<p>ಹುಲಸೂರ: ಸಮೀಪದ ಭಾಲ್ಕಿ ತಾಲ್ಲೂಕಿನ ಮೆಹಕರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಅಗತ್ಯ ಸಿಬ್ಬಂದಿ ಕೊರತೆಯಿಂದ ಆರೋಗ್ಯ ಸೇವೆ ಕುಂಠಿತಗೊಂಡಿದ್ದು, ರಾತ್ರಿ ವೇಳೆಯ ತುರ್ತು ಚಿಕಿತ್ಸೆ ಸ್ಥಗಿತಗೊಂಡಿದೆ. ಇದರಿಂದ ಗ್ರಾಮೀಣ ಭಾಗದ ಬಡ ರೋಗಿಗಳು ಚಿಕಿತ್ಸೆಗಾಗಿ ದೂರದ ಪಟ್ಟಣಗಳಿಗೆ ಅಲೆದಾಡುವಂತಾಗಿದೆ.</p>.<p>ಸುಮಾರು ₹4 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಈ ಆರೋಗ್ಯ ಕೇಂದ್ರದಲ್ಲಿ ಲೇಬರ್ ವಾರ್ಡ್, ಸಾಮಾನ್ಯ ವಾರ್ಡ್, ಮೈನರ್ ಶಸ್ತ್ರಚಿಕಿತ್ಸಾ ಕೊಠಡಿ, ಪ್ರಯೋಗಶಾಲೆ, ಫಾರ್ಮಸಿ, ಕ್ಷ-ಕಿರಣ ಘಟಕ, ದಂತ ಚಿಕಿತ್ಸಾ ವಿಭಾಗ ಮತ್ತು ಸಿಬ್ಬಂದಿ ವಸತಿಗೃಹ ಸೇರಿದಂತೆ ಹಲವು ಸೌಲಭ್ಯಗಳಿವೆ. ಆದರೆ ಅಗತ್ಯ ವೈದ್ಯರು ಮತ್ತು ಸಿಬ್ಬಂದಿ ಇಲ್ಲದ ಕಾರಣ ಕಟ್ಟಡ ಮಾತ್ರ ಭವ್ಯವಾಗಿದ್ದು, ಸಮರ್ಪಕ ಸೇವೆ ಲಭ್ಯವಾಗುತ್ತಿಲ್ಲ.</p>.<p>ಮೆಹಕರ ಗ್ರಾಮದಲ್ಲಿ ಸುಮಾರು 8 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಇದ್ದು, ನಾರದಾ ಸಂಗಮ, ಬೊಳೆಗಾಂವ ಸೇರಿದಂತೆ ಸಾಯಗಾಂವ ಹೋಬಳಿಯ 15ಕ್ಕೂ ಹೆಚ್ಚು ಗ್ರಾಮಗಳ ನಿವಾಸಿಗಳು ಈ ಕೇಂದ್ರವನ್ನೇ ಅವಲಂಬಿಸಿದ್ದಾರೆ. ಆದರೆ ಪ್ರಸ್ತುತ ಆಸ್ಪತ್ರೆಯಲ್ಲಿ ಒಬ್ಬ ಮಹಿಳಾ ಸ್ಟಾಫ್ ನರ್ಸ್ ಮಾತ್ರ ಹಗಲು ವೇಳೆ ಸೇವೆ ನೀಡುತ್ತಿದ್ದಾರೆ. ಸಂಜೆ 6 ಗಂಟೆಯ ನಂತರ ಆಸ್ಪತ್ರೆ ಮುಚ್ಚಲಾಗುತ್ತಿದ್ದು, ಗರ್ಭಿಣಿಯರು, ಬಾಣಂತಿಯರು, ಅಪಘಾತಕ್ಕೊಳಗಾದವರು ಹಾಗೂ ವಿಷಜಂತುಗಳ ಕಡಿತಕ್ಕೆ ಒಳಗಾದವರು ತುರ್ತು ಚಿಕಿತ್ಸೆಗಾಗಿ ಭಾಲ್ಕಿ, ಬಸವಕಲ್ಯಾಣ ಅಥವಾ ನೆರೆಯ ಮಹಾರಾಷ್ಟ್ರದ ಆಸ್ಪತ್ರೆಗಳಿಗೆ ತೆರಳಬೇಕಾಗಿದೆ.</p>.<p>ಬೇಸಿಗೆಯ ತಾಪಮಾನ ಏರಿಕೆಯಿಂದ ಜ್ವರ, ಕೆಮ್ಮು, ತಲೆನೋವು, ಹೊಟ್ಟೆನೋವು ಸೇರಿದಂತೆ ಸಾಮಾನ್ಯ ಕಾಯಿಲೆಗಳು ಹೆಚ್ಚಾಗಿವೆ. ವೈದ್ಯರ ಕೊರತೆಯಿಂದ ಶುಶ್ರೂಷಕಿಯರೇ ಪ್ರಾಥಮಿಕ ಚಿಕಿತ್ಸೆ ನೀಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೋಗ ಉಲ್ಬಣಗೊಂಡರೆ ರೋಗಿಗಳನ್ನು ತಕ್ಷಣ ತಾಲ್ಲೂಕು ಆಸ್ಪತ್ರೆಗೆ ಕಳುಹಿಸುವುದೇ ಏಕೈಕ ಮಾರ್ಗವಾಗಿದೆ.</p>.<p>ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ, ತಜ್ಞ ವೈದ್ಯರು, ಎಂ.ಬಿ.ಬಿ.ಎಸ್ ವೈದ್ಯರು, ದಾದಿಯರು, ಕ್ಷ-ಕಿರಣ ತಂತ್ರಜ್ಞರು, ಫಾರ್ಮಸಿಸ್ಟ್, ಪ್ರಥಮ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳು ಖಾಲಿ ಇವೆ. ಹೀಗಾಗಿ 24x7 ಆರೋಗ್ಯ ಸೇವೆ ಕಾಗದದಲ್ಲೇ ಉಳಿದಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p>ಈ ಭಾಗದಲ್ಲಿ ರಸ್ತೆ ಅಪಘಾತ, ವಿಷಜಂತುಗಳ ಕಡಿತ, ಹೃದಯಾಘಾತ ಹಾಗೂ ಹೆರಿಗೆ ಸಂದರ್ಭಗಳಲ್ಲಿ ತುರ್ತು ಚಿಕಿತ್ಸೆಯ ಅವಶ್ಯಕತೆ ಹೆಚ್ಚಿದೆ. ಆದರೆ ಸ್ಥಳೀಯವಾಗಿ ಸಮರ್ಪಕ ವೈದ್ಯಕೀಯ ನೆರವು ಸಿಗದ ಕಾರಣ ಬಡ ಕುಟುಂಬಗಳು ಖಾಸಗಿ ಆಸ್ಪತ್ರೆಗಳ ಮೊರೆ ಹೋಗಿ ಹೆಚ್ಚುವರಿ ವೆಚ್ಚ ಭರಿಸುವಂತಾಗಿದೆ.</p>.<p>‘ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಆಸ್ಪತ್ರೆ ಜನರಿಗೆ ನಿಜವಾದ ಆಸರೆಯಾಗಬೇಕಾದರೆ ಕಾಯಂ ವೈದ್ಯರ ನೇಮಕ, ಅಗತ್ಯ ಸಿಬ್ಬಂದಿ ಭರ್ತಿ, ವಸತಿಗೃಹ ನವೀಕರಣ ಮತ್ತು ನಿರಂತರ ಆಂಬುಲೆನ್ಸ್ ಸೇವೆ ಒದಗಿಸುವುದು ತುರ್ತು ಅಗತ್ಯವಾಗಿದೆ. ಗ್ರಾಮೀಣ ಆರೋಗ್ಯ ವ್ಯವಸ್ಥೆ ಬಲಪಡಿಸುವುದಾಗಿ ಹೇಳುತ್ತಿರುವ ಸರ್ಕಾರ ಈ ಕೇಂದ್ರದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-33-1238855018</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಲಸೂರ: ಸಮೀಪದ ಭಾಲ್ಕಿ ತಾಲ್ಲೂಕಿನ ಮೆಹಕರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಅಗತ್ಯ ಸಿಬ್ಬಂದಿ ಕೊರತೆಯಿಂದ ಆರೋಗ್ಯ ಸೇವೆ ಕುಂಠಿತಗೊಂಡಿದ್ದು, ರಾತ್ರಿ ವೇಳೆಯ ತುರ್ತು ಚಿಕಿತ್ಸೆ ಸ್ಥಗಿತಗೊಂಡಿದೆ. ಇದರಿಂದ ಗ್ರಾಮೀಣ ಭಾಗದ ಬಡ ರೋಗಿಗಳು ಚಿಕಿತ್ಸೆಗಾಗಿ ದೂರದ ಪಟ್ಟಣಗಳಿಗೆ ಅಲೆದಾಡುವಂತಾಗಿದೆ.</p>.<p>ಸುಮಾರು ₹4 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಈ ಆರೋಗ್ಯ ಕೇಂದ್ರದಲ್ಲಿ ಲೇಬರ್ ವಾರ್ಡ್, ಸಾಮಾನ್ಯ ವಾರ್ಡ್, ಮೈನರ್ ಶಸ್ತ್ರಚಿಕಿತ್ಸಾ ಕೊಠಡಿ, ಪ್ರಯೋಗಶಾಲೆ, ಫಾರ್ಮಸಿ, ಕ್ಷ-ಕಿರಣ ಘಟಕ, ದಂತ ಚಿಕಿತ್ಸಾ ವಿಭಾಗ ಮತ್ತು ಸಿಬ್ಬಂದಿ ವಸತಿಗೃಹ ಸೇರಿದಂತೆ ಹಲವು ಸೌಲಭ್ಯಗಳಿವೆ. ಆದರೆ ಅಗತ್ಯ ವೈದ್ಯರು ಮತ್ತು ಸಿಬ್ಬಂದಿ ಇಲ್ಲದ ಕಾರಣ ಕಟ್ಟಡ ಮಾತ್ರ ಭವ್ಯವಾಗಿದ್ದು, ಸಮರ್ಪಕ ಸೇವೆ ಲಭ್ಯವಾಗುತ್ತಿಲ್ಲ.</p>.<p>ಮೆಹಕರ ಗ್ರಾಮದಲ್ಲಿ ಸುಮಾರು 8 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಇದ್ದು, ನಾರದಾ ಸಂಗಮ, ಬೊಳೆಗಾಂವ ಸೇರಿದಂತೆ ಸಾಯಗಾಂವ ಹೋಬಳಿಯ 15ಕ್ಕೂ ಹೆಚ್ಚು ಗ್ರಾಮಗಳ ನಿವಾಸಿಗಳು ಈ ಕೇಂದ್ರವನ್ನೇ ಅವಲಂಬಿಸಿದ್ದಾರೆ. ಆದರೆ ಪ್ರಸ್ತುತ ಆಸ್ಪತ್ರೆಯಲ್ಲಿ ಒಬ್ಬ ಮಹಿಳಾ ಸ್ಟಾಫ್ ನರ್ಸ್ ಮಾತ್ರ ಹಗಲು ವೇಳೆ ಸೇವೆ ನೀಡುತ್ತಿದ್ದಾರೆ. ಸಂಜೆ 6 ಗಂಟೆಯ ನಂತರ ಆಸ್ಪತ್ರೆ ಮುಚ್ಚಲಾಗುತ್ತಿದ್ದು, ಗರ್ಭಿಣಿಯರು, ಬಾಣಂತಿಯರು, ಅಪಘಾತಕ್ಕೊಳಗಾದವರು ಹಾಗೂ ವಿಷಜಂತುಗಳ ಕಡಿತಕ್ಕೆ ಒಳಗಾದವರು ತುರ್ತು ಚಿಕಿತ್ಸೆಗಾಗಿ ಭಾಲ್ಕಿ, ಬಸವಕಲ್ಯಾಣ ಅಥವಾ ನೆರೆಯ ಮಹಾರಾಷ್ಟ್ರದ ಆಸ್ಪತ್ರೆಗಳಿಗೆ ತೆರಳಬೇಕಾಗಿದೆ.</p>.<p>ಬೇಸಿಗೆಯ ತಾಪಮಾನ ಏರಿಕೆಯಿಂದ ಜ್ವರ, ಕೆಮ್ಮು, ತಲೆನೋವು, ಹೊಟ್ಟೆನೋವು ಸೇರಿದಂತೆ ಸಾಮಾನ್ಯ ಕಾಯಿಲೆಗಳು ಹೆಚ್ಚಾಗಿವೆ. ವೈದ್ಯರ ಕೊರತೆಯಿಂದ ಶುಶ್ರೂಷಕಿಯರೇ ಪ್ರಾಥಮಿಕ ಚಿಕಿತ್ಸೆ ನೀಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೋಗ ಉಲ್ಬಣಗೊಂಡರೆ ರೋಗಿಗಳನ್ನು ತಕ್ಷಣ ತಾಲ್ಲೂಕು ಆಸ್ಪತ್ರೆಗೆ ಕಳುಹಿಸುವುದೇ ಏಕೈಕ ಮಾರ್ಗವಾಗಿದೆ.</p>.<p>ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ, ತಜ್ಞ ವೈದ್ಯರು, ಎಂ.ಬಿ.ಬಿ.ಎಸ್ ವೈದ್ಯರು, ದಾದಿಯರು, ಕ್ಷ-ಕಿರಣ ತಂತ್ರಜ್ಞರು, ಫಾರ್ಮಸಿಸ್ಟ್, ಪ್ರಥಮ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳು ಖಾಲಿ ಇವೆ. ಹೀಗಾಗಿ 24x7 ಆರೋಗ್ಯ ಸೇವೆ ಕಾಗದದಲ್ಲೇ ಉಳಿದಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p>ಈ ಭಾಗದಲ್ಲಿ ರಸ್ತೆ ಅಪಘಾತ, ವಿಷಜಂತುಗಳ ಕಡಿತ, ಹೃದಯಾಘಾತ ಹಾಗೂ ಹೆರಿಗೆ ಸಂದರ್ಭಗಳಲ್ಲಿ ತುರ್ತು ಚಿಕಿತ್ಸೆಯ ಅವಶ್ಯಕತೆ ಹೆಚ್ಚಿದೆ. ಆದರೆ ಸ್ಥಳೀಯವಾಗಿ ಸಮರ್ಪಕ ವೈದ್ಯಕೀಯ ನೆರವು ಸಿಗದ ಕಾರಣ ಬಡ ಕುಟುಂಬಗಳು ಖಾಸಗಿ ಆಸ್ಪತ್ರೆಗಳ ಮೊರೆ ಹೋಗಿ ಹೆಚ್ಚುವರಿ ವೆಚ್ಚ ಭರಿಸುವಂತಾಗಿದೆ.</p>.<p>‘ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಆಸ್ಪತ್ರೆ ಜನರಿಗೆ ನಿಜವಾದ ಆಸರೆಯಾಗಬೇಕಾದರೆ ಕಾಯಂ ವೈದ್ಯರ ನೇಮಕ, ಅಗತ್ಯ ಸಿಬ್ಬಂದಿ ಭರ್ತಿ, ವಸತಿಗೃಹ ನವೀಕರಣ ಮತ್ತು ನಿರಂತರ ಆಂಬುಲೆನ್ಸ್ ಸೇವೆ ಒದಗಿಸುವುದು ತುರ್ತು ಅಗತ್ಯವಾಗಿದೆ. ಗ್ರಾಮೀಣ ಆರೋಗ್ಯ ವ್ಯವಸ್ಥೆ ಬಲಪಡಿಸುವುದಾಗಿ ಹೇಳುತ್ತಿರುವ ಸರ್ಕಾರ ಈ ಕೇಂದ್ರದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-33-1238855018</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>