<p><strong>ಹುಮನಾಬಾದ್ (ಬೀದರ್ ಜಿಲ್ಲೆ):</strong> ಮಗಳನ್ನು ಚುಡಾಯಿಸುತ್ತಿದ್ದ ಯುವಕನನ್ನು ಪ್ರಶ್ನಿಸಲು ಆತನ ಮನೆಗೆ ಹೋದ ತಂದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬುಧವಾರ ತಾಲ್ಲೂಕಿನ ಹಳ್ಳಿಖೇಡ್ ಕೆ. ಗ್ರಾಮದಲ್ಲಿ ನಡೆದಿದೆ.</p>.<p>ಸಂಜುಕುಮಾರ ಮರೆಪ್ಪ ಮೆಲಕೇರಿ (44) ಕೊಲೆಯಾದ ವ್ಯಕ್ತಿ.</p>.<p>‘ಸಂಜುಕುಮಾರ ಅವರ ಮಗಳನ್ನು ಯುವಕ ಅವಿನಾಶ ಚುಡಾಯಿಸುತ್ತಿದ್ದ. ಈ ಬಗ್ಗೆ ವಿಚಾರಿಸಲು ಮನೆಗೆ ಹೋದ ಸಮಯದಲ್ಲಿ ಅವಿನಾಶ ಸಂಜುಕುಮಾರ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರ ಗಾಯವಾಗಿದ್ದ ಸಂಜುಕುಮಾರ ಅವರನ್ನು ಕಲಬುರಗಿಯ ಜಿಮ್ಸ್ಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿ ಅವಿನಾಶನನ್ನು ಬಂಧಿಸಲಾಗಿದೆ. ಹತ್ತು ಜನರ ವಿರುದ್ಧ ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. </p>.<p><span class="bold"><strong>ಎಸ್ಪಿ ಭೇಟಿ:</strong> </span>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಳ್ಳಿಖೇಡ್ ಕೆ. ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಡಿವೈಎಸ್ಪಿ ಮಡೋಳಪ್ಪ ಪಿ.ಎಸ್, ಸಿಪಿಐ ರವೀಂದ್ರನಾಥ್, ಪಿಎಸ್ಐ ಬಸವಲಿಂಗಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್ (ಬೀದರ್ ಜಿಲ್ಲೆ):</strong> ಮಗಳನ್ನು ಚುಡಾಯಿಸುತ್ತಿದ್ದ ಯುವಕನನ್ನು ಪ್ರಶ್ನಿಸಲು ಆತನ ಮನೆಗೆ ಹೋದ ತಂದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬುಧವಾರ ತಾಲ್ಲೂಕಿನ ಹಳ್ಳಿಖೇಡ್ ಕೆ. ಗ್ರಾಮದಲ್ಲಿ ನಡೆದಿದೆ.</p>.<p>ಸಂಜುಕುಮಾರ ಮರೆಪ್ಪ ಮೆಲಕೇರಿ (44) ಕೊಲೆಯಾದ ವ್ಯಕ್ತಿ.</p>.<p>‘ಸಂಜುಕುಮಾರ ಅವರ ಮಗಳನ್ನು ಯುವಕ ಅವಿನಾಶ ಚುಡಾಯಿಸುತ್ತಿದ್ದ. ಈ ಬಗ್ಗೆ ವಿಚಾರಿಸಲು ಮನೆಗೆ ಹೋದ ಸಮಯದಲ್ಲಿ ಅವಿನಾಶ ಸಂಜುಕುಮಾರ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರ ಗಾಯವಾಗಿದ್ದ ಸಂಜುಕುಮಾರ ಅವರನ್ನು ಕಲಬುರಗಿಯ ಜಿಮ್ಸ್ಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿ ಅವಿನಾಶನನ್ನು ಬಂಧಿಸಲಾಗಿದೆ. ಹತ್ತು ಜನರ ವಿರುದ್ಧ ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. </p>.<p><span class="bold"><strong>ಎಸ್ಪಿ ಭೇಟಿ:</strong> </span>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಳ್ಳಿಖೇಡ್ ಕೆ. ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಡಿವೈಎಸ್ಪಿ ಮಡೋಳಪ್ಪ ಪಿ.ಎಸ್, ಸಿಪಿಐ ರವೀಂದ್ರನಾಥ್, ಪಿಎಸ್ಐ ಬಸವಲಿಂಗಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>