<p><strong>ಬೀದರ್: </strong>ಮಾಜಿ ಶಾಸಕ ಜುಲ್ಫೇಕರ್ ಹಾಸ್ಮಿ (57) ಅವರು ಮೂತ್ರಪಿಂಡ ವೈಫಲ್ಯದಿಂದಾಗಿ ಮಂಗಳವಾರ ಬೆಳಗಿನ ಜಾವ ಹೈದರಾಬಾದ್ನಲ್ಲಿ ನಿಧನರಾದರು.</p>.<p>ಅವರಿಗೆ ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ನಾಲ್ಕು ತಿಂಗಳಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಹೈದರಾಬಾದ್ನ ಆಸರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.</p>.<p>ಜುಲ್ಫೇಕರ್ ಹಾಸ್ಮಿಗೆ ಶ್ರದ್ಧಾಂಜಲಿ ಸಲ್ಲಿಸಲು ನಗರದ ಜಾಮಾ ಮಸೀದಿಯಲ್ಲಿ ಇಂದು (ಮಂಗಳವಾರ) ಮಧ್ಯಾಹ್ನ 1.30 ಗಂಟೆಗೆ ವಿಶೇಷ ಪ್ರಾರ್ಥನೆ ಆಯೋಜಿಸಲಾಗಿದೆ. ಬೀದರ್ ತಾಲ್ಲೂಕಿನ ಅಷ್ಟೂರಿನ ಅವರ ಹೊಲದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.</p>.<p>ಹಾಸ್ಮಿ 27ನೇ ವಯಸ್ಸಿನಲ್ಲೇ ರಾಜಕೀಯ ಪ್ರವೇಶ ಮಾಡಿದ್ದರು. 30 ವರ್ಷ ರಾಜಕೀಯದಲ್ಲಿ ಸಕ್ರೀಯವಾಗಿದ್ದರು. 1994ರಲ್ಲಿ ಬಿಎಸ್ಪಿಯಿಂದ ಬೀದರ್ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ದಕ್ಷಿಣ ಭಾರತದಲ್ಲಿ ಬಿಎಸ್ಪಿ ಖಾತೆ ತೆರೆದ ಮೊದಲ ವ್ಯಕ್ತಿ ಎನ್ನುವ ಶ್ರೇಯಸ್ಸಿಗೆ ಪಾತ್ರರಾಗಿದ್ದರು.</p>.<p>ನಂತರ ಜೆಡಿಎಸ್ನಿಂದ ಬೀದರ್ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಕೆಲ ವರ್ಷ ಕಾಂಗ್ರೆಸ್ನಲ್ಲೂ ಗುರುತಿಸಿಕೊಂಡಿದ್ದರು. ಜನ ಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುತ್ತಿದ್ದರು. ಮೊನಚಾದ ಮಾತು ಹಾಗೂ ವಿವಾದಾತ್ಮಕ ಹೇಳಿಕೆಯಿಂದ ಹೆಚ್ಚು ಪ್ರಸಿದ್ಧಿ ಪಡೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಮಾಜಿ ಶಾಸಕ ಜುಲ್ಫೇಕರ್ ಹಾಸ್ಮಿ (57) ಅವರು ಮೂತ್ರಪಿಂಡ ವೈಫಲ್ಯದಿಂದಾಗಿ ಮಂಗಳವಾರ ಬೆಳಗಿನ ಜಾವ ಹೈದರಾಬಾದ್ನಲ್ಲಿ ನಿಧನರಾದರು.</p>.<p>ಅವರಿಗೆ ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ನಾಲ್ಕು ತಿಂಗಳಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಹೈದರಾಬಾದ್ನ ಆಸರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.</p>.<p>ಜುಲ್ಫೇಕರ್ ಹಾಸ್ಮಿಗೆ ಶ್ರದ್ಧಾಂಜಲಿ ಸಲ್ಲಿಸಲು ನಗರದ ಜಾಮಾ ಮಸೀದಿಯಲ್ಲಿ ಇಂದು (ಮಂಗಳವಾರ) ಮಧ್ಯಾಹ್ನ 1.30 ಗಂಟೆಗೆ ವಿಶೇಷ ಪ್ರಾರ್ಥನೆ ಆಯೋಜಿಸಲಾಗಿದೆ. ಬೀದರ್ ತಾಲ್ಲೂಕಿನ ಅಷ್ಟೂರಿನ ಅವರ ಹೊಲದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.</p>.<p>ಹಾಸ್ಮಿ 27ನೇ ವಯಸ್ಸಿನಲ್ಲೇ ರಾಜಕೀಯ ಪ್ರವೇಶ ಮಾಡಿದ್ದರು. 30 ವರ್ಷ ರಾಜಕೀಯದಲ್ಲಿ ಸಕ್ರೀಯವಾಗಿದ್ದರು. 1994ರಲ್ಲಿ ಬಿಎಸ್ಪಿಯಿಂದ ಬೀದರ್ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ದಕ್ಷಿಣ ಭಾರತದಲ್ಲಿ ಬಿಎಸ್ಪಿ ಖಾತೆ ತೆರೆದ ಮೊದಲ ವ್ಯಕ್ತಿ ಎನ್ನುವ ಶ್ರೇಯಸ್ಸಿಗೆ ಪಾತ್ರರಾಗಿದ್ದರು.</p>.<p>ನಂತರ ಜೆಡಿಎಸ್ನಿಂದ ಬೀದರ್ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಕೆಲ ವರ್ಷ ಕಾಂಗ್ರೆಸ್ನಲ್ಲೂ ಗುರುತಿಸಿಕೊಂಡಿದ್ದರು. ಜನ ಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುತ್ತಿದ್ದರು. ಮೊನಚಾದ ಮಾತು ಹಾಗೂ ವಿವಾದಾತ್ಮಕ ಹೇಳಿಕೆಯಿಂದ ಹೆಚ್ಚು ಪ್ರಸಿದ್ಧಿ ಪಡೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>