<p><strong>ಬೀದರ್</strong>: ರೈಲ್ವೆ ಖಾತೆ ರಾಜ್ಯ ಸಚಿವರಾದ ನಂತರ ಮೊದಲ ಬಾರಿಗೆ ವಿ. ಸೋಮಣ್ಣನವರು ಶನಿವಾರ ಬೀದರ್ ಜಿಲ್ಲೆಗೆ ಭೇಟಿ ನೀಡಿದರು.</p><p>ಹೈದರಾಬಾದ್ನಿಂದ ವಿಶೇಷ ರೈಲಿನಲ್ಲಿ ನಗರದ ರೈಲು ನಿಲ್ದಾಣಕ್ಕೆ ಆಗಮಿಸಿದರು. ಅಮೃತ ಭಾರತ ಯೋಜನೆಯಡಿ ಕೈಗೆತ್ತಿಕೊಂಡಿರುವ ನಗರದ ರೈಲು ನಿಲ್ದಾಣದ ನವೀಕರಣ ಕಾಮಗಾರಿಯನ್ನು ವೀಕ್ಷಿಸಿ ರೈಲ್ವೆ ಅಧಿಕಾರಿಗಳಿಂದ ಮಾಹಿತಿ ಪಡೆದರು.</p><p>ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬೀದರ್–ಹೈದರಾಬಾದ್ ನಡುವೆ ಸದ್ಯ ಏಕಪಥವಿದೆ. 120 ಕಿ.ಮೀ ಈ ರೈಲು ಮಾರ್ಗವನ್ನು ಡಬ್ಲಿಂಗ್ ಮಾಡಲು ಯೋಜಿಸಲಾಗಿದೆ. ಇದಕ್ಕಾಗಿ ₹400 ಕೊಟಿ ಖರ್ಚು ಮಾಡಲಾಗುವುದು. ₹1,700 ಕೋಟಿಯಲ್ಲಿ ಹೈದರಾಬಾದ್– ಬೀದರ್ ಮಾರ್ಗ ಮಧ್ಯದಲ್ಲಿ ಕವಚ ಯೋಜನೆ ಜಾರಿಗೆ ತರಲಾಗುವುದು. ಎಲ್ಲ ಅನುದಾನ ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.</p><p>ಹೈದರಾಬಾದ್–ಬೀದರ್–ಕಲಬುರಗಿ ನಡುವೆ ಡೆಮು ರೈಲು ಆರಂಭಿಸಲು ಚಿಂತನೆ ನಡೆದಿದೆ. ಬೀದರ್– ಮೆಟಲ್ಕುಂಟಾ ಮಧ್ಯದಲ್ಲಿ ₹50 ಕೋಟಿಯಲ್ಲಿ ಸುಸಜ್ಜಿತ ನಿಲ್ದಾಣ ಸ್ಥಾಪಿಸಲು ಉದ್ದೇಶಿಸಲಾಗಿದೆ. ಬೀದರ್–ಹೈದರಾಬಾದ್, ಬೀದರ್–ಬೆಂಗಳೂರು ನಡುವೆ ವಂದೇ ಭಾರತ್ ಆರಂಭಿಸಬೇಕೆಂಬ ಬೇಡಿಕೆ ಇದೆ. ಅದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.</p><p>ಸಿಕಂದರಾಬಾದ್ನಿಂದ ಬೀದರ್ವರೆಗೆ 50 ಎಲ್ಸಿ ಗೇಟ್ಗಳು ಬರುತ್ತವೆ. ಮೂರು ವರ್ಷಗಳಲ್ಲಿ ಇವುಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಎಲ್ಲ ಕಡೆಗಳಲ್ಲಿ ಕೆಳಸೇತುವೆ ಹಾಗೂ ಮೇಲ್ಸೇತುವೆ ನಿರ್ಮಿಸಲಾಗುವುದು ಎಂದು ಹೇಳಿದರು.</p>.<p>ಪೌರಾಡಳಿತ ಸಚಿವ ರಹೀಂ ಖಾನ್, ಸಂಸದ ಸಾಗರ್ ಖಂಡ್ರೆ, ಶಾಸಕರಾದ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಡಾ. ಸಿದ್ದಲಿಂಗಪ್ಪ ಪಾಟೀಲ ಮತ್ತಿತರರು ಹಾಜರಿದ್ದರು.</p><p><strong>ಕಮಲ್ ಹಾಸನ್ ವಿಷಾದ ವ್ಯಕ್ತಪಡಿಸದಿರುವುದು ಸರಿಯಲ್ಲ</strong></p><p>‘ತಾನು ಏನು ಮಾತನಾಡಿದ್ದೇನೆ ಅದರ ಬಗ್ಗೆ ವಿಷಾದ ವ್ಯಕ್ತಪಡಿಸದೇ ಇರುವ ನಟ ಕಮಲ್ ಹಾಸನ್ ಅವರ ನಿಲುವು ಸರಿಯಾದುದಲ್ಲ’ ಎಂದು ಸಚಿವ ವಿ. ಸೋಮಣ್ಣ ಹೇಳಿದರು.</p><p>ಇದು ಒಕ್ಕೂಟ ವ್ಯವಸ್ಥೆಯ ದೇಶ. ಯಾರು ಕೂಡ ಯಾರ ಬಗ್ಗೆಯೂ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು.</p><p><strong>ಸಿಎಂಗೆ ಪತ್ರ–ಸೋಮಣ್ಣ</strong></p><p>‘ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದೇನೆ’ ಎಂದು ಸಚಿವ ವಿ. ಸೋಮಣ್ಣ ಹೇಳಿದರು.</p><p>ಅನಂತಕುಮಾರ ಅವರು ಹಿಂದೆ ಕೇಂದ್ರ ಸಚಿವರಿದ್ದಾಗ ಜನೌಷಧಿ ಕೇಂದ್ರಗಳನ್ನು ಆರಂಭಿಸಿದ್ದರು. ಅವುಗಳು ಜೀವರಕ್ಷಕದಂತೆ ಕೆಲಸ ನಿರ್ವಹಿಸುತ್ತಿವೆ. ಅವುಗಳನ್ನು ಬಂದ್ ಮಾಡಿದರೆ ಯಾವುದೇ ಪ್ರಯೋಜನವಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ರೈಲ್ವೆ ಖಾತೆ ರಾಜ್ಯ ಸಚಿವರಾದ ನಂತರ ಮೊದಲ ಬಾರಿಗೆ ವಿ. ಸೋಮಣ್ಣನವರು ಶನಿವಾರ ಬೀದರ್ ಜಿಲ್ಲೆಗೆ ಭೇಟಿ ನೀಡಿದರು.</p><p>ಹೈದರಾಬಾದ್ನಿಂದ ವಿಶೇಷ ರೈಲಿನಲ್ಲಿ ನಗರದ ರೈಲು ನಿಲ್ದಾಣಕ್ಕೆ ಆಗಮಿಸಿದರು. ಅಮೃತ ಭಾರತ ಯೋಜನೆಯಡಿ ಕೈಗೆತ್ತಿಕೊಂಡಿರುವ ನಗರದ ರೈಲು ನಿಲ್ದಾಣದ ನವೀಕರಣ ಕಾಮಗಾರಿಯನ್ನು ವೀಕ್ಷಿಸಿ ರೈಲ್ವೆ ಅಧಿಕಾರಿಗಳಿಂದ ಮಾಹಿತಿ ಪಡೆದರು.</p><p>ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬೀದರ್–ಹೈದರಾಬಾದ್ ನಡುವೆ ಸದ್ಯ ಏಕಪಥವಿದೆ. 120 ಕಿ.ಮೀ ಈ ರೈಲು ಮಾರ್ಗವನ್ನು ಡಬ್ಲಿಂಗ್ ಮಾಡಲು ಯೋಜಿಸಲಾಗಿದೆ. ಇದಕ್ಕಾಗಿ ₹400 ಕೊಟಿ ಖರ್ಚು ಮಾಡಲಾಗುವುದು. ₹1,700 ಕೋಟಿಯಲ್ಲಿ ಹೈದರಾಬಾದ್– ಬೀದರ್ ಮಾರ್ಗ ಮಧ್ಯದಲ್ಲಿ ಕವಚ ಯೋಜನೆ ಜಾರಿಗೆ ತರಲಾಗುವುದು. ಎಲ್ಲ ಅನುದಾನ ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.</p><p>ಹೈದರಾಬಾದ್–ಬೀದರ್–ಕಲಬುರಗಿ ನಡುವೆ ಡೆಮು ರೈಲು ಆರಂಭಿಸಲು ಚಿಂತನೆ ನಡೆದಿದೆ. ಬೀದರ್– ಮೆಟಲ್ಕುಂಟಾ ಮಧ್ಯದಲ್ಲಿ ₹50 ಕೋಟಿಯಲ್ಲಿ ಸುಸಜ್ಜಿತ ನಿಲ್ದಾಣ ಸ್ಥಾಪಿಸಲು ಉದ್ದೇಶಿಸಲಾಗಿದೆ. ಬೀದರ್–ಹೈದರಾಬಾದ್, ಬೀದರ್–ಬೆಂಗಳೂರು ನಡುವೆ ವಂದೇ ಭಾರತ್ ಆರಂಭಿಸಬೇಕೆಂಬ ಬೇಡಿಕೆ ಇದೆ. ಅದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.</p><p>ಸಿಕಂದರಾಬಾದ್ನಿಂದ ಬೀದರ್ವರೆಗೆ 50 ಎಲ್ಸಿ ಗೇಟ್ಗಳು ಬರುತ್ತವೆ. ಮೂರು ವರ್ಷಗಳಲ್ಲಿ ಇವುಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಎಲ್ಲ ಕಡೆಗಳಲ್ಲಿ ಕೆಳಸೇತುವೆ ಹಾಗೂ ಮೇಲ್ಸೇತುವೆ ನಿರ್ಮಿಸಲಾಗುವುದು ಎಂದು ಹೇಳಿದರು.</p>.<p>ಪೌರಾಡಳಿತ ಸಚಿವ ರಹೀಂ ಖಾನ್, ಸಂಸದ ಸಾಗರ್ ಖಂಡ್ರೆ, ಶಾಸಕರಾದ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಡಾ. ಸಿದ್ದಲಿಂಗಪ್ಪ ಪಾಟೀಲ ಮತ್ತಿತರರು ಹಾಜರಿದ್ದರು.</p><p><strong>ಕಮಲ್ ಹಾಸನ್ ವಿಷಾದ ವ್ಯಕ್ತಪಡಿಸದಿರುವುದು ಸರಿಯಲ್ಲ</strong></p><p>‘ತಾನು ಏನು ಮಾತನಾಡಿದ್ದೇನೆ ಅದರ ಬಗ್ಗೆ ವಿಷಾದ ವ್ಯಕ್ತಪಡಿಸದೇ ಇರುವ ನಟ ಕಮಲ್ ಹಾಸನ್ ಅವರ ನಿಲುವು ಸರಿಯಾದುದಲ್ಲ’ ಎಂದು ಸಚಿವ ವಿ. ಸೋಮಣ್ಣ ಹೇಳಿದರು.</p><p>ಇದು ಒಕ್ಕೂಟ ವ್ಯವಸ್ಥೆಯ ದೇಶ. ಯಾರು ಕೂಡ ಯಾರ ಬಗ್ಗೆಯೂ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು.</p><p><strong>ಸಿಎಂಗೆ ಪತ್ರ–ಸೋಮಣ್ಣ</strong></p><p>‘ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದೇನೆ’ ಎಂದು ಸಚಿವ ವಿ. ಸೋಮಣ್ಣ ಹೇಳಿದರು.</p><p>ಅನಂತಕುಮಾರ ಅವರು ಹಿಂದೆ ಕೇಂದ್ರ ಸಚಿವರಿದ್ದಾಗ ಜನೌಷಧಿ ಕೇಂದ್ರಗಳನ್ನು ಆರಂಭಿಸಿದ್ದರು. ಅವುಗಳು ಜೀವರಕ್ಷಕದಂತೆ ಕೆಲಸ ನಿರ್ವಹಿಸುತ್ತಿವೆ. ಅವುಗಳನ್ನು ಬಂದ್ ಮಾಡಿದರೆ ಯಾವುದೇ ಪ್ರಯೋಜನವಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>