<p>ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದಲ್ಲಿ ಏ. 11 ಮತ್ತು 12ರಂದು ಆಯೋಜಿಸಲಾಗಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಅಂಗವಾಗಿ ಎರಡು ದಿನಗಳ ಕಾಲ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ತೆರೆಯಲಾಗುತ್ತಿದೆ.</p>.<p>ಸಮ್ಮೇಳನಕ್ಕೆ ಆಗಮಿಸುವ ಸಾರ್ವಜನಿಕರು ಹಾಗೂ ಪ್ರತಿನಿಧಿಗಳಿಗಾಗಿ ಈ ಮಳಿಗೆಗಳ ವ್ಯವಸ್ಥೆ ಮಾಡಲಾಗಿದ್ದು, ಆಸಕ್ತ ವ್ಯಾಪಾರಿಗಳು ಮುಂಗಡವಾಗಿ ಮಳಿಗೆಗಳನ್ನು ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ.</p>.<p>ಹೆಚ್ಚಿನ ಮಾಹಿತಿಗೆ ವಿಜಯಕುಮಾರ ಅಷ್ಟೂರೆ: 7090414243/7090661555, ರಾಜಕುಮಾರ ಸ್ವಾಮಿ:8861413556, ಶಿವಾನಂದ ಅಮರಗೋಳ: 7353306982 ಅವರನ್ನು ಸಂಪರ್ಕಿಸಬಹುದು.</p>.<p>ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧೆಡೆಯ 2,300 ಪತ್ರಕರ್ತರು ಆನ್ಲೈನ್ನಲ್ಲಿ ಹೆಸರು ನೋಂದಣಿ ಮಾಡಿಸಿದ್ದಾರೆ. ಆನ್ಲೈನ್ ನೋಂದಣಿ ದಿನಾಂಕ ಮುಕ್ತಾಯಗೊಂಡಿದ್ದು, ಪತ್ರಕರ್ತರು ಏ. 11 ರಂದು ನೇರವಾಗಿ ಆಗಮಿಸಿ, ಹೆಸರು ನೋಂದಾಯಿಸಿ ಸಮ್ಮೇಳನದಲ್ಲಿ ಪಾಲ್ಗೊಳ್ಳಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-33-498284237</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದಲ್ಲಿ ಏ. 11 ಮತ್ತು 12ರಂದು ಆಯೋಜಿಸಲಾಗಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಅಂಗವಾಗಿ ಎರಡು ದಿನಗಳ ಕಾಲ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ತೆರೆಯಲಾಗುತ್ತಿದೆ.</p>.<p>ಸಮ್ಮೇಳನಕ್ಕೆ ಆಗಮಿಸುವ ಸಾರ್ವಜನಿಕರು ಹಾಗೂ ಪ್ರತಿನಿಧಿಗಳಿಗಾಗಿ ಈ ಮಳಿಗೆಗಳ ವ್ಯವಸ್ಥೆ ಮಾಡಲಾಗಿದ್ದು, ಆಸಕ್ತ ವ್ಯಾಪಾರಿಗಳು ಮುಂಗಡವಾಗಿ ಮಳಿಗೆಗಳನ್ನು ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ.</p>.<p>ಹೆಚ್ಚಿನ ಮಾಹಿತಿಗೆ ವಿಜಯಕುಮಾರ ಅಷ್ಟೂರೆ: 7090414243/7090661555, ರಾಜಕುಮಾರ ಸ್ವಾಮಿ:8861413556, ಶಿವಾನಂದ ಅಮರಗೋಳ: 7353306982 ಅವರನ್ನು ಸಂಪರ್ಕಿಸಬಹುದು.</p>.<p>ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧೆಡೆಯ 2,300 ಪತ್ರಕರ್ತರು ಆನ್ಲೈನ್ನಲ್ಲಿ ಹೆಸರು ನೋಂದಣಿ ಮಾಡಿಸಿದ್ದಾರೆ. ಆನ್ಲೈನ್ ನೋಂದಣಿ ದಿನಾಂಕ ಮುಕ್ತಾಯಗೊಂಡಿದ್ದು, ಪತ್ರಕರ್ತರು ಏ. 11 ರಂದು ನೇರವಾಗಿ ಆಗಮಿಸಿ, ಹೆಸರು ನೋಂದಾಯಿಸಿ ಸಮ್ಮೇಳನದಲ್ಲಿ ಪಾಲ್ಗೊಳ್ಳಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-33-498284237</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>