ಜಯಂತಿ ಅಂಗವಾಗಿ ನಗರದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,‘ಪ್ರತಿ ವರ್ಷದಂತೆ ಈ ವರ್ಷವೂ ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ಎಲ್ಲರೂ ಸೇರಿ ಆಚರಿಸೋಣ. ಎಲ್ಲ ಸರ್ಕಾರಿ ಕಚೇರಿ, ಶಾಲಾ, ಕಾಲೇಜುಗಳಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ಜಗಜೀವನರಾಮ್ ಅವರ ಮೂರ್ತಿ ಸ್ವಚ್ಛಗೊಳಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ’ ಎಂದರು.