<p><strong>ಕಮಲನಗರ (ಬೀದರ್):</strong> ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಹೋಳಸಮುದ್ರ ಗ್ರಾಮದಲ್ಲಿ ನಡೆದಿದೆ.</p><p>ಯೋಗೇಶ ಏಕನಾಥ ಕೊಯ್ಲೆ (31) ಕೊಲೆಯಾದ ವ್ಯಕ್ತಿ. ಕ್ಷುಲ್ಲಕ ಕಾರಣಕ್ಕೆ ರಾಹುಲ್ ಜಾಧವ್ ಎಂಬ ವ್ಯಕ್ತಿ ಯೋಗೇಶ ಏಕನಾಥ ಕೊಯ್ಲೆಯ ಕುತ್ತಿಗೆಗೆ ಮಾರಕಾಸ್ತ್ರದಿಂದ ಇರಿದು ಬುಧವಾರ ರಾತ್ರಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮೃತನ ಹೆಂಡತಿ ರೇಖಾ ಯೋಗೇಶ ದೂರಿನನ್ವಯ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಸಿಪಿಐ ಶ್ರೀಕಾಂತ ಅಲ್ಲಾಪೂರ, ಪಿಎಸ್ಐ ಆಶಾ ರಾಠೋಡ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ (ಬೀದರ್):</strong> ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಹೋಳಸಮುದ್ರ ಗ್ರಾಮದಲ್ಲಿ ನಡೆದಿದೆ.</p><p>ಯೋಗೇಶ ಏಕನಾಥ ಕೊಯ್ಲೆ (31) ಕೊಲೆಯಾದ ವ್ಯಕ್ತಿ. ಕ್ಷುಲ್ಲಕ ಕಾರಣಕ್ಕೆ ರಾಹುಲ್ ಜಾಧವ್ ಎಂಬ ವ್ಯಕ್ತಿ ಯೋಗೇಶ ಏಕನಾಥ ಕೊಯ್ಲೆಯ ಕುತ್ತಿಗೆಗೆ ಮಾರಕಾಸ್ತ್ರದಿಂದ ಇರಿದು ಬುಧವಾರ ರಾತ್ರಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮೃತನ ಹೆಂಡತಿ ರೇಖಾ ಯೋಗೇಶ ದೂರಿನನ್ವಯ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಸಿಪಿಐ ಶ್ರೀಕಾಂತ ಅಲ್ಲಾಪೂರ, ಪಿಎಸ್ಐ ಆಶಾ ರಾಠೋಡ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>