<p><strong>ಬೀದರ್:</strong> ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಭಾನುವಾರ ಗಂಟೆಗೂ ಹೆಚ್ಚು ಕಾಲ ಬಿರುಸಿನ ಮಳೆಯಾಯಿತು.</p> <p>ಸಂಜೆ 4 ಗಂಟೆ ಸುಮಾರಿಗೆ ಆರಂಭಗೊಂಡ ಗುಡುಗು ಸಹಿತ ಜೋರು ಮಳೆ ಹೊತ್ತಾಗುವ ತನಕ ಎಡೆಬಿಡದೆ ಸುರಿಯಿತು. ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಮೋಡ ಕವಿದ ವಾತಾವರಣ ಇತ್ತು. ಇಂದಾದರೂ ಮಳೆ ಬಿಡುವು ಕೊಟ್ಟಿತಲ್ಲ ಎಂದು ಜನ ಸಮಾಧಾನಪಟ್ಟಿದ್ದರು. ಆದರೆ, ಸಂಜೆ ಪುನಃ ಜೋರು ಮಳೆಯಾಯಿತು. </p><p>ಸತತ ಐದನೇ ದಿನವೂ ಮಳೆಯಾದ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿತು. ಬೀದರ್ ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲೂ ವರ್ಷಧಾರೆಯಾಗಿದೆ.</p><p><strong>ಗುಡುಗು ಸಹಿತ ಮಳೆ</strong></p><p>ಹುಲಸೂರ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಭಾನುವಾರ ದಿನವಿಡೀ ಜಿಟಿ ಜಿಟಿ ಮಳೆ ಸುರಿದಿದೆ.</p><p>ಹುಲಸೂರ, ಮಿರಕಲ, ಗಡಿಗೌಡಗಾಂವ, ವಾಂಝರಖೆಡ್, ಮೇಹಕರ ಸೇರಿದಂತೆ ಇತರೆಡೆ ಅರ್ಧ ತಾಸು ಸಿಡಿಲು ಸಹಿತ ಜೋರಾದ ಮಳೆ ಸುರಿದಿದೆ. ಬೇಲೂರ, ಗೋರಟಾ, ಮುಚಳಂಬ ಸೇರಿದಂತೆ ಇತರೆಡೆ ಜಿಟಿ ಜಿಟಿ ಮಳೆ ಸುರಿದಿದೆ.</p><p>ಇಲ್ಲಿವರೆಗೂ ಬಿದ್ದ ಮಳೆಯಿಂದ ಯಾವುದೇ ಜೀವ ಹಾನಿ ಆಗಿಲ್ಲ ಎಂದು ತಹಶೀಲ್ದಾರ್ ಶಿವಾನಂದ ಮೇತ್ರೆ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಭಾನುವಾರ ಗಂಟೆಗೂ ಹೆಚ್ಚು ಕಾಲ ಬಿರುಸಿನ ಮಳೆಯಾಯಿತು.</p> <p>ಸಂಜೆ 4 ಗಂಟೆ ಸುಮಾರಿಗೆ ಆರಂಭಗೊಂಡ ಗುಡುಗು ಸಹಿತ ಜೋರು ಮಳೆ ಹೊತ್ತಾಗುವ ತನಕ ಎಡೆಬಿಡದೆ ಸುರಿಯಿತು. ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಮೋಡ ಕವಿದ ವಾತಾವರಣ ಇತ್ತು. ಇಂದಾದರೂ ಮಳೆ ಬಿಡುವು ಕೊಟ್ಟಿತಲ್ಲ ಎಂದು ಜನ ಸಮಾಧಾನಪಟ್ಟಿದ್ದರು. ಆದರೆ, ಸಂಜೆ ಪುನಃ ಜೋರು ಮಳೆಯಾಯಿತು. </p><p>ಸತತ ಐದನೇ ದಿನವೂ ಮಳೆಯಾದ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿತು. ಬೀದರ್ ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲೂ ವರ್ಷಧಾರೆಯಾಗಿದೆ.</p><p><strong>ಗುಡುಗು ಸಹಿತ ಮಳೆ</strong></p><p>ಹುಲಸೂರ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಭಾನುವಾರ ದಿನವಿಡೀ ಜಿಟಿ ಜಿಟಿ ಮಳೆ ಸುರಿದಿದೆ.</p><p>ಹುಲಸೂರ, ಮಿರಕಲ, ಗಡಿಗೌಡಗಾಂವ, ವಾಂಝರಖೆಡ್, ಮೇಹಕರ ಸೇರಿದಂತೆ ಇತರೆಡೆ ಅರ್ಧ ತಾಸು ಸಿಡಿಲು ಸಹಿತ ಜೋರಾದ ಮಳೆ ಸುರಿದಿದೆ. ಬೇಲೂರ, ಗೋರಟಾ, ಮುಚಳಂಬ ಸೇರಿದಂತೆ ಇತರೆಡೆ ಜಿಟಿ ಜಿಟಿ ಮಳೆ ಸುರಿದಿದೆ.</p><p>ಇಲ್ಲಿವರೆಗೂ ಬಿದ್ದ ಮಳೆಯಿಂದ ಯಾವುದೇ ಜೀವ ಹಾನಿ ಆಗಿಲ್ಲ ಎಂದು ತಹಶೀಲ್ದಾರ್ ಶಿವಾನಂದ ಮೇತ್ರೆ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>