<p><strong>ಬೀದರ್</strong>: ಕರ್ನಾಟಕ ಗೃಹ ಮಂಡಳಿಯು ಬೀದರ್ ತಾಲ್ಲೂಕಿನ ಜನವಾಡ ಹೋಬಳಿಯ ಅಲಿಯಂಬರ್ ಗ್ರಾಮದ ಬಳಿ ವಸತಿ ಯೋಜನೆ ಜಾರಿಗೆ ತರುತ್ತಿದ್ದು, ನಿವೇಶನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ನ.30ರ ವರೆಗೆ ವಿಸ್ತರಿಸಲಾಗಿದೆ.</p>.<p>ಈ ವಸತಿ ಯೋಜನೆಯಡಿ ನಿವೇಶನ ಪಡೆಯಲು ಆಸಕ್ತಿ ಇರುವವರಿಗೆ ನೆರವಾಗಲು ನಗರದ ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಸಹಕಾರ ಆಸ್ಪತ್ರೆಯ ಕಚೇರಿಯಲ್ಲಿ ವಿಶೇಷ ಕೌಂಟರ್ ವ್ಯವಸ್ಥೆ ಮಾಡಲಾಗಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ನೆರವು ನೀಡಲಾಗುತ್ತದೆ ಎಂದು ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕಂಪ್ಯೂಟರ್ ಸೆಂಟರ್ಗೆ ಹೋಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೆಲವರಿಗೆ ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹವರಿಗೆ ನೆರವಾಗಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಆಸಕ್ತರು ಇದರ ಪ್ರಯೋಜನ ಪಡೆಯಬೇಕು ಎಂದು ಗುರುವಾರ ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p>ಕರ್ನಾಟಕ ಗೃಹ ಮಂಡಳಿಯು ಅಲಿಯಂಬರ್ ಗ್ರಾಮದ ಸರ್ವೇ ಸಂಖ್ಯೆ 231/1, 237/1 ಮತ್ತು ಇತರ ಸರ್ವೇ ನಂಬರ್ಗಳಲ್ಲಿರುವ ಒಟ್ಟು 94.12 ಎಕರೆ ಜಮೀನಿನಲ್ಲಿ ಸುಸಜ್ಜಿತ ವಸತಿ ಯೋಜನೆ ರೂಪಿಸಿದೆ. ಈಗಾಗಲೇ ಆನ್ಲೈನ್ನಲ್ಲಿ ಬೇಡಿಕೆ ಸಮೀಕ್ಷೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಆರಂಭಿಕ ಠೇವಣಿಯೊಂದಿಗೆ ಆನ್ಲೈನ್ನಲ್ಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಕರ್ನಾಟಕ ಗೃಹ ಮಂಡಳಿಯು ಬೀದರ್ ತಾಲ್ಲೂಕಿನ ಜನವಾಡ ಹೋಬಳಿಯ ಅಲಿಯಂಬರ್ ಗ್ರಾಮದ ಬಳಿ ವಸತಿ ಯೋಜನೆ ಜಾರಿಗೆ ತರುತ್ತಿದ್ದು, ನಿವೇಶನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ನ.30ರ ವರೆಗೆ ವಿಸ್ತರಿಸಲಾಗಿದೆ.</p>.<p>ಈ ವಸತಿ ಯೋಜನೆಯಡಿ ನಿವೇಶನ ಪಡೆಯಲು ಆಸಕ್ತಿ ಇರುವವರಿಗೆ ನೆರವಾಗಲು ನಗರದ ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಸಹಕಾರ ಆಸ್ಪತ್ರೆಯ ಕಚೇರಿಯಲ್ಲಿ ವಿಶೇಷ ಕೌಂಟರ್ ವ್ಯವಸ್ಥೆ ಮಾಡಲಾಗಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ನೆರವು ನೀಡಲಾಗುತ್ತದೆ ಎಂದು ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕಂಪ್ಯೂಟರ್ ಸೆಂಟರ್ಗೆ ಹೋಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೆಲವರಿಗೆ ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹವರಿಗೆ ನೆರವಾಗಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಆಸಕ್ತರು ಇದರ ಪ್ರಯೋಜನ ಪಡೆಯಬೇಕು ಎಂದು ಗುರುವಾರ ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p>ಕರ್ನಾಟಕ ಗೃಹ ಮಂಡಳಿಯು ಅಲಿಯಂಬರ್ ಗ್ರಾಮದ ಸರ್ವೇ ಸಂಖ್ಯೆ 231/1, 237/1 ಮತ್ತು ಇತರ ಸರ್ವೇ ನಂಬರ್ಗಳಲ್ಲಿರುವ ಒಟ್ಟು 94.12 ಎಕರೆ ಜಮೀನಿನಲ್ಲಿ ಸುಸಜ್ಜಿತ ವಸತಿ ಯೋಜನೆ ರೂಪಿಸಿದೆ. ಈಗಾಗಲೇ ಆನ್ಲೈನ್ನಲ್ಲಿ ಬೇಡಿಕೆ ಸಮೀಕ್ಷೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಆರಂಭಿಕ ಠೇವಣಿಯೊಂದಿಗೆ ಆನ್ಲೈನ್ನಲ್ಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>