ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ ಉತ್ಸವ: ಸಿರಿಧಾನ್ಯ ನಡಿಗೆ

Last Updated 5 ಜನವರಿ 2023, 5:36 IST
ಅಕ್ಷರ ಗಾತ್ರ

ಬೀದರ್‌: ಬೀದರ್‌ ಉತ್ಸವ ನಿಮಿತ್ತ ಜಿಲ್ಲಾಡಳಿತದ ವತಿಯಿಂದ ಗುರುವಾರ ಸಿರಿಧಾನ್ಯ ನಡಿಗೆ ಕಾರ್ಯಕ್ರಮ ನಡೆಯಿತು.

ನಗರದ ಡಾ. ಅಂಬೇಡ್ಕರ್ ವೃತ್ತದಲ್ಲಿ ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕ ರಹೀಂ ಖಾನ್, ಬುಡಾ ಅಧ್ಯಕ್ಷ ಬಾಬು ವಾಲಿ, ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಸಿದ್ರಾಮಪ್ಪ ಆಣದೂರೆ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರತೇಂದ್ರನಾಥ ಸುಗೂರ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ವಿಶ್ವನಾಥ ಜಿಳ್ಳೆ ಇದ್ದರು.

ನಡಿಗೆ ಶಿವಾಜಿ ವೃತ್ತ, ಮೋಹನ ಮಾರ್ಕೆಟ್, ಗುದಗೆ ಆಸ್ಪತ್ರೆ, ರೋಟರಿ ಸರ್ಕಲ್, ಮಡಿವಾಳೇಶ್ವರ ವೃತ್ತ, ಕೇಂದ್ರ ಬಸ್ ನಿಲ್ದಾಣ ಮಾರ್ಗವಾಗಿ ಬರೀದ್ ಶಾಹಿ ಉದ್ಯಾನ ವರೆಗೆ ಬಂದು ಮುಕ್ತಾಯಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT