<p>ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಅಂಗವಾಗಿ ಏ. 11ರಂದು ನಗರದಲ್ಲಿ ಅದ್ದೂರಿ ಮೆರವಣಿಗೆ ನಡೆಸಲು ಸಮ್ಮೇಳನ ಮೆರವಣಿಗೆ ಸಮಿತಿ ನಿರ್ಧರಿಸಿದೆ.</p>.<p>ನಗರದಲ್ಲಿ ನಡೆದ ಸಮ್ಮೇಳನ ಮೆರವಣಿಗೆ ಸಮಿತಿಯ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು.</p>.<p>ಅಂದು ಬೆಳಿಗ್ಗೆ ನಗರದ ಬಸವೇಶ್ವರ ವೃತ್ತದಿಂದ ಭಗತ್ಸಿಂಗ್ ವೃತ್ತ, ಅಂಬೇಡ್ಕರ್ ವೃತ್ತ, ಸಿದ್ಧಾರ್ಥ ಕಾಲೇಜು ಮಾರ್ಗವಾಗಿ ಸಮ್ಮೇಳನ ಸ್ಥಳವಾದ ಝೀರಾ ಕನ್ವೆನ್ಶನ್ ಹಾಲ್ವರೆಗೆ ಮೆರವಣಿಗೆ ಜರುಗಲಿದೆ ಎಂದು ಸಮಿತಿಯ ಪ್ರಮುಖರು ತಿಳಿಸಿದರು.</p>.<p>ಮೆರವಣಿಗೆಯಲ್ಲಿ ಅಲಂಕೃತ ರಥದಲ್ಲಿ ಸಮ್ಮೇಳನದ ಲೋಗೋ ಇರಲಿದೆ. ಬೀದರ್ ಸೇರಿ ವಿವಿಧ ಜಿಲ್ಲೆಗಳ ಕಲಾ ತಂಡಗಳು ಮೆರವಣಿಗೆಯ ವೈಭವ ಹೆಚ್ಚಿಸಲಿವೆ ಎಂದು ಹೇಳಿದರು.</p>.<p>ಮೆರವಣಿಗೆ ಮಾರ್ಗದಲ್ಲಿ ಸಂಘ ಸಂಸ್ಥೆಗಳು, ಪುಷ್ಪವೃಷ್ಟಿ ಮಾಡಿ ಮೆರವಣಿಗೆಯನ್ನು ಸ್ವಾಗತಿಸಿ ಬರಮಾಡಿಕೊಳ್ಳಲಿವೆ ಎಂದು ತಿಳಿಸಿದರು.</p>.<p>ಸಮ್ಮೇಳನದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧೆಡೆಯಿಂದ ನಗರಕ್ಕೆ ಆಗಮಿಸುವ ಪತ್ರಕರ್ತರಿಗೆ ನಗರದ ಗುರುದ್ವಾರದ ವಸತಿ ಗೃಹಗಳು ಹಾಗೂ ಖಾಸಗಿ ವಸತಿ ಗೃಹಗಳಲ್ಲಿ ಈಗಾಗಲೇ ವ್ಯವಸ್ಥೆ ಮಾಡಲಾಗಿದೆ ಎಂದು ಸಮಿತಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆನಂದ ದೇವಪ್ಪ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-33-1928045215</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಅಂಗವಾಗಿ ಏ. 11ರಂದು ನಗರದಲ್ಲಿ ಅದ್ದೂರಿ ಮೆರವಣಿಗೆ ನಡೆಸಲು ಸಮ್ಮೇಳನ ಮೆರವಣಿಗೆ ಸಮಿತಿ ನಿರ್ಧರಿಸಿದೆ.</p>.<p>ನಗರದಲ್ಲಿ ನಡೆದ ಸಮ್ಮೇಳನ ಮೆರವಣಿಗೆ ಸಮಿತಿಯ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು.</p>.<p>ಅಂದು ಬೆಳಿಗ್ಗೆ ನಗರದ ಬಸವೇಶ್ವರ ವೃತ್ತದಿಂದ ಭಗತ್ಸಿಂಗ್ ವೃತ್ತ, ಅಂಬೇಡ್ಕರ್ ವೃತ್ತ, ಸಿದ್ಧಾರ್ಥ ಕಾಲೇಜು ಮಾರ್ಗವಾಗಿ ಸಮ್ಮೇಳನ ಸ್ಥಳವಾದ ಝೀರಾ ಕನ್ವೆನ್ಶನ್ ಹಾಲ್ವರೆಗೆ ಮೆರವಣಿಗೆ ಜರುಗಲಿದೆ ಎಂದು ಸಮಿತಿಯ ಪ್ರಮುಖರು ತಿಳಿಸಿದರು.</p>.<p>ಮೆರವಣಿಗೆಯಲ್ಲಿ ಅಲಂಕೃತ ರಥದಲ್ಲಿ ಸಮ್ಮೇಳನದ ಲೋಗೋ ಇರಲಿದೆ. ಬೀದರ್ ಸೇರಿ ವಿವಿಧ ಜಿಲ್ಲೆಗಳ ಕಲಾ ತಂಡಗಳು ಮೆರವಣಿಗೆಯ ವೈಭವ ಹೆಚ್ಚಿಸಲಿವೆ ಎಂದು ಹೇಳಿದರು.</p>.<p>ಮೆರವಣಿಗೆ ಮಾರ್ಗದಲ್ಲಿ ಸಂಘ ಸಂಸ್ಥೆಗಳು, ಪುಷ್ಪವೃಷ್ಟಿ ಮಾಡಿ ಮೆರವಣಿಗೆಯನ್ನು ಸ್ವಾಗತಿಸಿ ಬರಮಾಡಿಕೊಳ್ಳಲಿವೆ ಎಂದು ತಿಳಿಸಿದರು.</p>.<p>ಸಮ್ಮೇಳನದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧೆಡೆಯಿಂದ ನಗರಕ್ಕೆ ಆಗಮಿಸುವ ಪತ್ರಕರ್ತರಿಗೆ ನಗರದ ಗುರುದ್ವಾರದ ವಸತಿ ಗೃಹಗಳು ಹಾಗೂ ಖಾಸಗಿ ವಸತಿ ಗೃಹಗಳಲ್ಲಿ ಈಗಾಗಲೇ ವ್ಯವಸ್ಥೆ ಮಾಡಲಾಗಿದೆ ಎಂದು ಸಮಿತಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆನಂದ ದೇವಪ್ಪ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-33-1928045215</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>