<p><strong>ಹುಮನಾಬಾದ್: </strong>‘ಉತ್ತಮ ಆರೋಗ್ಯಕ್ಕೆ ನುಗ್ಗೆಕಾಯಿ ಸೊಪ್ಪು ಸಹಕಾರಿ. ಪ್ರತಿ ಮನೆಯಲ್ಲೂ ನುಗ್ಗೆ ಸಸಿ ನೆಟ್ಟು ಪೋಷಿಸಬೇಕು’ ಎಂದು ಪರಿಸರವಾದಿ ಶೈಲೆಂದ್ರ ಕಾವಡಿ ಹೇಳಿದರು.</p>.<p>ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಪರಿಸರ ವಾಹಿನಿ ವತಿಯಿಂದ ಇಲ್ಲಿಗೆ ಸಮೀಪದ ಗಡವಂತಿ ಗ್ರಾಮದಲ್ಲಿ ಸೋಮವಾರ ಆಯೋಜಿಸಲಾಗಿದ್ದ ‘ತಾಯಿಗೊಂದು ಸಸಿ ಶಿಶುವಿಗೊಂದು ಸಸಿ’ ಅಭಿಯಾನದಲ್ಲಿ ಅವರು ಮಾತನಾಡಿದರು.</p>.<p>ನುಗ್ಗೆಕಾಯಿ ಸೊಪ್ಪನ್ನು ನಿಯಮಿತವಾಗಿ ಸೇವಿಸಬೇಕು.ಅದು ರಕ್ತದಲ್ಲಿಯ ಸಕ್ಕರೆ ಮಟ್ಟದ ಸಮತೋಲನವನ್ನು ಕಾಪಾಡುತ್ತದೆ. ಅಲ್ಲದೆ, ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯಕ್ಕೂ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.</p>.<p>ಸದಾಶಿವ ವಿಭೂತಿ ಮಾತನಾಡಿ,‘ಪ್ರತಿ ಮನೆಯಲ್ಲಿ ಅಮೃತ ಬಳ್ಳಿ, ನವಳ ಸರ, ನೆಲ್ಲಿಕಾಯಿ ಹಾಗೂ ನಿಂಬೆ ಗಿಡ ಸೇರಿದಂತೆ ವಿವಿಧ ಆಯುರ್ವೇದಿಕ ಗಿಡಗಳನ್ನು ಬೆಳೆಸಿ ಉಳಿಸಬೇಕು’ ಎಂದು ಹೇಳಿದರು.</p>.<p>ವೀರಭದ್ರೇಶ್ವರ ಚಿತ್ರಕಲಾ ಮಹಾವಿದ್ಯಾಲಯದ ಕಾರ್ಯದರ್ಶಿ ಗುಂಡಪ್ಪ ದೊಡ್ಡಮನಿ, ಶಿವಾಜಿ ಹಾಗೂ ಸಂಗಮ್ಮಾ ಸಂತೋಷ ತೆಲಂಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್: </strong>‘ಉತ್ತಮ ಆರೋಗ್ಯಕ್ಕೆ ನುಗ್ಗೆಕಾಯಿ ಸೊಪ್ಪು ಸಹಕಾರಿ. ಪ್ರತಿ ಮನೆಯಲ್ಲೂ ನುಗ್ಗೆ ಸಸಿ ನೆಟ್ಟು ಪೋಷಿಸಬೇಕು’ ಎಂದು ಪರಿಸರವಾದಿ ಶೈಲೆಂದ್ರ ಕಾವಡಿ ಹೇಳಿದರು.</p>.<p>ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಪರಿಸರ ವಾಹಿನಿ ವತಿಯಿಂದ ಇಲ್ಲಿಗೆ ಸಮೀಪದ ಗಡವಂತಿ ಗ್ರಾಮದಲ್ಲಿ ಸೋಮವಾರ ಆಯೋಜಿಸಲಾಗಿದ್ದ ‘ತಾಯಿಗೊಂದು ಸಸಿ ಶಿಶುವಿಗೊಂದು ಸಸಿ’ ಅಭಿಯಾನದಲ್ಲಿ ಅವರು ಮಾತನಾಡಿದರು.</p>.<p>ನುಗ್ಗೆಕಾಯಿ ಸೊಪ್ಪನ್ನು ನಿಯಮಿತವಾಗಿ ಸೇವಿಸಬೇಕು.ಅದು ರಕ್ತದಲ್ಲಿಯ ಸಕ್ಕರೆ ಮಟ್ಟದ ಸಮತೋಲನವನ್ನು ಕಾಪಾಡುತ್ತದೆ. ಅಲ್ಲದೆ, ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯಕ್ಕೂ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.</p>.<p>ಸದಾಶಿವ ವಿಭೂತಿ ಮಾತನಾಡಿ,‘ಪ್ರತಿ ಮನೆಯಲ್ಲಿ ಅಮೃತ ಬಳ್ಳಿ, ನವಳ ಸರ, ನೆಲ್ಲಿಕಾಯಿ ಹಾಗೂ ನಿಂಬೆ ಗಿಡ ಸೇರಿದಂತೆ ವಿವಿಧ ಆಯುರ್ವೇದಿಕ ಗಿಡಗಳನ್ನು ಬೆಳೆಸಿ ಉಳಿಸಬೇಕು’ ಎಂದು ಹೇಳಿದರು.</p>.<p>ವೀರಭದ್ರೇಶ್ವರ ಚಿತ್ರಕಲಾ ಮಹಾವಿದ್ಯಾಲಯದ ಕಾರ್ಯದರ್ಶಿ ಗುಂಡಪ್ಪ ದೊಡ್ಡಮನಿ, ಶಿವಾಜಿ ಹಾಗೂ ಸಂಗಮ್ಮಾ ಸಂತೋಷ ತೆಲಂಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>