<p><strong>ಬೀದರ್:</strong> ಮುಖ್ಯಮಂತ್ರಿ ಕೋವಿಡ್ -19 ಪರಿಹಾರ ನಿಧಿಗೆ ಇಲ್ಲಿಯ ಗಾಂಧಿಗಂಜ್ನ ವ್ಯಾಪಾರಿಗಳು ₹ 2,35,100 ದೇಣಿಗೆ ನೀಡಿದ್ದಾರೆ.</p>.<p>ಗಾಂಧಿಗಂಜ್ನ ದಿ.ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಬಸವರಾಜ ಧನ್ನೂರ ಅವರು ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಅವರಿಗೆ ಡಿ.ಡಿ ಹಸ್ತಾಂತರಿಸಿದರು.</p>.<p>ಕೋವಿಡ್ 19 ತಡೆ ಕಾರ್ಯಗಳಿಗೆ ಸಂಘ ಸಂಸ್ಥೆಗಳು ಹಾಗೂ ದಾನಿಗಳು ನೆರವಾಗಬೇಕು ಎನ್ನುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನವಿಗೆ ಸ್ಪಂದಿಸಿ ಗಾಂಧಿಗಂಜ್ ವ್ಯಾಪಾರಿಗಳು ದೇಣಿಗೆ ನೀಡಿದ್ದಾರೆ ಎಂದು ಬಸವರಾಜ ಧನ್ನೂರ ತಿಳಿಸಿದರು.</p>.<p>ಗಾಂಧಿಗಂಜ್ ವ್ಯಾಪಾರಿಗಳು ಹಿಂದಿನಿಂದಲೂ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸಮಾಜ ಹಾಗೂ ದೇಶದ ಕಾರ್ಯಗಳಿಗೆ ಸದಾ ಉದಾರ ಮನಸ್ಸಿನಿಂದ ದೇಣಿಗೆ ಕೊಡುತ್ತ ಬಂದಿದ್ದಾರೆ. ಇದೀಗ ಕೋವಿಡ್ 19 ಸೋಂಕು ತಡೆ ಕಾರ್ಯಕ್ಕೂ ಕೈಜೋಡಿಸಿದ್ದಾರೆ ಎಂದು ಹೇಳಿದರು.</p>.<p>ಕೋವಿಡ್ 19 ಸೋಂಕಿನಿಂದ ಲಾಕ್ಡೌನ್ ಮಾಡಿದ ಸಂದರ್ಭದಲ್ಲಿ ಸೋಂಕು ಹರಡುವಿಕೆ ಭೀತಿಯ ನಡುವೆಯೂ ಗಾಂಧಿಗಂಜ್ ವ್ಯಾಪಾರಿಗಳು ಸರ್ಕಾರದ ಆದೇಶದಂತೆ ವ್ಯಾಪಾರ ವಹಿವಾಟು ನಡೆಸುವ ಮೂಲಕ ಸಾಮಾಜಿಕ ಹೊಣೆಗಾರಿಕೆಯನ್ನು ನಿಭಾಯಿಸಿದ್ದರು ಎಂದು ಸ್ಮರಿಸಿದರು.</p>.<p>ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಭಗವಂತ ಔದತ್ಪುರ, ಕಾರ್ಯಕಾರಿಣಿ ಸದಸ್ಯ ಸೋಮನಾಥ ಗಂಗಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಮುಖ್ಯಮಂತ್ರಿ ಕೋವಿಡ್ -19 ಪರಿಹಾರ ನಿಧಿಗೆ ಇಲ್ಲಿಯ ಗಾಂಧಿಗಂಜ್ನ ವ್ಯಾಪಾರಿಗಳು ₹ 2,35,100 ದೇಣಿಗೆ ನೀಡಿದ್ದಾರೆ.</p>.<p>ಗಾಂಧಿಗಂಜ್ನ ದಿ.ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಬಸವರಾಜ ಧನ್ನೂರ ಅವರು ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಅವರಿಗೆ ಡಿ.ಡಿ ಹಸ್ತಾಂತರಿಸಿದರು.</p>.<p>ಕೋವಿಡ್ 19 ತಡೆ ಕಾರ್ಯಗಳಿಗೆ ಸಂಘ ಸಂಸ್ಥೆಗಳು ಹಾಗೂ ದಾನಿಗಳು ನೆರವಾಗಬೇಕು ಎನ್ನುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನವಿಗೆ ಸ್ಪಂದಿಸಿ ಗಾಂಧಿಗಂಜ್ ವ್ಯಾಪಾರಿಗಳು ದೇಣಿಗೆ ನೀಡಿದ್ದಾರೆ ಎಂದು ಬಸವರಾಜ ಧನ್ನೂರ ತಿಳಿಸಿದರು.</p>.<p>ಗಾಂಧಿಗಂಜ್ ವ್ಯಾಪಾರಿಗಳು ಹಿಂದಿನಿಂದಲೂ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸಮಾಜ ಹಾಗೂ ದೇಶದ ಕಾರ್ಯಗಳಿಗೆ ಸದಾ ಉದಾರ ಮನಸ್ಸಿನಿಂದ ದೇಣಿಗೆ ಕೊಡುತ್ತ ಬಂದಿದ್ದಾರೆ. ಇದೀಗ ಕೋವಿಡ್ 19 ಸೋಂಕು ತಡೆ ಕಾರ್ಯಕ್ಕೂ ಕೈಜೋಡಿಸಿದ್ದಾರೆ ಎಂದು ಹೇಳಿದರು.</p>.<p>ಕೋವಿಡ್ 19 ಸೋಂಕಿನಿಂದ ಲಾಕ್ಡೌನ್ ಮಾಡಿದ ಸಂದರ್ಭದಲ್ಲಿ ಸೋಂಕು ಹರಡುವಿಕೆ ಭೀತಿಯ ನಡುವೆಯೂ ಗಾಂಧಿಗಂಜ್ ವ್ಯಾಪಾರಿಗಳು ಸರ್ಕಾರದ ಆದೇಶದಂತೆ ವ್ಯಾಪಾರ ವಹಿವಾಟು ನಡೆಸುವ ಮೂಲಕ ಸಾಮಾಜಿಕ ಹೊಣೆಗಾರಿಕೆಯನ್ನು ನಿಭಾಯಿಸಿದ್ದರು ಎಂದು ಸ್ಮರಿಸಿದರು.</p>.<p>ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಭಗವಂತ ಔದತ್ಪುರ, ಕಾರ್ಯಕಾರಿಣಿ ಸದಸ್ಯ ಸೋಮನಾಥ ಗಂಗಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>