<p><strong>ಬೀದರ್:</strong> ಬೀದರ್ ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಮ್ಯಾರಾಥಾನ್ನಲ್ಲಿ ಜನ ಉತ್ಸಾಹದಿಂದ ಓಡಿದರು.</p>.<p>ನಗರದ ಚಿದಂಬರಾಶ್ರಮದಲ್ಲಿ ಭಾನುವಾರ ಬೆಳಿಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಮ್ಯಾರಾಥಾನ್ಗೆ ಚಾಲನೆ ನೀಡಿದರು.</p>.<p>ಅಲ್ಲಿಂದ ಆರಂಭಗೊಂಡ ಓಟ ಗುಂಪಾ ಸಿದ್ದಾರೂಢ ವೃತ್ತ, ಕುಂಬಾರವಾಡ ಕ್ರಾಸ್, ಮೈಲೂರ್ ಕ್ರಾಸ್, ವಿದ್ಯಾನಗರ ಕಾಲೊನಿ, ಬೊಮ್ಮಗೊಂಡೇಶ್ವರ ವೃತ್ತ, ಮಹಾವೀರ ವೃತ್ತದ ಮೂಲಕ ಹಾದು ಕೇಂದ್ರ ಬಸ್ ನಿಲ್ದಾಣ ಸಮೀಪದ ಬರೀದ್ ಷಾಹಿ ಉದ್ಯಾನದ ಎದುರು ಕೊನೆಗೊಂಡಿತು.</p>.<p>ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಮ್ಯಾರಾಥಾನ್ನಲ್ಲಿ ಪಾಲ್ಗೊಂಡವರಿಗೆ ಪ್ರದೀಪ್ ಗುಂಟಿ ಅವರು ಪ್ರಮಾಣ ಪತ್ರಗಳನ್ನು ವಿತರಿಸಿದರು.</p>.<p>ಬಳಿಕ ಮಾತನಾಡಿ, ಉತ್ತಮ ಆರೋಗ್ಯಕ್ಕಾಗಿ ಮತ್ತು ಡ್ರಗ್ಸ್ ಮುಕ್ತ ಬೀದರ್ ಜಿಲ್ಲೆಗಾಗಿ ಮ್ಯಾರಾಥಾನ್ ಹಮ್ಮಿಕೊಂಡಿದ್ದು, ಉತ್ತಮ ಸ್ಪಂದನೆ ದೊರೆತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಬೀದರ್ ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಮ್ಯಾರಾಥಾನ್ನಲ್ಲಿ ಜನ ಉತ್ಸಾಹದಿಂದ ಓಡಿದರು.</p>.<p>ನಗರದ ಚಿದಂಬರಾಶ್ರಮದಲ್ಲಿ ಭಾನುವಾರ ಬೆಳಿಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಮ್ಯಾರಾಥಾನ್ಗೆ ಚಾಲನೆ ನೀಡಿದರು.</p>.<p>ಅಲ್ಲಿಂದ ಆರಂಭಗೊಂಡ ಓಟ ಗುಂಪಾ ಸಿದ್ದಾರೂಢ ವೃತ್ತ, ಕುಂಬಾರವಾಡ ಕ್ರಾಸ್, ಮೈಲೂರ್ ಕ್ರಾಸ್, ವಿದ್ಯಾನಗರ ಕಾಲೊನಿ, ಬೊಮ್ಮಗೊಂಡೇಶ್ವರ ವೃತ್ತ, ಮಹಾವೀರ ವೃತ್ತದ ಮೂಲಕ ಹಾದು ಕೇಂದ್ರ ಬಸ್ ನಿಲ್ದಾಣ ಸಮೀಪದ ಬರೀದ್ ಷಾಹಿ ಉದ್ಯಾನದ ಎದುರು ಕೊನೆಗೊಂಡಿತು.</p>.<p>ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಮ್ಯಾರಾಥಾನ್ನಲ್ಲಿ ಪಾಲ್ಗೊಂಡವರಿಗೆ ಪ್ರದೀಪ್ ಗುಂಟಿ ಅವರು ಪ್ರಮಾಣ ಪತ್ರಗಳನ್ನು ವಿತರಿಸಿದರು.</p>.<p>ಬಳಿಕ ಮಾತನಾಡಿ, ಉತ್ತಮ ಆರೋಗ್ಯಕ್ಕಾಗಿ ಮತ್ತು ಡ್ರಗ್ಸ್ ಮುಕ್ತ ಬೀದರ್ ಜಿಲ್ಲೆಗಾಗಿ ಮ್ಯಾರಾಥಾನ್ ಹಮ್ಮಿಕೊಂಡಿದ್ದು, ಉತ್ತಮ ಸ್ಪಂದನೆ ದೊರೆತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>