<p><strong>ಕಮಲನಗರ: ‘</strong>ಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಬಡವರು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ’ ಎಂದು ನಿವೃತ್ತ ಮುಖ್ಯ ಶಿಕ್ಷಕ ದೇವೇಂದ್ರ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಡಿಗ್ಗಿ ಗ್ರಾಮದ ಅಪನಾ ಎಂಟರ್ಪ್ರೈಸೇಸ್ ಸಂಕೀರ್ಣದಲ್ಲಿ ಸೋಮವಾರ ಮಹಾಜನ ಆಸ್ಪತ್ರೆ ವತಿಯಿಂದ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ‘ಜೀವನದಲ್ಲಿ ಸಾಧನೆ ಮಾಡಲು ಸದೃಢ ಆರೋಗ್ಯ ಬಹಳ ಮುಖ್ಯ. ದೇಹವು ರೋಗಗಳ ನೆಲೆಯಾಗದಂತೆ ಎಚ್ಚರವಹಿಸಬೇಕು’ ಎಂದರು.</p>.<p>ನಿವೃತ್ತ ಶಿಕ್ಷಕ ಮಡಿವಾಳಪ್ಪ ಮುರ್ಕೆ ಮಾತನಾಡಿ, ‘ಪರಿಶುದ್ಧ ಗಾಳಿ, ನೀರು, ಆಹಾರವನ್ನು ನಾವು ಸದ್ಬಳಕೆ ಮಾಡಿಕೊಂಡು ಆರೋಗ್ಯಕರ ಜೀವನ ನಡೆಸಬೇಕು’ ಎಂದು ಹೇಳಿದರು.</p>.<p>ಅಮರ ಲಿಂಗಪ್ಪ ಮಹಾಜನ ಮಾತನಾಡಿ, ‘ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಈ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ. ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಂಡು ಜೀವನ ಶೈಲಿ ಸಾಧ್ಯವಾದಷ್ಟು ಬದಲಾವಣೆ ಮಾಡಿಕೊಳ್ಳುವುದು ಉತ್ತಮ’ ಎಂದು ಹೇಳಿದರು.</p>.<p>ಡಾ.ದಯಾನಂದ ಬಾಲಾಜಿರಾವ ಗವಳಿ, ಡಾ.ಐಶ್ವರ್ಯ ಅಮರ ಮಹಾಜನ, ಆಪ್ಟಿಶಿಯನ್ ಲಕ್ಷ್ಮಣ ಕುಂಡಗೀರ, ನಂದಕಿಶೋರ ಶ್ರೀಗಿರೆ, ಸಂತೋಷ ಬನವಾಸೆ, ಸೂರ್ಯಕಾಂತ ಬಿರಾದಾರ, ಬಾಬುರಾವ ಹರಪಾಳೆ, ಮಲ್ಲಿಕಾರ್ಜುನ ಚೋಬಳೆ, ಸಂತೋಷ ಬಿರಾದಾರ, ಮನೋಜ ಹಿರೇಮಠ, ಗಣೇಶ ಪಾಂಡರೆ, ಆಸ್ಪತ್ರೆಯ ಸಿಬ್ಬಂದಿ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ: ‘</strong>ಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಬಡವರು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ’ ಎಂದು ನಿವೃತ್ತ ಮುಖ್ಯ ಶಿಕ್ಷಕ ದೇವೇಂದ್ರ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಡಿಗ್ಗಿ ಗ್ರಾಮದ ಅಪನಾ ಎಂಟರ್ಪ್ರೈಸೇಸ್ ಸಂಕೀರ್ಣದಲ್ಲಿ ಸೋಮವಾರ ಮಹಾಜನ ಆಸ್ಪತ್ರೆ ವತಿಯಿಂದ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ‘ಜೀವನದಲ್ಲಿ ಸಾಧನೆ ಮಾಡಲು ಸದೃಢ ಆರೋಗ್ಯ ಬಹಳ ಮುಖ್ಯ. ದೇಹವು ರೋಗಗಳ ನೆಲೆಯಾಗದಂತೆ ಎಚ್ಚರವಹಿಸಬೇಕು’ ಎಂದರು.</p>.<p>ನಿವೃತ್ತ ಶಿಕ್ಷಕ ಮಡಿವಾಳಪ್ಪ ಮುರ್ಕೆ ಮಾತನಾಡಿ, ‘ಪರಿಶುದ್ಧ ಗಾಳಿ, ನೀರು, ಆಹಾರವನ್ನು ನಾವು ಸದ್ಬಳಕೆ ಮಾಡಿಕೊಂಡು ಆರೋಗ್ಯಕರ ಜೀವನ ನಡೆಸಬೇಕು’ ಎಂದು ಹೇಳಿದರು.</p>.<p>ಅಮರ ಲಿಂಗಪ್ಪ ಮಹಾಜನ ಮಾತನಾಡಿ, ‘ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಈ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ. ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಂಡು ಜೀವನ ಶೈಲಿ ಸಾಧ್ಯವಾದಷ್ಟು ಬದಲಾವಣೆ ಮಾಡಿಕೊಳ್ಳುವುದು ಉತ್ತಮ’ ಎಂದು ಹೇಳಿದರು.</p>.<p>ಡಾ.ದಯಾನಂದ ಬಾಲಾಜಿರಾವ ಗವಳಿ, ಡಾ.ಐಶ್ವರ್ಯ ಅಮರ ಮಹಾಜನ, ಆಪ್ಟಿಶಿಯನ್ ಲಕ್ಷ್ಮಣ ಕುಂಡಗೀರ, ನಂದಕಿಶೋರ ಶ್ರೀಗಿರೆ, ಸಂತೋಷ ಬನವಾಸೆ, ಸೂರ್ಯಕಾಂತ ಬಿರಾದಾರ, ಬಾಬುರಾವ ಹರಪಾಳೆ, ಮಲ್ಲಿಕಾರ್ಜುನ ಚೋಬಳೆ, ಸಂತೋಷ ಬಿರಾದಾರ, ಮನೋಜ ಹಿರೇಮಠ, ಗಣೇಶ ಪಾಂಡರೆ, ಆಸ್ಪತ್ರೆಯ ಸಿಬ್ಬಂದಿ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>