಘಟನೆಯಲ್ಲಿ ಸಿಎಂಎಸ್ ಕಂಪನಿಯ ಕ್ಯಾಶ್ ಕಸ್ಟೋಡಿಯನ್ ಗಿರಿ ವೆಂಕಟೇಶ ಸ್ಥಳದಲ್ಲೇ ಮೃತಪಟ್ಟಿದ್ದರು. ಶಿವಕುಮಾರ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>