<p><strong>ಬೀದರ್</strong>: ಇಲ್ಲಿಯ ಮಹಾನಗರ ಪಾಲಿಕೆಯ ವಲಯ-1 ಮತ್ತು 2ರ ಆಯುಕ್ತ ನಾಗಣ್ಣ ಎಂ.ಪಿ.(ಕೆಎಂಎಎಸ್) ಅವರು ಅಕ್ರಮವಾಗಿ ನಿರ್ಮಾಣಗೊಂಡಿರುವ ಲೇಔಟ್ಗಳಲ್ಲಿ ಸುಮಾರು 800ಕ್ಕೂ ಹೆಚ್ಚು ಖಾತಾ ಮ್ಯೂಟೇಶನ್ ಹಾಗೂ ಡಿಜಿಟಲ್ ಖಾತಾಗಳನ್ನು ಮಾಡಿಕೊಟ್ಟಿರುವ ಕುರಿತು ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ವಿವಿಧ ಸಂಘಟನೆಗಳ ಮುಖಂಡರು ಸಲ್ಲಿಸಿದರು.</p>.<p>ಬೀದರ್ ನಗರಸಭೆ ಮಹಾನಗರ ಪಾಲಿಕೆಯಾದ ನಂತರ ಗ್ರಾಮೀಣ ಭಾಗದ ಸುಮಾರು 16 ಗ್ರಾಮಗಳನ್ನು ಪಾಲಿಕೆಗೆ ಸೇರ್ಪಡೆ ಮಾಡಲಾಗಿದೆ. ಈ ಹಿನ್ನೆಲೆ ನಗರ ಪ್ರದೇಶಗಳಲ್ಲಿ ಭೂಮಿ ಹಾಗೂ ನಿವೇಶನಗಳ ಮೌಲ್ಯ ಹೆಚ್ಚಾಗಿದೆ. ಈ ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಂಡು ಕೆಲ ಭ್ರಷ್ಟ ಅಧಿಕಾರಿಗಳು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.</p>.<p>ಅಕ್ರಮ ಲೇಔಟ್ಗಳಲ್ಲಿ ಕೃಷಿ ಭೂಮಿಯನ್ನು ನಿವೇಶನಗಳಾಗಿ ಪರಿವರ್ತಿಸಿ, ಪ್ರತಿಯೊಂದು ಖಾತಾ ಮ್ಯೂಟೇಶನ್ ಮತ್ತು ಡಿಜಿಟಲ್ ಖಾತಾಗಳಿಗಾಗಿ ₹ 50 ಸಾವಿರದಿಂದ ₹1 ಲಕ್ಷದವರೆಗೆ ಹಣ ಪಡೆದು ಖಾತಾಗಳನ್ನು ಮಂಜೂರು ಮಾಡಲಾಗಿದೆ ಎಂದು ಸಂಘಟನೆಗಳು ಗಂಭೀರ ಆರೋಪ ಮಾಡಿವೆ.</p>.<p>ವಲಯ-2 ಆಯುಕ್ತರಾಗಿ ಬಂದ ನಂತರ ನಾಗಣ್ಣ ಎಂ.ಪಿ. ಅವರು ವಲಯ-1ರ ಪ್ರಭಾರವನ್ನೂ ವಹಿಸಿಕೊಂಡು, ಬೀದರ್ ನಗರ ಹಾಗೂ ಹೊಸದಾಗಿ ಸೇರ್ಪಡೆಗೊಂಡ ಗ್ರಾಮಗಳಲ್ಲಿನ ಆಸ್ತಿಗಳಿಗೆ ಅಕ್ರಮವಾಗಿ ಖಾತಾಗಳನ್ನು ನೀಡಿರುವುದರಿಂದ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಈ ಕುರಿತು ತಕ್ಷಣ ತನಿಖಾ ಸಮಿತಿ ರಚಿಸಿ, ಅಕ್ರಮವಾಗಿ ನೀಡಿರುವ ಖಾತಾ ಮ್ಯೂಟೇಶನ್ ಹಾಗೂ ಡಿಜಿಟಲ್ ಖಾತಾಗಳನ್ನು ರದ್ದುಪಡಿಸಿ, ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.</p>.<p>ವಾರದೊಳಗೆ ಕ್ರಮ ಕೈಗೊಳ್ಳದಿದ್ದಲ್ಲಿ ಬೀದರ್ ಮಹಾನಗರ ಪಾಲಿಕೆ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ರಾಷ್ಟ್ರೀಯ ದಲಿತ ಬ್ರಿಗೇಡ್ ಜಿಲ್ಲಾಧ್ಯಕ್ಷ ಅವಿನಾಶ ದೀನೆ, ಯುವ ಘಟಕ ರಾಜ್ಯಾಧ್ಯಕ್ಷ ಶಿವ ಜೀರ್ಗೆ, ಜೈ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕಲ್ಯಾಣರಾವ ಗುನಳ್ಳಿಕರ, ಸಂಜು ಲಕ್ಷ್ಮೀ ದೊಡ್ಡೆ, ಲಕ್ಷ್ಮಣ ಕಾಂಬಳೆ, ಮೋಹನ ಸಾಗರ, ಸಂತೋಷ ಪಾಟೀಲ, ಪ್ರದೀಪ ಸಾಗರ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-33-1682130691</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಇಲ್ಲಿಯ ಮಹಾನಗರ ಪಾಲಿಕೆಯ ವಲಯ-1 ಮತ್ತು 2ರ ಆಯುಕ್ತ ನಾಗಣ್ಣ ಎಂ.ಪಿ.(ಕೆಎಂಎಎಸ್) ಅವರು ಅಕ್ರಮವಾಗಿ ನಿರ್ಮಾಣಗೊಂಡಿರುವ ಲೇಔಟ್ಗಳಲ್ಲಿ ಸುಮಾರು 800ಕ್ಕೂ ಹೆಚ್ಚು ಖಾತಾ ಮ್ಯೂಟೇಶನ್ ಹಾಗೂ ಡಿಜಿಟಲ್ ಖಾತಾಗಳನ್ನು ಮಾಡಿಕೊಟ್ಟಿರುವ ಕುರಿತು ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ವಿವಿಧ ಸಂಘಟನೆಗಳ ಮುಖಂಡರು ಸಲ್ಲಿಸಿದರು.</p>.<p>ಬೀದರ್ ನಗರಸಭೆ ಮಹಾನಗರ ಪಾಲಿಕೆಯಾದ ನಂತರ ಗ್ರಾಮೀಣ ಭಾಗದ ಸುಮಾರು 16 ಗ್ರಾಮಗಳನ್ನು ಪಾಲಿಕೆಗೆ ಸೇರ್ಪಡೆ ಮಾಡಲಾಗಿದೆ. ಈ ಹಿನ್ನೆಲೆ ನಗರ ಪ್ರದೇಶಗಳಲ್ಲಿ ಭೂಮಿ ಹಾಗೂ ನಿವೇಶನಗಳ ಮೌಲ್ಯ ಹೆಚ್ಚಾಗಿದೆ. ಈ ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಂಡು ಕೆಲ ಭ್ರಷ್ಟ ಅಧಿಕಾರಿಗಳು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.</p>.<p>ಅಕ್ರಮ ಲೇಔಟ್ಗಳಲ್ಲಿ ಕೃಷಿ ಭೂಮಿಯನ್ನು ನಿವೇಶನಗಳಾಗಿ ಪರಿವರ್ತಿಸಿ, ಪ್ರತಿಯೊಂದು ಖಾತಾ ಮ್ಯೂಟೇಶನ್ ಮತ್ತು ಡಿಜಿಟಲ್ ಖಾತಾಗಳಿಗಾಗಿ ₹ 50 ಸಾವಿರದಿಂದ ₹1 ಲಕ್ಷದವರೆಗೆ ಹಣ ಪಡೆದು ಖಾತಾಗಳನ್ನು ಮಂಜೂರು ಮಾಡಲಾಗಿದೆ ಎಂದು ಸಂಘಟನೆಗಳು ಗಂಭೀರ ಆರೋಪ ಮಾಡಿವೆ.</p>.<p>ವಲಯ-2 ಆಯುಕ್ತರಾಗಿ ಬಂದ ನಂತರ ನಾಗಣ್ಣ ಎಂ.ಪಿ. ಅವರು ವಲಯ-1ರ ಪ್ರಭಾರವನ್ನೂ ವಹಿಸಿಕೊಂಡು, ಬೀದರ್ ನಗರ ಹಾಗೂ ಹೊಸದಾಗಿ ಸೇರ್ಪಡೆಗೊಂಡ ಗ್ರಾಮಗಳಲ್ಲಿನ ಆಸ್ತಿಗಳಿಗೆ ಅಕ್ರಮವಾಗಿ ಖಾತಾಗಳನ್ನು ನೀಡಿರುವುದರಿಂದ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಈ ಕುರಿತು ತಕ್ಷಣ ತನಿಖಾ ಸಮಿತಿ ರಚಿಸಿ, ಅಕ್ರಮವಾಗಿ ನೀಡಿರುವ ಖಾತಾ ಮ್ಯೂಟೇಶನ್ ಹಾಗೂ ಡಿಜಿಟಲ್ ಖಾತಾಗಳನ್ನು ರದ್ದುಪಡಿಸಿ, ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.</p>.<p>ವಾರದೊಳಗೆ ಕ್ರಮ ಕೈಗೊಳ್ಳದಿದ್ದಲ್ಲಿ ಬೀದರ್ ಮಹಾನಗರ ಪಾಲಿಕೆ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ರಾಷ್ಟ್ರೀಯ ದಲಿತ ಬ್ರಿಗೇಡ್ ಜಿಲ್ಲಾಧ್ಯಕ್ಷ ಅವಿನಾಶ ದೀನೆ, ಯುವ ಘಟಕ ರಾಜ್ಯಾಧ್ಯಕ್ಷ ಶಿವ ಜೀರ್ಗೆ, ಜೈ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕಲ್ಯಾಣರಾವ ಗುನಳ್ಳಿಕರ, ಸಂಜು ಲಕ್ಷ್ಮೀ ದೊಡ್ಡೆ, ಲಕ್ಷ್ಮಣ ಕಾಂಬಳೆ, ಮೋಹನ ಸಾಗರ, ಸಂತೋಷ ಪಾಟೀಲ, ಪ್ರದೀಪ ಸಾಗರ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-33-1682130691</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>