<p><strong>ಬೀದರ್</strong>: ಕಾರಂಜಾ ಯೋಜನೆಯಲ್ಲಿ ಜಮೀನು ಕಳೆದುಕೊಂಡು ಸಂತ್ರಸ್ತರಾದವರ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಇದುವರೆಗೆ ನಡೆದ ಬೆಳವಣಿಗೆ, ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ಕರೆಯಬೇಕೆಂದು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ.</p>.<p>ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.</p>.<p>ಸರ್ಕಾರದ ಅಂಕಿ ಅಂಶಗಳ ಪ್ರಕಾರ, ಕಾರಂಜಾ ಯೋಜನೆಗೆ 1981ರಿಂದ 1986ರ ವರೆಗೆ ಒಟ್ಟು 21,217 ಎಕರೆ 36 ಗುಂಟೆ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸದರಿ ಒಟ್ಟು 15,597 ಎಕರೆಯಲ್ಲಿ ಕಾರಂಜಾ ಅಣೆಕಟ್ಟೆ, 5,242 ಎಕರೆ 4 ಗುಂಟೆ ಕಾಲುವೆಗಳ ನಿರ್ಮಾಣಕ್ಕಾಗಿ, 378 ಎಕರೆ 14 ಗುಂಟೆ ಜಮೀನು ಪುನರ್ ವಸತಿಗೆ ನಿಗದಿಪಡಿಸಲಾಗಿದೆ. ಸರ್ಕಾರ ಪ್ರತಿ ಎಕರೆಗೆ ₹3 ಸಾವಿರ ಪರಿಹಾರ ನಿಗದಿಪಡಿಸಿ ವಿತರಿಸಿದೆ. ಆದರೆ, ಇದನ್ನು ಪ್ರಶ್ನಿಸಿ, ರೈತರು ಹೆಚ್ಚಿನ ಪರಿಹಾರಕ್ಕೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಪ್ರತಿ ಎಕರೆಗೆ ₹6ರಿಂದ ₹7,200 ನೀಡಬೇಕೆಂದು ನ್ಯಾಯಾಲಯ ಆದೇಶ ನೀಡಿದೆ. ಆದಕಾರಣ ಈ ಕುರಿತು ಚರ್ಚಿಸಿ ಗೊಂದಲ ನಿವಾರಿಸಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ಕರೆಯಬೇಕೆಂದು ಒತ್ತಾಯಿಸಿದರು.</p>.<p>ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿ ಸಂತ್ರಸ್ತರ ಪ್ರಮುಖರ ಉಪಸ್ಥಿತಿಯಲ್ಲಿ ಒಂದು ಸಭೆ ನಡೆಸಿ ಕಾರಂಜಾ ಯೋಜನೆಗೆ ಭೂಮಿ ನೀಡಿ ನ್ಯಾಯಾಲಯಕ್ಕೆ ಮೊರೆ ಹೋಗಿ ಪರಿಹಾರ ಪಡೆದವರು ಹಾಗೂ ಪರಿಹಾರ ಪಡೆಯದವರ ವಿವರ ಹಂಚಿಕೊಂಡು, ಅವರಿಗೆ ನ್ಯಾಯಯುತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹುಚಕನಳ್ಳಿ, ಪ್ರಮುಖರಾದ ವಿನಯ್ ಕುಮಾರ್ ಮಾಳಗೆ, ಮಹೇಶ್ ಗೋರನಾಳಕರ್ ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-33-1546634596</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಕಾರಂಜಾ ಯೋಜನೆಯಲ್ಲಿ ಜಮೀನು ಕಳೆದುಕೊಂಡು ಸಂತ್ರಸ್ತರಾದವರ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಇದುವರೆಗೆ ನಡೆದ ಬೆಳವಣಿಗೆ, ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ಕರೆಯಬೇಕೆಂದು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ.</p>.<p>ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.</p>.<p>ಸರ್ಕಾರದ ಅಂಕಿ ಅಂಶಗಳ ಪ್ರಕಾರ, ಕಾರಂಜಾ ಯೋಜನೆಗೆ 1981ರಿಂದ 1986ರ ವರೆಗೆ ಒಟ್ಟು 21,217 ಎಕರೆ 36 ಗುಂಟೆ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸದರಿ ಒಟ್ಟು 15,597 ಎಕರೆಯಲ್ಲಿ ಕಾರಂಜಾ ಅಣೆಕಟ್ಟೆ, 5,242 ಎಕರೆ 4 ಗುಂಟೆ ಕಾಲುವೆಗಳ ನಿರ್ಮಾಣಕ್ಕಾಗಿ, 378 ಎಕರೆ 14 ಗುಂಟೆ ಜಮೀನು ಪುನರ್ ವಸತಿಗೆ ನಿಗದಿಪಡಿಸಲಾಗಿದೆ. ಸರ್ಕಾರ ಪ್ರತಿ ಎಕರೆಗೆ ₹3 ಸಾವಿರ ಪರಿಹಾರ ನಿಗದಿಪಡಿಸಿ ವಿತರಿಸಿದೆ. ಆದರೆ, ಇದನ್ನು ಪ್ರಶ್ನಿಸಿ, ರೈತರು ಹೆಚ್ಚಿನ ಪರಿಹಾರಕ್ಕೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಪ್ರತಿ ಎಕರೆಗೆ ₹6ರಿಂದ ₹7,200 ನೀಡಬೇಕೆಂದು ನ್ಯಾಯಾಲಯ ಆದೇಶ ನೀಡಿದೆ. ಆದಕಾರಣ ಈ ಕುರಿತು ಚರ್ಚಿಸಿ ಗೊಂದಲ ನಿವಾರಿಸಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ಕರೆಯಬೇಕೆಂದು ಒತ್ತಾಯಿಸಿದರು.</p>.<p>ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿ ಸಂತ್ರಸ್ತರ ಪ್ರಮುಖರ ಉಪಸ್ಥಿತಿಯಲ್ಲಿ ಒಂದು ಸಭೆ ನಡೆಸಿ ಕಾರಂಜಾ ಯೋಜನೆಗೆ ಭೂಮಿ ನೀಡಿ ನ್ಯಾಯಾಲಯಕ್ಕೆ ಮೊರೆ ಹೋಗಿ ಪರಿಹಾರ ಪಡೆದವರು ಹಾಗೂ ಪರಿಹಾರ ಪಡೆಯದವರ ವಿವರ ಹಂಚಿಕೊಂಡು, ಅವರಿಗೆ ನ್ಯಾಯಯುತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹುಚಕನಳ್ಳಿ, ಪ್ರಮುಖರಾದ ವಿನಯ್ ಕುಮಾರ್ ಮಾಳಗೆ, ಮಹೇಶ್ ಗೋರನಾಳಕರ್ ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-33-1546634596</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>