<p><strong>ಬೀದರ್:</strong> ನಗರ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮೂರನೇ ದಿನವಾದ ಗುರುವಾರವೂ ಮಳೆ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.</p><p>ಮಂಗಳವಾರ ಆರಂಭಗೊಂಡಿರುವ ಮಳೆ ಎಡೆಬಿಡದೆ ಹಗಲು-ರಾತ್ರಿ ಧಾರಾಕಾರವಾಗಿ ಸುರಿಯುತ್ತಿದೆ. ಬುಧವಾರ ಮಳೆಯಲ್ಲೇ ಜನ ಹಬ್ಬದ ಖರೀದಿ ಮಾಡಿ, ಗಣೇಶನ ಪ್ರತಿಷ್ಠಾಪನೆ ಮಾಡಿದ್ದರು. ಸಾರ್ವಜನಿಕ ಗಣೇಶ ಕೂಡ ಪ್ರತಿಷ್ಠಾಪಿಸಲಾಗಿತ್ತು.</p><p>ಮುಂಜಾಗೃತಾ ಕ್ರಮವಾಗಿ ಗುರುವಾರ (ಆ. 28ರಂದು) ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ಶಾಲೆ ಕಾಲೇಜಿಗೆ ರಜೆ ಘೋಷಿಸಲಾಗಿದೆ.</p><p>ರಾತ್ರಿಯಿಂದ ಮಳೆಯ ತೀವ್ರತೆ ಜಾಸ್ತಿಯಾಗಿದೆ. ಅನೇಕ ಕಡೆ ಸೇತುವೆಗಳು ಮುಳುಗಿ ಹೋಗಿ ಕೆಲ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಉದಗೀರ್ಗೆ ಹೋಗುವ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿದೆ. ಎಕಂಬಾ ಬಳಿ ಸೇತುವೆ ಮೇಲಿನಿಂದ ನೀರು ಹರಿಯುತ್ತಿರುವುದರಿಂದ ಜನ-ಜಾನುವಾರು ಓಡಾಟ ಸ್ಥಗಿತವಾಗಿದೆ. ಕೆಲ ಕಡೆ ಅಗ್ನಿಶಾಮಕ ಹಾಗೂ ಪೊಲೀಸರನ್ನು ನಿಯೋಜಿಸಲಾಗಿದೆ. ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿರುವುದರಿಂದ ರೈತರು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ ಎಂದು ಔರಾದ್ ತಹಶೀಲ್ದಾರ್ ಮಹೇಶ ಪಾಟೀಲ ಪ್ರಜಾವಾಣಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ನಗರ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮೂರನೇ ದಿನವಾದ ಗುರುವಾರವೂ ಮಳೆ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.</p><p>ಮಂಗಳವಾರ ಆರಂಭಗೊಂಡಿರುವ ಮಳೆ ಎಡೆಬಿಡದೆ ಹಗಲು-ರಾತ್ರಿ ಧಾರಾಕಾರವಾಗಿ ಸುರಿಯುತ್ತಿದೆ. ಬುಧವಾರ ಮಳೆಯಲ್ಲೇ ಜನ ಹಬ್ಬದ ಖರೀದಿ ಮಾಡಿ, ಗಣೇಶನ ಪ್ರತಿಷ್ಠಾಪನೆ ಮಾಡಿದ್ದರು. ಸಾರ್ವಜನಿಕ ಗಣೇಶ ಕೂಡ ಪ್ರತಿಷ್ಠಾಪಿಸಲಾಗಿತ್ತು.</p><p>ಮುಂಜಾಗೃತಾ ಕ್ರಮವಾಗಿ ಗುರುವಾರ (ಆ. 28ರಂದು) ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ಶಾಲೆ ಕಾಲೇಜಿಗೆ ರಜೆ ಘೋಷಿಸಲಾಗಿದೆ.</p><p>ರಾತ್ರಿಯಿಂದ ಮಳೆಯ ತೀವ್ರತೆ ಜಾಸ್ತಿಯಾಗಿದೆ. ಅನೇಕ ಕಡೆ ಸೇತುವೆಗಳು ಮುಳುಗಿ ಹೋಗಿ ಕೆಲ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಉದಗೀರ್ಗೆ ಹೋಗುವ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿದೆ. ಎಕಂಬಾ ಬಳಿ ಸೇತುವೆ ಮೇಲಿನಿಂದ ನೀರು ಹರಿಯುತ್ತಿರುವುದರಿಂದ ಜನ-ಜಾನುವಾರು ಓಡಾಟ ಸ್ಥಗಿತವಾಗಿದೆ. ಕೆಲ ಕಡೆ ಅಗ್ನಿಶಾಮಕ ಹಾಗೂ ಪೊಲೀಸರನ್ನು ನಿಯೋಜಿಸಲಾಗಿದೆ. ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿರುವುದರಿಂದ ರೈತರು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ ಎಂದು ಔರಾದ್ ತಹಶೀಲ್ದಾರ್ ಮಹೇಶ ಪಾಟೀಲ ಪ್ರಜಾವಾಣಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>