<p><strong>ಕೌಠಾ (ಬಿ)/ಜನವಾಡ (ಬೀದರ್ ಜಿಲ್ಲೆ):</strong> ಬೀದರ್ ತಾಲ್ಲೂಕಿನ ಜನವಾಡ ಹಾಗೂ ಔರಾದ್ ತಾಲ್ಲೂಕಿನ ಕೌಠಾ (ಬಿ) ದಲ್ಲಿ ಶುಕ್ರವಾರ ಮೊಸಳೆ ಕಾಣಿಸಿಕೊಂಡಿದೆ.</p><p>ಜನವಾಡ ಸಮೀಪದ ಮಹಾದೇವ ಮಂದಿರ ಬಳಿಯ ರಸ್ತೆಯಲ್ಲಿ ಗುರುವಾರ ರಾತ್ರಿ ಮೊಸಳೆ ಪತ್ತೆಯಾಗಿದೆ.</p><p>ಮೊಸಳೆ ಕಂಡ ಕೂಡಲೇ ಗ್ರಾಮಸ್ಥರು ಕಂಟ್ರೋಲ್ ರೂಂಗೆ ಮಾಹಿತಿ ಮುಟ್ಟಿಸಿದ್ದಾರೆ. ಬಳಿಕ ಅವರು ಅರಣ್ಯ ಇಲಾಖೆಯವರಿಗೆ ಮಾಹಿತಿ ರವಾನಿಸಿದ್ದಾರೆ.</p><p>ಶುಕ್ರವಾರ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಮೊಸಳೆ ಕಾಣಿಸಿಲ್ಲ.</p><p>ಮೊಸಳೆ ಪತ್ತೆಯಾದ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಯಿಂದ ತಪಾಸಣೆ ನಡೆಸಲಾಗಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಎಲ್ಲೂ ಮೊಸಳೆ ಗುರುತು ಪತ್ತೆಯಾಗಿಲ್ಲ ಎಂದು ಬೀದರ್ ವಲಯ ಅರಣ್ಯ ಅಧಿಕಾರಿ ವಿಜಯಕುಮಾರ ಜಾಧವ್ ತಿಳಿಸಿದ್ದಾರೆ.</p><p>ಹತ್ತಿರವೇ ಇರುವ ಮಾಂಜ್ರಾ ನದಿಯಲ್ಲಿ ನೀರು ಕಡಿಮೆಯಾದ ಕಾರಣ ಮೊಸಳೆ ಹೊರಗೆ ಬಂದಿದೆ. ಪುನಃ ಅದು ನದಿಯೊಳಗೆ ಹೋಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.</p><p>ಕೌಠಾ (ಬಿ) ಗ್ರಾಮದಲ್ಲಿ ಡಂಗುರ ಸಾರಲಾಗಿದೆ. ನದಿ ಪಾತ್ರದಲ್ಲಿ ಜನ ಓಡಾಡಬಾರದು. ಜಾನುವಾರುಗಳನ್ನು ಮೇಯಿಸಬಾರದು. ಎಚ್ಚರಿಕೆ ವಹಿಸಬೇಕೆಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೌಠಾ (ಬಿ)/ಜನವಾಡ (ಬೀದರ್ ಜಿಲ್ಲೆ):</strong> ಬೀದರ್ ತಾಲ್ಲೂಕಿನ ಜನವಾಡ ಹಾಗೂ ಔರಾದ್ ತಾಲ್ಲೂಕಿನ ಕೌಠಾ (ಬಿ) ದಲ್ಲಿ ಶುಕ್ರವಾರ ಮೊಸಳೆ ಕಾಣಿಸಿಕೊಂಡಿದೆ.</p><p>ಜನವಾಡ ಸಮೀಪದ ಮಹಾದೇವ ಮಂದಿರ ಬಳಿಯ ರಸ್ತೆಯಲ್ಲಿ ಗುರುವಾರ ರಾತ್ರಿ ಮೊಸಳೆ ಪತ್ತೆಯಾಗಿದೆ.</p><p>ಮೊಸಳೆ ಕಂಡ ಕೂಡಲೇ ಗ್ರಾಮಸ್ಥರು ಕಂಟ್ರೋಲ್ ರೂಂಗೆ ಮಾಹಿತಿ ಮುಟ್ಟಿಸಿದ್ದಾರೆ. ಬಳಿಕ ಅವರು ಅರಣ್ಯ ಇಲಾಖೆಯವರಿಗೆ ಮಾಹಿತಿ ರವಾನಿಸಿದ್ದಾರೆ.</p><p>ಶುಕ್ರವಾರ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಮೊಸಳೆ ಕಾಣಿಸಿಲ್ಲ.</p><p>ಮೊಸಳೆ ಪತ್ತೆಯಾದ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಯಿಂದ ತಪಾಸಣೆ ನಡೆಸಲಾಗಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಎಲ್ಲೂ ಮೊಸಳೆ ಗುರುತು ಪತ್ತೆಯಾಗಿಲ್ಲ ಎಂದು ಬೀದರ್ ವಲಯ ಅರಣ್ಯ ಅಧಿಕಾರಿ ವಿಜಯಕುಮಾರ ಜಾಧವ್ ತಿಳಿಸಿದ್ದಾರೆ.</p><p>ಹತ್ತಿರವೇ ಇರುವ ಮಾಂಜ್ರಾ ನದಿಯಲ್ಲಿ ನೀರು ಕಡಿಮೆಯಾದ ಕಾರಣ ಮೊಸಳೆ ಹೊರಗೆ ಬಂದಿದೆ. ಪುನಃ ಅದು ನದಿಯೊಳಗೆ ಹೋಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.</p><p>ಕೌಠಾ (ಬಿ) ಗ್ರಾಮದಲ್ಲಿ ಡಂಗುರ ಸಾರಲಾಗಿದೆ. ನದಿ ಪಾತ್ರದಲ್ಲಿ ಜನ ಓಡಾಡಬಾರದು. ಜಾನುವಾರುಗಳನ್ನು ಮೇಯಿಸಬಾರದು. ಎಚ್ಚರಿಕೆ ವಹಿಸಬೇಕೆಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>