<p><strong>ಬೀದರ್:</strong> ನೆಲದಡಿಯ ಗ್ಯಾಸ್ ಪೈಪ್ಲೈನ್ ಲೀಕ್ ಆಗಿ ರಸ್ತೆ ಬದಿ ಅನಿಲ ಸೋರಿಕೆಯಾಗಿ ಧಗಧಗನೆ ಹೊತ್ತಿ ಉರಿದ ಘಟನೆ ನಗರದ ಜೈಲ್ ಕಾಲೊನಿಯಲ್ಲಿ ಮಂಗಳವಾರ ನಡೆದಿದೆ.</p><p>ಮನೆಗಳಿಗೆ ಸಂಪರ್ಕ ಕಲ್ಪಿಸಲಾಗಿರುವ ಭಾರತ್ ಗ್ಯಾಸ್ ಕಂಪನಿಯ ಪೈಪ್ಲೈನ್ ನೆಲದಡಿ ಬೆಳಿಗ್ಗೆ ಸೋರಿಕೆಯಾಗಿ, ಬೆಂಕಿ ಹೊತ್ತುಕೊಂಡು ಏಳೆಂಟು ಅಡಿ ಎತ್ತರದ ವರೆಗೆ ಉರಿಯಿತು. ವಿಷಯ ತಿಳಿದ ಸ್ಥಳೀಯರು ಕಂಪನಿಯ ಟೋಲ್ ಸಂಖ್ಯೆಗೆ ಕರೆ ಮಾಡಿದ್ದಾರೆ. ಆದರೆ, ಯಾರೂ ಅದಕ್ಕೆ ಪ್ರತಿಕ್ರಿಯಿಸಲಿಲ್ಲ. ಬಳಿಕ ಅಗ್ನಿಶಾಮಕ ದಳದವರಿಗೆ ವಿಷಯ ಮುಟ್ಟಿಸಿದ್ದಾರೆ.</p><p>ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದರು. ಬಳಿಕ ಕಂಪನಿಯ ಅಧಿಕಾರಿಗಳಿಗೆ ವಿಷಯ ತಿಳಿಸಿ, ಸ್ಥಳಕ್ಕೆ ಕರೆಸಿಕೊಂಡರು. ಆನಂತರ ಲೀಕೇಜ್ ಸರಿಪಡಿಸಲಾಯಿತು. ಅಗ್ನಿಶಾಮಕ ದಳದ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿತು ಎಂದು ಪ್ರತ್ಯಕ್ಷದರ್ಶಿಗಳು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p><p>ಸಮಯಕ್ಕೆ ಸರಿಯಾಗಿ ಆಗಮಿಸದ ಭಾರತ್ ಗ್ಯಾಸ್ ಕಂಪನಿಯ ಸಿಬ್ಬಂದಿಯನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಇಂಥ ಗಂಭೀರ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳದಿರುವುದು ದೊಡ್ಡ ಲೋಪ. ಜಿಲ್ಲಾಡಳಿತ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಭವಿಷ್ಯದಲ್ಲಿ ಇಂಥ ಅವಘಡಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ನೆಲದಡಿಯ ಗ್ಯಾಸ್ ಪೈಪ್ಲೈನ್ ಲೀಕ್ ಆಗಿ ರಸ್ತೆ ಬದಿ ಅನಿಲ ಸೋರಿಕೆಯಾಗಿ ಧಗಧಗನೆ ಹೊತ್ತಿ ಉರಿದ ಘಟನೆ ನಗರದ ಜೈಲ್ ಕಾಲೊನಿಯಲ್ಲಿ ಮಂಗಳವಾರ ನಡೆದಿದೆ.</p><p>ಮನೆಗಳಿಗೆ ಸಂಪರ್ಕ ಕಲ್ಪಿಸಲಾಗಿರುವ ಭಾರತ್ ಗ್ಯಾಸ್ ಕಂಪನಿಯ ಪೈಪ್ಲೈನ್ ನೆಲದಡಿ ಬೆಳಿಗ್ಗೆ ಸೋರಿಕೆಯಾಗಿ, ಬೆಂಕಿ ಹೊತ್ತುಕೊಂಡು ಏಳೆಂಟು ಅಡಿ ಎತ್ತರದ ವರೆಗೆ ಉರಿಯಿತು. ವಿಷಯ ತಿಳಿದ ಸ್ಥಳೀಯರು ಕಂಪನಿಯ ಟೋಲ್ ಸಂಖ್ಯೆಗೆ ಕರೆ ಮಾಡಿದ್ದಾರೆ. ಆದರೆ, ಯಾರೂ ಅದಕ್ಕೆ ಪ್ರತಿಕ್ರಿಯಿಸಲಿಲ್ಲ. ಬಳಿಕ ಅಗ್ನಿಶಾಮಕ ದಳದವರಿಗೆ ವಿಷಯ ಮುಟ್ಟಿಸಿದ್ದಾರೆ.</p><p>ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದರು. ಬಳಿಕ ಕಂಪನಿಯ ಅಧಿಕಾರಿಗಳಿಗೆ ವಿಷಯ ತಿಳಿಸಿ, ಸ್ಥಳಕ್ಕೆ ಕರೆಸಿಕೊಂಡರು. ಆನಂತರ ಲೀಕೇಜ್ ಸರಿಪಡಿಸಲಾಯಿತು. ಅಗ್ನಿಶಾಮಕ ದಳದ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿತು ಎಂದು ಪ್ರತ್ಯಕ್ಷದರ್ಶಿಗಳು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p><p>ಸಮಯಕ್ಕೆ ಸರಿಯಾಗಿ ಆಗಮಿಸದ ಭಾರತ್ ಗ್ಯಾಸ್ ಕಂಪನಿಯ ಸಿಬ್ಬಂದಿಯನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಇಂಥ ಗಂಭೀರ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳದಿರುವುದು ದೊಡ್ಡ ಲೋಪ. ಜಿಲ್ಲಾಡಳಿತ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಭವಿಷ್ಯದಲ್ಲಿ ಇಂಥ ಅವಘಡಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>