<p><strong>ಕೌಠಾ (ಬಿ)/ಜನವಾಡ (ಬೀದರ್ ಜಿಲ್ಲೆ):</strong> ಬೀದರ್ ತಾಲ್ಲೂಕಿನ ಜನವಾಡ ಹಾಗೂ ಔರಾದ್ ತಾಲ್ಲೂಕಿನ ಕೌಠಾ (ಬಿ) ದಲ್ಲಿ ಶುಕ್ರವಾರ ಮೊಸಳೆ ಕಾಣಿಸಿಕೊಂಡಿದೆ.</p><p>ಜನವಾಡ ಸಮೀಪದ ಮಹಾದೇವ ಮಂದಿರ ಬಳಿಯ ರಸ್ತೆಯಲ್ಲಿ ಗುರುವಾರ ರಾತ್ರಿ ಮೊಸಳೆ ಪತ್ತೆಯಾಗಿದೆ.</p><p>ಮೊಸಳೆ ಕಂಡ ಕೂಡಲೇ ಗ್ರಾಮಸ್ಥರು ಕಂಟ್ರೋಲ್ ರೂಂಗೆ ಮಾಹಿತಿ ಮುಟ್ಟಿಸಿದ್ದಾರೆ. ಬಳಿಕ ಅವರು ಅರಣ್ಯ ಇಲಾಖೆಯವರಿಗೆ ಮಾಹಿತಿ ರವಾನಿಸಿದ್ದಾರೆ.</p><p>ಶುಕ್ರವಾರ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಮೊಸಳೆ ಕಾಣಿಸಿಲ್ಲ.</p><p>ಮೊಸಳೆ ಪತ್ತೆಯಾದ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಯಿಂದ ತಪಾಸಣೆ ನಡೆಸಲಾಗಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಎಲ್ಲೂ ಮೊಸಳೆ ಗುರುತು ಪತ್ತೆಯಾಗಿಲ್ಲ ಎಂದು ಬೀದರ್ ವಲಯ ಅರಣ್ಯ ಅಧಿಕಾರಿ ವಿಜಯಕುಮಾರ ಜಾಧವ್ ತಿಳಿಸಿದ್ದಾರೆ.</p><p>ಹತ್ತಿರವೇ ಇರುವ ಮಾಂಜ್ರಾ ನದಿಯಲ್ಲಿ ನೀರು ಕಡಿಮೆಯಾದ ಕಾರಣ ಮೊಸಳೆ ಹೊರಗೆ ಬಂದಿದೆ. ಪುನಃ ಅದು ನದಿಯೊಳಗೆ ಹೋಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.</p><p>ಕೌಠಾ (ಬಿ) ಗ್ರಾಮದಲ್ಲಿ ಡಂಗುರ ಸಾರಲಾಗಿದೆ. ನದಿ ಪಾತ್ರದಲ್ಲಿ ಜನ ಓಡಾಡಬಾರದು. ಜಾನುವಾರುಗಳನ್ನು ಮೇಯಿಸಬಾರದು. ಎಚ್ಚರಿಕೆ ವಹಿಸಬೇಕೆಂದು ತಿಳಿಸಲಾಗಿದೆ.</p>
<p><strong>ಕೌಠಾ (ಬಿ)/ಜನವಾಡ (ಬೀದರ್ ಜಿಲ್ಲೆ):</strong> ಬೀದರ್ ತಾಲ್ಲೂಕಿನ ಜನವಾಡ ಹಾಗೂ ಔರಾದ್ ತಾಲ್ಲೂಕಿನ ಕೌಠಾ (ಬಿ) ದಲ್ಲಿ ಶುಕ್ರವಾರ ಮೊಸಳೆ ಕಾಣಿಸಿಕೊಂಡಿದೆ.</p><p>ಜನವಾಡ ಸಮೀಪದ ಮಹಾದೇವ ಮಂದಿರ ಬಳಿಯ ರಸ್ತೆಯಲ್ಲಿ ಗುರುವಾರ ರಾತ್ರಿ ಮೊಸಳೆ ಪತ್ತೆಯಾಗಿದೆ.</p><p>ಮೊಸಳೆ ಕಂಡ ಕೂಡಲೇ ಗ್ರಾಮಸ್ಥರು ಕಂಟ್ರೋಲ್ ರೂಂಗೆ ಮಾಹಿತಿ ಮುಟ್ಟಿಸಿದ್ದಾರೆ. ಬಳಿಕ ಅವರು ಅರಣ್ಯ ಇಲಾಖೆಯವರಿಗೆ ಮಾಹಿತಿ ರವಾನಿಸಿದ್ದಾರೆ.</p><p>ಶುಕ್ರವಾರ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಮೊಸಳೆ ಕಾಣಿಸಿಲ್ಲ.</p><p>ಮೊಸಳೆ ಪತ್ತೆಯಾದ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಯಿಂದ ತಪಾಸಣೆ ನಡೆಸಲಾಗಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಎಲ್ಲೂ ಮೊಸಳೆ ಗುರುತು ಪತ್ತೆಯಾಗಿಲ್ಲ ಎಂದು ಬೀದರ್ ವಲಯ ಅರಣ್ಯ ಅಧಿಕಾರಿ ವಿಜಯಕುಮಾರ ಜಾಧವ್ ತಿಳಿಸಿದ್ದಾರೆ.</p><p>ಹತ್ತಿರವೇ ಇರುವ ಮಾಂಜ್ರಾ ನದಿಯಲ್ಲಿ ನೀರು ಕಡಿಮೆಯಾದ ಕಾರಣ ಮೊಸಳೆ ಹೊರಗೆ ಬಂದಿದೆ. ಪುನಃ ಅದು ನದಿಯೊಳಗೆ ಹೋಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.</p><p>ಕೌಠಾ (ಬಿ) ಗ್ರಾಮದಲ್ಲಿ ಡಂಗುರ ಸಾರಲಾಗಿದೆ. ನದಿ ಪಾತ್ರದಲ್ಲಿ ಜನ ಓಡಾಡಬಾರದು. ಜಾನುವಾರುಗಳನ್ನು ಮೇಯಿಸಬಾರದು. ಎಚ್ಚರಿಕೆ ವಹಿಸಬೇಕೆಂದು ತಿಳಿಸಲಾಗಿದೆ.</p>