<p>ಬೀದರ್: ‘ಜಿಲ್ಲೆಯ ರೈತರು ಮುಂಗಾರು ಹಂಗಾಮಿನ ಆರಂಭದಲ್ಲೇ ರಸಗೊಬ್ಬರ ಸಿಗದೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರವನ್ನು ಸಕಾಲದಲ್ಲಿ ಪೂರೈಸದ ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆ ತಾಳಿದೆ’ ಎಂದು ಸಂಸದ ಸಾಗರ್ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ.</p>.<p>‘ಏಪ್ರಿಲ್ನಿಂದ ಜೂನ್ವರೆಗೆ ಜಿಲ್ಲೆಗೆ ಬೇಕಾಗುವ ಒಟ್ಟು ರಸಗೊಬ್ಬರ 21,559 ಮೆಟ್ರಿಕ್ ಟನ್. ಆದರೆ ಕೇಂದ್ರ ಸರ್ಕಾರದಿಂದ ಇದುವರೆಗೆ ಪೂರೈಕೆಯಾಗಿರುವ ದಸ್ತಾನು ಕೇವಲ 9,144 ಮೆಟ್ರಿಕ್ ಟನ್ ಮಾತ್ರ. ಹೀಗಾಗಿ 12,415 ಮೆಟ್ರಿಕ್ ಟನ್ ಗೊಬ್ಬರ ಕೊರತೆಯಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಮುಂಗಾರು ಅವಧಿಯಲ್ಲಿ ರಸಗೊಬ್ಬರಕ್ಕೆ ಇಷ್ಟೊಂದು ದೊಡ್ಡ ಪ್ರಮಾಣದ ಬೇಡಿಕೆ ಬರುತ್ತದೆ ಎಂಬ ಕನಿಷ್ಠ ಜ್ಞಾನ ಕೇಂದ್ರ ಸರ್ಕಾರಕ್ಕೆ ಇರಬೇಕಿತ್ತು. ಆದರೆ, ಇಂತಹ ತೀವ್ರ ಬಿಕ್ಕಟ್ಟು ಎದುರಾಗುವ ಮುನ್ಸೂಚನೆ ಇದ್ದರೂ ಸಹ ಕೇಂದ್ರ ಸರ್ಕಾರವು ಇದನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ’ ಎಂದಿದ್ದಾರೆ.</p>.<p>‘ಮುಂಗಾರು ಹಂಗಾಮು ರೈತರಿಗೆ ಅತ್ಯಂತ ಪ್ರಮುಖವಾದ ಸಮಯವಾಗಿದೆ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸಬೇಕಾಗಿದ್ದ ಕೇಂದ್ರ ಸರ್ಕಾರ ಕೇವಲ ಚುನಾವಣಾ ಪ್ರಚಾರ ಮತ್ತು ರಾಜಕೀಯದಲ್ಲಿ ತನ್ನ ಸಮಯವನ್ನು ವ್ಯರ್ಥ ಮಾಡಿದೆ. ಸರ್ಕಾರದ ಈ ನಿರ್ಲಕ್ಷ್ಯತನದಿಂದ ಮಾರುಕಟ್ಟೆಯಲ್ಲಿ ರಸಗೊಬ್ಬರ ದರವೂ ಗಗನಕ್ಕೇರಿದ್ದು, ರೈತರು ದುಪ್ಪಟ್ಟು ಬೆಲೆಯಲ್ಲಿ ಕೊಳ್ಳಬೇಕಾಗಿದೆ’ ಎಂದು ಅಸಮಾಧಾನ ಹೊರ ಹಾಕಿದ್ದಾರೆ.</p>.<p>‘ಕೇಂದ್ರ ಸರ್ಕಾರವು ಈಗಲಾದರೂ ಎಚ್ಚೆತ್ತು ತಕ್ಷಣವೇ ಜಿಲ್ಲೆಗೆ ಬಾಕಿ ಇರುವ 12,415 ಮೆಟ್ರಿಕ್ ಟನ್ ರಸಗೊಬ್ಬರವನ್ನು ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-33-671233096</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ‘ಜಿಲ್ಲೆಯ ರೈತರು ಮುಂಗಾರು ಹಂಗಾಮಿನ ಆರಂಭದಲ್ಲೇ ರಸಗೊಬ್ಬರ ಸಿಗದೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರವನ್ನು ಸಕಾಲದಲ್ಲಿ ಪೂರೈಸದ ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆ ತಾಳಿದೆ’ ಎಂದು ಸಂಸದ ಸಾಗರ್ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ.</p>.<p>‘ಏಪ್ರಿಲ್ನಿಂದ ಜೂನ್ವರೆಗೆ ಜಿಲ್ಲೆಗೆ ಬೇಕಾಗುವ ಒಟ್ಟು ರಸಗೊಬ್ಬರ 21,559 ಮೆಟ್ರಿಕ್ ಟನ್. ಆದರೆ ಕೇಂದ್ರ ಸರ್ಕಾರದಿಂದ ಇದುವರೆಗೆ ಪೂರೈಕೆಯಾಗಿರುವ ದಸ್ತಾನು ಕೇವಲ 9,144 ಮೆಟ್ರಿಕ್ ಟನ್ ಮಾತ್ರ. ಹೀಗಾಗಿ 12,415 ಮೆಟ್ರಿಕ್ ಟನ್ ಗೊಬ್ಬರ ಕೊರತೆಯಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಮುಂಗಾರು ಅವಧಿಯಲ್ಲಿ ರಸಗೊಬ್ಬರಕ್ಕೆ ಇಷ್ಟೊಂದು ದೊಡ್ಡ ಪ್ರಮಾಣದ ಬೇಡಿಕೆ ಬರುತ್ತದೆ ಎಂಬ ಕನಿಷ್ಠ ಜ್ಞಾನ ಕೇಂದ್ರ ಸರ್ಕಾರಕ್ಕೆ ಇರಬೇಕಿತ್ತು. ಆದರೆ, ಇಂತಹ ತೀವ್ರ ಬಿಕ್ಕಟ್ಟು ಎದುರಾಗುವ ಮುನ್ಸೂಚನೆ ಇದ್ದರೂ ಸಹ ಕೇಂದ್ರ ಸರ್ಕಾರವು ಇದನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ’ ಎಂದಿದ್ದಾರೆ.</p>.<p>‘ಮುಂಗಾರು ಹಂಗಾಮು ರೈತರಿಗೆ ಅತ್ಯಂತ ಪ್ರಮುಖವಾದ ಸಮಯವಾಗಿದೆ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸಬೇಕಾಗಿದ್ದ ಕೇಂದ್ರ ಸರ್ಕಾರ ಕೇವಲ ಚುನಾವಣಾ ಪ್ರಚಾರ ಮತ್ತು ರಾಜಕೀಯದಲ್ಲಿ ತನ್ನ ಸಮಯವನ್ನು ವ್ಯರ್ಥ ಮಾಡಿದೆ. ಸರ್ಕಾರದ ಈ ನಿರ್ಲಕ್ಷ್ಯತನದಿಂದ ಮಾರುಕಟ್ಟೆಯಲ್ಲಿ ರಸಗೊಬ್ಬರ ದರವೂ ಗಗನಕ್ಕೇರಿದ್ದು, ರೈತರು ದುಪ್ಪಟ್ಟು ಬೆಲೆಯಲ್ಲಿ ಕೊಳ್ಳಬೇಕಾಗಿದೆ’ ಎಂದು ಅಸಮಾಧಾನ ಹೊರ ಹಾಕಿದ್ದಾರೆ.</p>.<p>‘ಕೇಂದ್ರ ಸರ್ಕಾರವು ಈಗಲಾದರೂ ಎಚ್ಚೆತ್ತು ತಕ್ಷಣವೇ ಜಿಲ್ಲೆಗೆ ಬಾಕಿ ಇರುವ 12,415 ಮೆಟ್ರಿಕ್ ಟನ್ ರಸಗೊಬ್ಬರವನ್ನು ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-33-671233096</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>