<p><strong>ಬೀದರ್:</strong> ನಗರದ ಗಾಂಧಿಗಂಜ್ ಪೊಲೀಸರು ಕಮಠಾಣ ರಸ್ತೆಯ ಈಜುಕೊಳದ ಬಳಿ ಗುರುವಾರ ದಾಳಿ ನಡೆಸಿ ₹4.46 ಲಕ್ಷ ಮೌಲ್ಯದ 8.920 ಕೆಜಿ ಗಾಂಜಾ, ಅದನ್ನು ಸಾಗಿಸಲು ಬಳಸಿದ ಮಾರುತಿ ಸುಜುಕಿ ಕಾರು ಜಪ್ತಿ ಮಾಡಿದ್ದಾರೆ. ಪ್ರಕರಣ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.</p>.<p>ಕಮಠಾಣದಿಂದ ಬೀದರ್ ನಗರಕ್ಕೆ ಕಾರಿನಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರನ್ನು ವಿಚಾರಣೆಗೆ ಒಳಪಡಿಸಿದಾಗ ಮಹಾರಾಷ್ಟ್ರದಲ್ಲಿ ಗಾಂಜಾ ಖರೀದಿಸಿ, ಬೀದರ್ನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಗಳಿಸಲು ಮುಂದಾಗಿರುವುದನ್ನು ಒಪ್ಪಿಕೊಂಡಿದ್ದಾರೆ.</p>.<p>ಎನ್ಡಿಪಿಎಸ್ ಕಾಯ್ದೆಯಡಿ ಗಾಂಧಿ ಗಂಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಶುಕ್ರವಾರ ಸಂಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಗಾಂಧಿಗಂಜ್ ಠಾಣೆ ಪಿಐ ಆನಂದರಾವ್ ಎಸ್.ಎನ್., ಸಿಬ್ಬಂದಿ ದಿಲೀಪ್, ಅನಿಲ್, ಸಂಜುಕುಮಾರ್, ಮನೋಜಕುಮಾರ್, ಶರಣಪ್ಪ, ಸುಧೀರ್, ದೀಪಕ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಯಶಸ್ವಿ ಕಾರ್ಯಾಚರಣೆ ಮಾಡಿರುವುದು ಅಭಿನಂದನಾರ್ಹ ಎಂದು ಎಸ್ಪಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ನಗರದ ಗಾಂಧಿಗಂಜ್ ಪೊಲೀಸರು ಕಮಠಾಣ ರಸ್ತೆಯ ಈಜುಕೊಳದ ಬಳಿ ಗುರುವಾರ ದಾಳಿ ನಡೆಸಿ ₹4.46 ಲಕ್ಷ ಮೌಲ್ಯದ 8.920 ಕೆಜಿ ಗಾಂಜಾ, ಅದನ್ನು ಸಾಗಿಸಲು ಬಳಸಿದ ಮಾರುತಿ ಸುಜುಕಿ ಕಾರು ಜಪ್ತಿ ಮಾಡಿದ್ದಾರೆ. ಪ್ರಕರಣ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.</p>.<p>ಕಮಠಾಣದಿಂದ ಬೀದರ್ ನಗರಕ್ಕೆ ಕಾರಿನಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರನ್ನು ವಿಚಾರಣೆಗೆ ಒಳಪಡಿಸಿದಾಗ ಮಹಾರಾಷ್ಟ್ರದಲ್ಲಿ ಗಾಂಜಾ ಖರೀದಿಸಿ, ಬೀದರ್ನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಗಳಿಸಲು ಮುಂದಾಗಿರುವುದನ್ನು ಒಪ್ಪಿಕೊಂಡಿದ್ದಾರೆ.</p>.<p>ಎನ್ಡಿಪಿಎಸ್ ಕಾಯ್ದೆಯಡಿ ಗಾಂಧಿ ಗಂಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಶುಕ್ರವಾರ ಸಂಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಗಾಂಧಿಗಂಜ್ ಠಾಣೆ ಪಿಐ ಆನಂದರಾವ್ ಎಸ್.ಎನ್., ಸಿಬ್ಬಂದಿ ದಿಲೀಪ್, ಅನಿಲ್, ಸಂಜುಕುಮಾರ್, ಮನೋಜಕುಮಾರ್, ಶರಣಪ್ಪ, ಸುಧೀರ್, ದೀಪಕ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಯಶಸ್ವಿ ಕಾರ್ಯಾಚರಣೆ ಮಾಡಿರುವುದು ಅಭಿನಂದನಾರ್ಹ ಎಂದು ಎಸ್ಪಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>