ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ‌ ಸಾಗರ್ ಖಂಡ್ರೆ ನಾಮಪತ್ರ ಸಲ್ಲಿಕೆ

Published 16 ಏಪ್ರಿಲ್ 2024, 9:01 IST
Last Updated 16 ಏಪ್ರಿಲ್ 2024, 9:01 IST
ಅಕ್ಷರ ಗಾತ್ರ

ಬೀದರ್: ಪರಿಸರ, ಅರಣ್ಯ ಖಾತೆ ಸಚಿವ ಈಶ್ವರ ಬಿ. ಖಂಡ್ರೆಯವರ ಮಗ ಸಾಗರ್ ಖಂಡ್ರೆ ಅವರು ನಗರದಲ್ಲಿ ಮಂಗಳವಾರ ಬೀದರ್ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ತಾಯಿ ಡಾ. ಗೀತಾ ಈಶ್ವರ ಖಂಡ್ರೆ, ಮಾವ ಗಂಗಾಧರ, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಅವರೊಂದಿಗೆ ತೆರಳಿ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಉಮೇದುವಾರಿಕೆ ಸಲ್ಲಿಸಿ, ಪ್ರತಿಜ್ಞೆ ಸ್ವೀಕರಿಸಿದರು.

ಬುಧವಾರ (ಏ.17) ಬೃಹತ್ ರೋಡ್ ಷೋ ಮೂಲಕ ಶಕ್ತಿ ಪ್ರದರ್ಶನದೊಂದಿಗೆ ಇನ್ನೊಂದು ನಾಮಪತ್ರ ಸಲ್ಲಿಸುವರು. ಪಕ್ಷದ ಸಚಿವರು, ಶಾಸಕರು, ಮುಖಂಡರು, ಅಪಾರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT