<p><strong>ಬೀದರ್:</strong> ‘ಹಿಂದೂಗಳು ಜಾತಿ ಜಾತಿಗಳ ಹೆಸರಿನಲ್ಲಿ ಬೇರ್ಪಡಬಾರದು. ಎಲ್ಲರೂ ಒಂದಾಗಬೇಕು’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕ ಶಿವಲಿಂಗ ಕುಂಬಾರ ತಿಳಿಸಿದರು.</p><p>ಗುರು ತೇಗ್ ಬಹಾದ್ದೂರ ಅವರ 350ನೇ ಹುತಾತ್ಮ ದಿನ ಹಾಗೂ ವಂದೇ ಮಾತರಂ ಗೀತೆಗೆ 150 ವರ್ಷಗಳು ಪೂರ್ಣಗೊಂಡಿರುವುದರಿಂದ ಹಿಂದೂ ಸಮ್ಮೇಳನ ಆಯೋಜನಾ ಸಮಿತಿಯಿಂದ ಭಾನುವಾರ ಸಂಜೆ ನಗರದ ಗಣೇಶ ಮೈದಾನದಲ್ಲಿ ಏರ್ಪಡಿಸಿದ್ದ ಹಿಂದೂ ಸಮ್ಮೇಳನದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.</p><p>ಹಿಂದೂ ಸಂಸ್ಕೃತಿ ಉಳಿಸಬೇಕಿದೆ. ಜಾತಿ ಜಾತಿಗಳ ನಡುವೆ ನಾವು ವಿಘಟಿತರಾಗಬಾರದು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಅಂಗವಾಗಿ ಇಡೀ ದೇಶದಾದ್ಯಂತ ಹಿಂದೂ ಸಮ್ಮೇಳನಗಳನ್ನು ಆಯೋಜಿಸಿ ಹಿಂದೂಗಳನ್ನು ಒಟ್ಟುಗೂಡಿಸುವ, ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.</p><p>ದೇಶದ ಎಲ್ಲಾ ಮನೆಗಳಲ್ಲಿ ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸಬೇಕು. ಎಲ್ಲರೂ ಸಂವಿಧಾನಕ್ಕೆ ಗೌರವ ಕೊಟ್ಟು ನಾಗರಿಕ ಕರ್ತವ್ಯ ಪಾಲಿಸಬೇಕು. ಪ್ರಕೃತಿ ಕೂಡ ಉಳಿಸಿ ಬೆಳೆಸಬೇಕು. ಸಾಮರಸ್ಯದಿಂದ ಬಾಳಬೇಕೆಂಬ ತತ್ವದಡಿ ಆರ್ಎಸ್ಎಸ್ ಕೆಲಸ ಮಾಡುತ್ತಿದೆ ಎಂದು ಹೇಳಿದರು.</p><p>ಸಾನ್ನಿಧ್ಯ ವಹಿಸಿದ್ದ ರಾಮಕೃಷ್ಣ ವಿವೇಕಾನಂದ ಆಶ್ರಮದ ಜ್ಯೋತಿರ್ಮಯಾನಂದ ಸ್ವಾಮೀಜಿ ಮಾತನಾಡಿ, ಹಿಂದೂ ಸಮಾಜದ ಸಂಘಟನೆಗೆ ಆರ್ಎಸ್ಎಸ್ ಕೆಲಸ ಮಾಡುತ್ತಿರುವುದು ಶ್ಲಾಘನಾರ್ಹ ಕೆಲಸ. ಈ ಧರ್ಮದಲ್ಲಿ ಅನೇಕ ಮಹಾಪುರುಷರು ಕಾಲಕಾಲಕ್ಕೆ ಸುಧಾರಣೆ ಮಾಡಿದ್ದಾರೆ. 12ನೇ ಶತಮಾನದಲ್ಲಿ ಬಸವಣ್ಣ, 20ನೇ ಶತಮಾನದಲ್ಲಿ ಸ್ವಾಮಿ ವಿವೇಕಾನಂದರು ಜಾಗೃತಿ ಮೂಡಿಸಿದ್ದಾರೆ ಎಂದು ತಿಳಿಸಿದರು.</p><p>ಸಾನ್ನಿಧ್ಯ ವಹಿಸಿದ್ದ ನೌಬಾದ್ ಜ್ಞಾನ ಯೋಗಾಶ್ರಮದ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಈ ಭಾಗಕ್ಕೆ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ಮುಕ್ತಿ ಕೊಟ್ಟಿದ್ದಾರೆ. ಈ ಭಾಗದಲ್ಲಿ ಎಲ್ಲಾದರೂ ಅವರ ಪುತ್ಥಳಿ ನಿರ್ಮಿಸಬೇಕು. ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಅವರ ಹೆಸರಿಡಬೇಕೆಂದು ಹೇಳಿದರು.</p><p>ಪ್ರಮುಖರಾದ ಜಗನ್ನಾಥ ಜಮಾದಾರ, ಶಿವಕುಮಾರ ಉಪ್ಪೆ ಮತ್ತಿತರರು ಪಾಲ್ಗೊಂಡಿದ್ದರು.</p><p><strong>ಗಮನ ಸೆಳೆದ ಮೆರವಣಿಗೆ...</strong></p><p>ಹಿಂದೂ ಸಮ್ಮೇಳನದ ಅಂಗವಾಗಿ ನಡೆದ ಮೆರವಣಿಗೆಯು ಗಮನ ಸೆಳೆಯಿತು. ಕೇಂದ್ರ ಬಸ್ ನಿಲ್ದಾಣ ಸಮೀಪದ ಗುರುನಗರದ ಶಿವಾಲಯ ದೇವಸ್ಥಾನದಿಂದ ಗಣೇಶ ಮೈದಾನ ವರೆಗೆ ಮೆರವಣಿಗೆ ನಡೆಯಿತು.</p><p>ಭಗವಾ ಧ್ವಜಗಳನ್ನು ಹಿಡಿದುಕೊಂಡು ನೂರಾರು ಜನ ಹೆಜ್ಜೆ ಹಾಕಿದರು. ವಿದ್ಯಾರ್ಥಿಗಳು ಲೇಜಿಮ್, ಕೋಲಾಟವಾಡಿ ಗಮನ ಸೆಳೆದರು. ಕೆಲ ಚಿಣ್ಣರು ಯೋಧರ ಪೋಷಾಕು ಧರಿಸಿ ಕಂಗೊಳಿಸಿದರು. ಗುರುನಾನಕ್ ಗೇಟ್, ಮಡಿವಾಳೇಶ್ವರ ವೃತ್ತ, ನೆಹರೂ ಕ್ರೀಡಾಂಗಣದ ಮೂಲಕ ಗಣೇಶ ಮೈದಾನದ ವರೆಗೆ ಮೆರವಣಿಗೆ ನಡೆಯಿತು.</p><p>ಮೆರವಣಿಗೆಯಲ್ಲಿ ನಾಗರಾಜ್ ಕರ್ಪೂರ್, ಗುರುನಾಥ ಜ್ಯಾಂತಿಕರ್, ಗುರುನಾಥ ರಾಜಗೀರಾ, ಸಂಜೀವಕುಮಾರ ಪಾಟೀಲ್, ಅಶೋಕ್ ಕರಂಜಿ, ಶರಣಪ್ಪ ಪಾಟೀಲ್, ಅಶೋಕ್ ಶೀಲವಂತ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಹಿಂದೂಗಳು ಜಾತಿ ಜಾತಿಗಳ ಹೆಸರಿನಲ್ಲಿ ಬೇರ್ಪಡಬಾರದು. ಎಲ್ಲರೂ ಒಂದಾಗಬೇಕು’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕ ಶಿವಲಿಂಗ ಕುಂಬಾರ ತಿಳಿಸಿದರು.</p><p>ಗುರು ತೇಗ್ ಬಹಾದ್ದೂರ ಅವರ 350ನೇ ಹುತಾತ್ಮ ದಿನ ಹಾಗೂ ವಂದೇ ಮಾತರಂ ಗೀತೆಗೆ 150 ವರ್ಷಗಳು ಪೂರ್ಣಗೊಂಡಿರುವುದರಿಂದ ಹಿಂದೂ ಸಮ್ಮೇಳನ ಆಯೋಜನಾ ಸಮಿತಿಯಿಂದ ಭಾನುವಾರ ಸಂಜೆ ನಗರದ ಗಣೇಶ ಮೈದಾನದಲ್ಲಿ ಏರ್ಪಡಿಸಿದ್ದ ಹಿಂದೂ ಸಮ್ಮೇಳನದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.</p><p>ಹಿಂದೂ ಸಂಸ್ಕೃತಿ ಉಳಿಸಬೇಕಿದೆ. ಜಾತಿ ಜಾತಿಗಳ ನಡುವೆ ನಾವು ವಿಘಟಿತರಾಗಬಾರದು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಅಂಗವಾಗಿ ಇಡೀ ದೇಶದಾದ್ಯಂತ ಹಿಂದೂ ಸಮ್ಮೇಳನಗಳನ್ನು ಆಯೋಜಿಸಿ ಹಿಂದೂಗಳನ್ನು ಒಟ್ಟುಗೂಡಿಸುವ, ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.</p><p>ದೇಶದ ಎಲ್ಲಾ ಮನೆಗಳಲ್ಲಿ ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸಬೇಕು. ಎಲ್ಲರೂ ಸಂವಿಧಾನಕ್ಕೆ ಗೌರವ ಕೊಟ್ಟು ನಾಗರಿಕ ಕರ್ತವ್ಯ ಪಾಲಿಸಬೇಕು. ಪ್ರಕೃತಿ ಕೂಡ ಉಳಿಸಿ ಬೆಳೆಸಬೇಕು. ಸಾಮರಸ್ಯದಿಂದ ಬಾಳಬೇಕೆಂಬ ತತ್ವದಡಿ ಆರ್ಎಸ್ಎಸ್ ಕೆಲಸ ಮಾಡುತ್ತಿದೆ ಎಂದು ಹೇಳಿದರು.</p><p>ಸಾನ್ನಿಧ್ಯ ವಹಿಸಿದ್ದ ರಾಮಕೃಷ್ಣ ವಿವೇಕಾನಂದ ಆಶ್ರಮದ ಜ್ಯೋತಿರ್ಮಯಾನಂದ ಸ್ವಾಮೀಜಿ ಮಾತನಾಡಿ, ಹಿಂದೂ ಸಮಾಜದ ಸಂಘಟನೆಗೆ ಆರ್ಎಸ್ಎಸ್ ಕೆಲಸ ಮಾಡುತ್ತಿರುವುದು ಶ್ಲಾಘನಾರ್ಹ ಕೆಲಸ. ಈ ಧರ್ಮದಲ್ಲಿ ಅನೇಕ ಮಹಾಪುರುಷರು ಕಾಲಕಾಲಕ್ಕೆ ಸುಧಾರಣೆ ಮಾಡಿದ್ದಾರೆ. 12ನೇ ಶತಮಾನದಲ್ಲಿ ಬಸವಣ್ಣ, 20ನೇ ಶತಮಾನದಲ್ಲಿ ಸ್ವಾಮಿ ವಿವೇಕಾನಂದರು ಜಾಗೃತಿ ಮೂಡಿಸಿದ್ದಾರೆ ಎಂದು ತಿಳಿಸಿದರು.</p><p>ಸಾನ್ನಿಧ್ಯ ವಹಿಸಿದ್ದ ನೌಬಾದ್ ಜ್ಞಾನ ಯೋಗಾಶ್ರಮದ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಈ ಭಾಗಕ್ಕೆ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ಮುಕ್ತಿ ಕೊಟ್ಟಿದ್ದಾರೆ. ಈ ಭಾಗದಲ್ಲಿ ಎಲ್ಲಾದರೂ ಅವರ ಪುತ್ಥಳಿ ನಿರ್ಮಿಸಬೇಕು. ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಅವರ ಹೆಸರಿಡಬೇಕೆಂದು ಹೇಳಿದರು.</p><p>ಪ್ರಮುಖರಾದ ಜಗನ್ನಾಥ ಜಮಾದಾರ, ಶಿವಕುಮಾರ ಉಪ್ಪೆ ಮತ್ತಿತರರು ಪಾಲ್ಗೊಂಡಿದ್ದರು.</p><p><strong>ಗಮನ ಸೆಳೆದ ಮೆರವಣಿಗೆ...</strong></p><p>ಹಿಂದೂ ಸಮ್ಮೇಳನದ ಅಂಗವಾಗಿ ನಡೆದ ಮೆರವಣಿಗೆಯು ಗಮನ ಸೆಳೆಯಿತು. ಕೇಂದ್ರ ಬಸ್ ನಿಲ್ದಾಣ ಸಮೀಪದ ಗುರುನಗರದ ಶಿವಾಲಯ ದೇವಸ್ಥಾನದಿಂದ ಗಣೇಶ ಮೈದಾನ ವರೆಗೆ ಮೆರವಣಿಗೆ ನಡೆಯಿತು.</p><p>ಭಗವಾ ಧ್ವಜಗಳನ್ನು ಹಿಡಿದುಕೊಂಡು ನೂರಾರು ಜನ ಹೆಜ್ಜೆ ಹಾಕಿದರು. ವಿದ್ಯಾರ್ಥಿಗಳು ಲೇಜಿಮ್, ಕೋಲಾಟವಾಡಿ ಗಮನ ಸೆಳೆದರು. ಕೆಲ ಚಿಣ್ಣರು ಯೋಧರ ಪೋಷಾಕು ಧರಿಸಿ ಕಂಗೊಳಿಸಿದರು. ಗುರುನಾನಕ್ ಗೇಟ್, ಮಡಿವಾಳೇಶ್ವರ ವೃತ್ತ, ನೆಹರೂ ಕ್ರೀಡಾಂಗಣದ ಮೂಲಕ ಗಣೇಶ ಮೈದಾನದ ವರೆಗೆ ಮೆರವಣಿಗೆ ನಡೆಯಿತು.</p><p>ಮೆರವಣಿಗೆಯಲ್ಲಿ ನಾಗರಾಜ್ ಕರ್ಪೂರ್, ಗುರುನಾಥ ಜ್ಯಾಂತಿಕರ್, ಗುರುನಾಥ ರಾಜಗೀರಾ, ಸಂಜೀವಕುಮಾರ ಪಾಟೀಲ್, ಅಶೋಕ್ ಕರಂಜಿ, ಶರಣಪ್ಪ ಪಾಟೀಲ್, ಅಶೋಕ್ ಶೀಲವಂತ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>