<p><strong>ಬೀದರ್</strong>: ಗುಲ್ಬರ್ಗ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ) ಬೀದರ್ ಕಾರ್ಯ ಮತ್ತು ಪಾಲನಾ ವಿಭಾಗ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ನಗರದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಖಂಡ್ರೆ, ಜಿಲ್ಲೆಯಲ್ಲಿ ಯಾವುದೇ ರೀತಿಯ ವಿದ್ಯುತ್ ಅವಘಡಗಳು ಆಗದ ರೀತಿಯಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಜೆಸ್ಕಾಂ ಬೀದರ್ ವಿಭಾಗೀಯ ಹಳೆಯ ಕಚೇರಿ ಶಿಥಿಲಾವಸ್ಥೆಗೆ ತಲುಪಿರುವುದರಿಂದ ಸಾರ್ವಜನಿಕರು ಹಾಗೂ ಸಿಬ್ಬಂದಿಗೆ ಉಂಟಾಗುತ್ತಿದ್ದ ಅನಾನುಕೂಲ ನಿವಾರಿಸಲು ಸರ್ಕಾರ ₹10 ಕೋಟಿ ವೆಚ್ಚದಲ್ಲಿ ನೂತನ ಕಚೇರಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಈ ಕೆಲಸ ಕಾಲಮಿತಿಯಲ್ಲಿ ಹಾಗೂ ಗುಣಮಟ್ಟದ ಕಟ್ಟಡ ನಿರ್ಮಿಸಬೇಕೆಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು.</p>.<p>ರೈತರಿಗೆ ಈಗಾಗಲೇ 7 ಗಂಟೆ ಗುಣಮಟ್ಟದ ವಿದ್ಯುತ್ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಬೆಳೆ ಬೆಳೆಯದ ಪ್ರದೇಶದಲ್ಲಿ ಸೌರವಿದ್ಯುತ್ ಸ್ಥಾಪಿಸಲು ಯೋಜನೆ ಹಾಕಿಕೊಂಡಿದ್ದು ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಸೌರ ವಿದ್ಯುತ್ ಉತ್ಪಾದಿಸಿ ಬೇರೆ ರಾಜ್ಯಗಳಿಗೆ ರಫ್ತು ಮಾಡುವ ಉದ್ದೇಶವಿದೆ ಎಂದರು.</p>.<p>ಜೆಸ್ಕಾಂನಲ್ಲಿ ಈಗಾಗಲೇ ಸಿಬ್ಬಂದಿ ಕೊರತೆ ಇದೆ. ಅವುಗಳನ್ನು ಶೀಘ್ರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಇನ್ನೂ 15 ವಿದ್ಯುತ್ ಕೇಂದ್ರಗಳನ್ನು ಸ್ಥಾಪಿಸಲು ಈಗಾಗಲೇ ಇಂಧನ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.</p>.<p>ಪೌರಾಡಳಿತ ಸಚಿವ ರಹೀಂ ಖಾನ್ ಮಾತನಾಡಿ, ಜಿಲ್ಲೆಯಲ್ಲಿ ಅಭಿವೃದ್ಧಿಗೆ ಕಾಮಗಾರಿಗೆ ಎಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದ ತಿಳಿಸಿದರು.</p>.<p>ಶಾಸಕ ಡಾ. ಶೈಲೇಂದ್ರ ಕೆ.ಬೆಲ್ದಾಳೆ ಮಾತನಾಡಿ, ಟ್ರಾನ್ಫಾರ್ಮರ್ ಇರುವ ಕಂಬಗಳಿಗೆ ತಂತಿ ಬೇಲಿ ಹಾಕುವ ಕಾರ್ಯ ಹೆಚ್ಚಿನ ರೀತಿಯಲ್ಲಿ ಆಗಬೇಕಾಗಿದೆ. ರೈತರಿಗೆ ಇನ್ನೂ ಹೆಚ್ಚಿನ ವಿದ್ಯುತ್ ನೀಡಿ ರೈತರಿಗೆ ಸಹಕಾರ ಸಿಗುವಂತಾಗಬೇಕು ಎಂದರು.</p>.<p>ಕಾಡಾ ಅಧ್ಯಕ್ಷ ಬಾಬು ಹೊನ್ನಾ ನಾಯ್ಕ, ಕಲಬುರಗಿ ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಬೀದರ್ ಮಹಾನಗರ ಪಾಲಿಕೆ ಅಧ್ಯಕ್ಷ ಮುಹಮ್ಮದ್ ಗೌಸ್, ಜೆಸ್ಕಾಂ ಸೂಪರಿಟೆಂಡೆಂಟ್ ವೀರಭದ್ರಪ್ಪ ಸಾಲಿಮನಿ, ಕಾರ್ಯನಿರ್ವಾಹಕ ಎಂಜಿನಿಯರ್ ರಮೇಶ ಪಾಟೀಲ, ಜೆಸ್ಕಾಂ ವೃತ್ತ ಕಚೇರಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆನಂದ್ ಎಮ್.ಪಾಂಚಾಳ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಗುಲ್ಬರ್ಗ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ) ಬೀದರ್ ಕಾರ್ಯ ಮತ್ತು ಪಾಲನಾ ವಿಭಾಗ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ನಗರದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಖಂಡ್ರೆ, ಜಿಲ್ಲೆಯಲ್ಲಿ ಯಾವುದೇ ರೀತಿಯ ವಿದ್ಯುತ್ ಅವಘಡಗಳು ಆಗದ ರೀತಿಯಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಜೆಸ್ಕಾಂ ಬೀದರ್ ವಿಭಾಗೀಯ ಹಳೆಯ ಕಚೇರಿ ಶಿಥಿಲಾವಸ್ಥೆಗೆ ತಲುಪಿರುವುದರಿಂದ ಸಾರ್ವಜನಿಕರು ಹಾಗೂ ಸಿಬ್ಬಂದಿಗೆ ಉಂಟಾಗುತ್ತಿದ್ದ ಅನಾನುಕೂಲ ನಿವಾರಿಸಲು ಸರ್ಕಾರ ₹10 ಕೋಟಿ ವೆಚ್ಚದಲ್ಲಿ ನೂತನ ಕಚೇರಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಈ ಕೆಲಸ ಕಾಲಮಿತಿಯಲ್ಲಿ ಹಾಗೂ ಗುಣಮಟ್ಟದ ಕಟ್ಟಡ ನಿರ್ಮಿಸಬೇಕೆಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು.</p>.<p>ರೈತರಿಗೆ ಈಗಾಗಲೇ 7 ಗಂಟೆ ಗುಣಮಟ್ಟದ ವಿದ್ಯುತ್ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಬೆಳೆ ಬೆಳೆಯದ ಪ್ರದೇಶದಲ್ಲಿ ಸೌರವಿದ್ಯುತ್ ಸ್ಥಾಪಿಸಲು ಯೋಜನೆ ಹಾಕಿಕೊಂಡಿದ್ದು ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಸೌರ ವಿದ್ಯುತ್ ಉತ್ಪಾದಿಸಿ ಬೇರೆ ರಾಜ್ಯಗಳಿಗೆ ರಫ್ತು ಮಾಡುವ ಉದ್ದೇಶವಿದೆ ಎಂದರು.</p>.<p>ಜೆಸ್ಕಾಂನಲ್ಲಿ ಈಗಾಗಲೇ ಸಿಬ್ಬಂದಿ ಕೊರತೆ ಇದೆ. ಅವುಗಳನ್ನು ಶೀಘ್ರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಇನ್ನೂ 15 ವಿದ್ಯುತ್ ಕೇಂದ್ರಗಳನ್ನು ಸ್ಥಾಪಿಸಲು ಈಗಾಗಲೇ ಇಂಧನ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.</p>.<p>ಪೌರಾಡಳಿತ ಸಚಿವ ರಹೀಂ ಖಾನ್ ಮಾತನಾಡಿ, ಜಿಲ್ಲೆಯಲ್ಲಿ ಅಭಿವೃದ್ಧಿಗೆ ಕಾಮಗಾರಿಗೆ ಎಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದ ತಿಳಿಸಿದರು.</p>.<p>ಶಾಸಕ ಡಾ. ಶೈಲೇಂದ್ರ ಕೆ.ಬೆಲ್ದಾಳೆ ಮಾತನಾಡಿ, ಟ್ರಾನ್ಫಾರ್ಮರ್ ಇರುವ ಕಂಬಗಳಿಗೆ ತಂತಿ ಬೇಲಿ ಹಾಕುವ ಕಾರ್ಯ ಹೆಚ್ಚಿನ ರೀತಿಯಲ್ಲಿ ಆಗಬೇಕಾಗಿದೆ. ರೈತರಿಗೆ ಇನ್ನೂ ಹೆಚ್ಚಿನ ವಿದ್ಯುತ್ ನೀಡಿ ರೈತರಿಗೆ ಸಹಕಾರ ಸಿಗುವಂತಾಗಬೇಕು ಎಂದರು.</p>.<p>ಕಾಡಾ ಅಧ್ಯಕ್ಷ ಬಾಬು ಹೊನ್ನಾ ನಾಯ್ಕ, ಕಲಬುರಗಿ ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಬೀದರ್ ಮಹಾನಗರ ಪಾಲಿಕೆ ಅಧ್ಯಕ್ಷ ಮುಹಮ್ಮದ್ ಗೌಸ್, ಜೆಸ್ಕಾಂ ಸೂಪರಿಟೆಂಡೆಂಟ್ ವೀರಭದ್ರಪ್ಪ ಸಾಲಿಮನಿ, ಕಾರ್ಯನಿರ್ವಾಹಕ ಎಂಜಿನಿಯರ್ ರಮೇಶ ಪಾಟೀಲ, ಜೆಸ್ಕಾಂ ವೃತ್ತ ಕಚೇರಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆನಂದ್ ಎಮ್.ಪಾಂಚಾಳ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>