<p><strong>ಬೀದರ್:</strong> ಬೇಸಿಗೆ ಕಾಲದಲ್ಲಿ ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾರಂಜಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಗೆ ಆದೇಶ ಹೊರಡಿಸಲಾಗಿದೆ.</p><p>ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಮೇ 4ರಂದು ನಡೆದ ಜಿಲ್ಲಾಧಿಕಾರಿ ಕಚೇರಿಯ ಸಭೆಯ ತೀರ್ಮಾನದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಕಲಬುರಗಿಯ ಪ್ರಾದೇಶಿಕ ಆಯುಕ್ತರ ಆದೇಶದನ್ವಯ ಜಲಾಶಯದಿಂದ ನೀರು ಹರಿಸಲು ನಿರ್ದೇಶನ ನೀಡಲಾಗಿದೆ.</p><p>ಕಾರಂಜಾ ಜಲಾಶಯದಿಂದ ಮೇ 16ರಿಂದ ಜೂನ್ 6ರ ವರೆಗೆ ಎಡದಂಡೆ, ಬಲದಂಡೆ, ಕಾರಂಜಾ ಏತ ನೀರಾವರಿ ಹಾಗೂ ಅತಿವಾಳ ಏತ ನೀರಾವರಿ ನಾಲೆಗಳ ಮೂಲಕ ಒಟ್ಟು 0.6 ಟಿಎಂಸಿ ಅಡಿ ನೀರು ಹಂತ-ಹಂತವಾಗಿ ಹರಿಸಲಾಗುತ್ತದೆ. ಸಾರ್ವಜನಿಕರು ಕಾಲುವೆಗೆ ಇಳಿಯುವುದಾಗಲಿ, ಬಟ್ಟೆ ಒಗೆಯುವುದು ಅಥವಾ ಈಜಾಡುವುದಾಗಲಿ, ಕಾಲುವೆಯ ನೀರಿನಲ್ಲಿ ದನಕರುಗಳಿಗೆ ನೀರು ಕುಡಿಸುವುದಾಗಲಿ ಮಾಡಬಾರದು. ಈ ನಿಯಮಗಳನ್ನು ಪಾಲಿಸಿ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಬೀದರ್ ಕರ್ನಾಟಕ ನೀರಾವರಿ ನಿಗಮದ ನಿಯಮಿತದ ಕಾರ್ಯಪಾಲಕ ಎಂಜಿನಿಯರ್ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಬೇಸಿಗೆ ಕಾಲದಲ್ಲಿ ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾರಂಜಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಗೆ ಆದೇಶ ಹೊರಡಿಸಲಾಗಿದೆ.</p><p>ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಮೇ 4ರಂದು ನಡೆದ ಜಿಲ್ಲಾಧಿಕಾರಿ ಕಚೇರಿಯ ಸಭೆಯ ತೀರ್ಮಾನದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಕಲಬುರಗಿಯ ಪ್ರಾದೇಶಿಕ ಆಯುಕ್ತರ ಆದೇಶದನ್ವಯ ಜಲಾಶಯದಿಂದ ನೀರು ಹರಿಸಲು ನಿರ್ದೇಶನ ನೀಡಲಾಗಿದೆ.</p><p>ಕಾರಂಜಾ ಜಲಾಶಯದಿಂದ ಮೇ 16ರಿಂದ ಜೂನ್ 6ರ ವರೆಗೆ ಎಡದಂಡೆ, ಬಲದಂಡೆ, ಕಾರಂಜಾ ಏತ ನೀರಾವರಿ ಹಾಗೂ ಅತಿವಾಳ ಏತ ನೀರಾವರಿ ನಾಲೆಗಳ ಮೂಲಕ ಒಟ್ಟು 0.6 ಟಿಎಂಸಿ ಅಡಿ ನೀರು ಹಂತ-ಹಂತವಾಗಿ ಹರಿಸಲಾಗುತ್ತದೆ. ಸಾರ್ವಜನಿಕರು ಕಾಲುವೆಗೆ ಇಳಿಯುವುದಾಗಲಿ, ಬಟ್ಟೆ ಒಗೆಯುವುದು ಅಥವಾ ಈಜಾಡುವುದಾಗಲಿ, ಕಾಲುವೆಯ ನೀರಿನಲ್ಲಿ ದನಕರುಗಳಿಗೆ ನೀರು ಕುಡಿಸುವುದಾಗಲಿ ಮಾಡಬಾರದು. ಈ ನಿಯಮಗಳನ್ನು ಪಾಲಿಸಿ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಬೀದರ್ ಕರ್ನಾಟಕ ನೀರಾವರಿ ನಿಗಮದ ನಿಯಮಿತದ ಕಾರ್ಯಪಾಲಕ ಎಂಜಿನಿಯರ್ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>