<p><strong>ಬೀದರ್</strong>: ಭಾನುವಾರ ಮಧ್ಯಾಹ್ನ ಸುರಿದ ಬಿರುಸಿನ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತು.</p><p>ಬೆಳಿಗ್ಗೆಯಿಂದ ಕಾರ್ಮೋಡ ಕವಿದಿತ್ತು. ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಆರಂಭಗೊಂಡ ಜೋರು ಮಳೆ ಸಂಜೆ ಐದು ಗಂಟೆಯ ವರೆಗೆ ಸುರಿಯಿತು.</p><p>ಗುಡುಗು ಸಹಿತ ಬಿರುಸಿನ ಮಳೆಯಿಂದ ನಗರದ ಹಾರೂರಗೇರಿ ಕಮಾನ್, ಬೊಮ್ಮಗೊಂಡೇಶ್ವರ ವೃತ್ತ, ಬಸವೇಶ್ವರ ವೃತ್ತದ ರೈಲ್ವೆ ಅಂಡರ್ಪಾಸ್, ರಾಮ್ ಚೌಕ್, ಮೈಲೂರ್ ಕ್ರಾಸ್, ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹಗೊಂಡಿತು. ಇದರಿಂದ ವಾಹನ ಸವಾರರು, ಪಾದಚಾರಿಗಳು ಪರದಾಟ ನಡೆಸಿದರು. </p><p>ಭಾನುವಾರ ರಜಾ ದಿನವಾಗಿದ್ದರಿಂದ ಬೆಳಿಗ್ಗೆ ಹೆಚ್ಚಿಗೆ ಜನರ ಓಡಾಟವಿರಲಿಲ್ಲ. ಆದರೆ, ಮಧ್ಯಾಹ್ನ ಉದ್ಯಾನ, ದೇವಸ್ಥಾನ ಸೇರಿದಂತೆ ಇತರೆ ಕಡೆಗಳಿಗೆ ಕುಟುಂಬ ಸದಸ್ಯರೊಂದಿಗೆ ತೆರಳಿದ್ದರು. ಆದರೆ, ಜೋರು ಮಳೆಗೆ ಎಲ್ಲವೂ ಅಸ್ತವ್ಯಸ್ತಗೊಂಡಿತು. ಅನೇಕರು ಮಳೆಯಲ್ಲೇ ನೆನೆದುಕೊಂಡು ಮನೆಗೆ ವಾಪಸಾದರು. </p><p>ತಾಲ್ಲೂಕಿನ ಅಮಲಾಪೂರ, ಚಿಟ್ಟಾ, ಘೋಡಂಪಳ್ಳಿ, ಯಾಕತಪೂರ, ಯದಲಾಪೂರ, ಗೋರನಳ್ಳಿ, ಗುನ್ನಳ್ಳಿ, ಶಹಾಪುರ, ಮಲ್ಕಾಪೂರ ಸೇರಿದಂತೆ ಹಲವೆಡೆ ಮಳೆಯಾಗಿರುವುದು ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಭಾನುವಾರ ಮಧ್ಯಾಹ್ನ ಸುರಿದ ಬಿರುಸಿನ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತು.</p><p>ಬೆಳಿಗ್ಗೆಯಿಂದ ಕಾರ್ಮೋಡ ಕವಿದಿತ್ತು. ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಆರಂಭಗೊಂಡ ಜೋರು ಮಳೆ ಸಂಜೆ ಐದು ಗಂಟೆಯ ವರೆಗೆ ಸುರಿಯಿತು.</p><p>ಗುಡುಗು ಸಹಿತ ಬಿರುಸಿನ ಮಳೆಯಿಂದ ನಗರದ ಹಾರೂರಗೇರಿ ಕಮಾನ್, ಬೊಮ್ಮಗೊಂಡೇಶ್ವರ ವೃತ್ತ, ಬಸವೇಶ್ವರ ವೃತ್ತದ ರೈಲ್ವೆ ಅಂಡರ್ಪಾಸ್, ರಾಮ್ ಚೌಕ್, ಮೈಲೂರ್ ಕ್ರಾಸ್, ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹಗೊಂಡಿತು. ಇದರಿಂದ ವಾಹನ ಸವಾರರು, ಪಾದಚಾರಿಗಳು ಪರದಾಟ ನಡೆಸಿದರು. </p><p>ಭಾನುವಾರ ರಜಾ ದಿನವಾಗಿದ್ದರಿಂದ ಬೆಳಿಗ್ಗೆ ಹೆಚ್ಚಿಗೆ ಜನರ ಓಡಾಟವಿರಲಿಲ್ಲ. ಆದರೆ, ಮಧ್ಯಾಹ್ನ ಉದ್ಯಾನ, ದೇವಸ್ಥಾನ ಸೇರಿದಂತೆ ಇತರೆ ಕಡೆಗಳಿಗೆ ಕುಟುಂಬ ಸದಸ್ಯರೊಂದಿಗೆ ತೆರಳಿದ್ದರು. ಆದರೆ, ಜೋರು ಮಳೆಗೆ ಎಲ್ಲವೂ ಅಸ್ತವ್ಯಸ್ತಗೊಂಡಿತು. ಅನೇಕರು ಮಳೆಯಲ್ಲೇ ನೆನೆದುಕೊಂಡು ಮನೆಗೆ ವಾಪಸಾದರು. </p><p>ತಾಲ್ಲೂಕಿನ ಅಮಲಾಪೂರ, ಚಿಟ್ಟಾ, ಘೋಡಂಪಳ್ಳಿ, ಯಾಕತಪೂರ, ಯದಲಾಪೂರ, ಗೋರನಳ್ಳಿ, ಗುನ್ನಳ್ಳಿ, ಶಹಾಪುರ, ಮಲ್ಕಾಪೂರ ಸೇರಿದಂತೆ ಹಲವೆಡೆ ಮಳೆಯಾಗಿರುವುದು ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>