<p><strong>ಔರಾದ್:</strong> ‘ಒಂದು ವಾರದಲ್ಲಿ ಯಾವ ಗ್ರಾಮಗಳಲ್ಲೂ ಕುಡಿಯುವ ನೀರಿನ ಸಮಸ್ಯೆ ತಲೆದೂರದಂತೆ ನೋಡಿಕೊಳ್ಳಬೇಕು’ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಇಲ್ಲಿಯ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಸೋಮವಾರ ಸಾರ್ವಜನಿಕ ಕುಂದು ಕೊರತೆ ಆಲಿಸಿದ ಸಚಿವರು,‘ಜನರ ಸಮಸ್ಯೆಗಳನ್ನು ಕಾಲ ಮಿತಿಯಲ್ಲಿ ಪರಿಹರಿಸಬೇಕು’ ಎಂದರು.</p>.<p>ನೀರಿನ ಸಮಸ್ಯೆ ಕುರಿತ ಹೆಚ್ಚಿನ ಕಾಳಜಿ ವಹಿಸಿದ ಸಚಿವರು ಪ್ರತಿ ಪಂಚಾಯಿತಿ ಪಿಡಿಒ ಅವರಿಂದ ಎಲ್ಲೆಲ್ಲಿ ಸಮಸ್ಯೆ ಇದೆ. ಅದನ್ನು ಪರಿಹರಿಸಲು ಏನು ತಯಾರಿ ಮಾಡಿಕೊಳ್ಳಲಾಗಿದೆ ಎಂಬುದರ ಕುರಿತು ವಿವರವಾದ ಮಾಹಿತಿ ಪಡೆದುಕೊಂಡರು.</p>.<p>ತಾವು ನೀಡಿದ ಗಡುವಿನ ಒಳಗೆ ಸಮಸ್ಯೆ ಪರಿಹಾರವಾಗಬೇಕು. ಈ ಕುರಿತಂತೆ ಎಲ್ಲ ಪಂಚಾಯಿತಿಯಿಂದ ಲಿಖಿತ ಮಾಹಿತಿ ಕೊಡಬೇಕು ಎಂದು ತಾಲ್ಲೂಕು ಪಂಚಾಯಿತಿ ಇಒ ಮಾಣಿಕರಾವ ಪಾಟೀಲ ಅವರಿಗೆ ಸೂಚಿಸಿದರು.</p>.<p>‘ಕಂದಾಯ ಇಲಾಖೆಯ ಕೆಲ ವಿಭಾಗಗಳಲ್ಲಿ ಸಾಕಷ್ಟು ದೂರುಗಳಿವೆ. ಸರ್ವೆ ವಿಭಾಗದಲ್ಲಿ ಕೆಲಸ ಸರಿಯಾಗಿ ಆಗುತ್ತಿಲ್ಲ. ರೈತರು ಸುತ್ತಾಡಿ ಸುಸ್ತಾಗುತ್ತಿದ್ದಾರೆ. ಈ ಕುರಿತು ಸರ್ಕಾರಕ್ಕೆ ವರದಿ ಕೊಡಬೇಕು’ ಎಂದು ತಹಶೀಲ್ದಾರ್ ಅರುಕುಮಾರ ಕುಲಕರ್ಣಿ ಅವರಿಗೆ ಸೂಚಿಸಿದರು.</p>.<p>ಪಹಣಿ ತಿದ್ದುಪಡಿ, ಪಡಿತರ ಚೀಟಿ, ಮಾಸಾಶನ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಅನೇಕ ಜನ ಸಚಿವರ ಮುಂದೆ ತಮ್ಮ ಗೋಳು ತೋಡಿಕೊಂಡರು. ತಮಗೆ ಬೆಳೆ ವಿಮೆ ಬಂದಿಲ್ಲ. ತೋಟಗಾರಿಕೆ ಇಲಾಖೆಯಿಂದ ಸ್ಪಂದನೆ ಸಿಗುತ್ತಿಲ್ಲ ಎಂದು ಕೆಲ ರೈತರು ಸಚಿವರ ಮುಂದೆ ಹೇಳಿಕೊಂಡರು.</p>.<p>‘ನೋಡಿ ತಾಲ್ಲೂಕಿನ ಜನರೇ ನನ್ನ ದೇವರು. ಜನರಿಗೆ ತೊಂದರೆ ಆದರೆ ನಾನು ಸಹಿಸುವುದಿಲ್ಲ. ಅದರಲ್ಲೂ ವೃದ್ಧರು, ಅಂಗವಿಕಲರು, ಮಹಿಳೆಯರಿಗೆ ಸತಾಯಿಸಿದರೆ ನಾನು ಸುಮ್ಮನಿರುವುದಿಲ್ಲ. ಇಂತಹವರ ಬಳಿ ಹಣ ಪಡೆಯುವುದು ಪಾಪದ ಕೆಲಸ’ ಎಂದು ಹೇಳಿದರು.</p>.<p>‘ಸಾಕಷ್ಟು ಹೋರಾಟದ ಫಲವಾಗಿ ಬೀದರ್-ಔರಾದ್ ನಡುವಿನ ಹೆದ್ದಾರಿ ಕಾಮಗಾರಿ ಶುರುವಾಗಿದೆ. ಆದರೆ ಕೆಲಸ ಸರಿ ಆಗುತ್ತಿಲ್ಲ. ಆದರೂ ತಾಲ್ಲೂಕಿನ ಇಬ್ಬರೂ ಸಚಿವರಿದ್ದರೂ ಈ ಬಗ್ಗೆ ಚಕಾರ ಎತ್ತುತ್ತಿಲ್ಲ’ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪುರ ಹೇಳಿದರು.</p>.<p>‘ನಾನು ಅನೇಕ ಬಾರಿ ಕಾಮಗಾರಿ ಸ್ಥಳಕ್ಕೆ ಹೋಗಿ ಪರಿಶೀಲಿಸಿದ್ದೇನೆ. ಯಾವುದೇ ಕಾರಣಕ್ಕೆ ಕಳಪೆ ಕಾಮಗಾರಿ ಆಗುವುದಕ್ಕೆ ಬಿಡುವುದಿಲ್ಲ’ ಎಂದು ಸಚಿವರು ಭರವಸೆ ನೀಡಿದರು.</p>.<p>ಕಮಲನಗರ ತಹಶೀಲ್ದಾರ್ ರಮೇಶ ಪೆದ್ದೆ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> ‘ಒಂದು ವಾರದಲ್ಲಿ ಯಾವ ಗ್ರಾಮಗಳಲ್ಲೂ ಕುಡಿಯುವ ನೀರಿನ ಸಮಸ್ಯೆ ತಲೆದೂರದಂತೆ ನೋಡಿಕೊಳ್ಳಬೇಕು’ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಇಲ್ಲಿಯ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಸೋಮವಾರ ಸಾರ್ವಜನಿಕ ಕುಂದು ಕೊರತೆ ಆಲಿಸಿದ ಸಚಿವರು,‘ಜನರ ಸಮಸ್ಯೆಗಳನ್ನು ಕಾಲ ಮಿತಿಯಲ್ಲಿ ಪರಿಹರಿಸಬೇಕು’ ಎಂದರು.</p>.<p>ನೀರಿನ ಸಮಸ್ಯೆ ಕುರಿತ ಹೆಚ್ಚಿನ ಕಾಳಜಿ ವಹಿಸಿದ ಸಚಿವರು ಪ್ರತಿ ಪಂಚಾಯಿತಿ ಪಿಡಿಒ ಅವರಿಂದ ಎಲ್ಲೆಲ್ಲಿ ಸಮಸ್ಯೆ ಇದೆ. ಅದನ್ನು ಪರಿಹರಿಸಲು ಏನು ತಯಾರಿ ಮಾಡಿಕೊಳ್ಳಲಾಗಿದೆ ಎಂಬುದರ ಕುರಿತು ವಿವರವಾದ ಮಾಹಿತಿ ಪಡೆದುಕೊಂಡರು.</p>.<p>ತಾವು ನೀಡಿದ ಗಡುವಿನ ಒಳಗೆ ಸಮಸ್ಯೆ ಪರಿಹಾರವಾಗಬೇಕು. ಈ ಕುರಿತಂತೆ ಎಲ್ಲ ಪಂಚಾಯಿತಿಯಿಂದ ಲಿಖಿತ ಮಾಹಿತಿ ಕೊಡಬೇಕು ಎಂದು ತಾಲ್ಲೂಕು ಪಂಚಾಯಿತಿ ಇಒ ಮಾಣಿಕರಾವ ಪಾಟೀಲ ಅವರಿಗೆ ಸೂಚಿಸಿದರು.</p>.<p>‘ಕಂದಾಯ ಇಲಾಖೆಯ ಕೆಲ ವಿಭಾಗಗಳಲ್ಲಿ ಸಾಕಷ್ಟು ದೂರುಗಳಿವೆ. ಸರ್ವೆ ವಿಭಾಗದಲ್ಲಿ ಕೆಲಸ ಸರಿಯಾಗಿ ಆಗುತ್ತಿಲ್ಲ. ರೈತರು ಸುತ್ತಾಡಿ ಸುಸ್ತಾಗುತ್ತಿದ್ದಾರೆ. ಈ ಕುರಿತು ಸರ್ಕಾರಕ್ಕೆ ವರದಿ ಕೊಡಬೇಕು’ ಎಂದು ತಹಶೀಲ್ದಾರ್ ಅರುಕುಮಾರ ಕುಲಕರ್ಣಿ ಅವರಿಗೆ ಸೂಚಿಸಿದರು.</p>.<p>ಪಹಣಿ ತಿದ್ದುಪಡಿ, ಪಡಿತರ ಚೀಟಿ, ಮಾಸಾಶನ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಅನೇಕ ಜನ ಸಚಿವರ ಮುಂದೆ ತಮ್ಮ ಗೋಳು ತೋಡಿಕೊಂಡರು. ತಮಗೆ ಬೆಳೆ ವಿಮೆ ಬಂದಿಲ್ಲ. ತೋಟಗಾರಿಕೆ ಇಲಾಖೆಯಿಂದ ಸ್ಪಂದನೆ ಸಿಗುತ್ತಿಲ್ಲ ಎಂದು ಕೆಲ ರೈತರು ಸಚಿವರ ಮುಂದೆ ಹೇಳಿಕೊಂಡರು.</p>.<p>‘ನೋಡಿ ತಾಲ್ಲೂಕಿನ ಜನರೇ ನನ್ನ ದೇವರು. ಜನರಿಗೆ ತೊಂದರೆ ಆದರೆ ನಾನು ಸಹಿಸುವುದಿಲ್ಲ. ಅದರಲ್ಲೂ ವೃದ್ಧರು, ಅಂಗವಿಕಲರು, ಮಹಿಳೆಯರಿಗೆ ಸತಾಯಿಸಿದರೆ ನಾನು ಸುಮ್ಮನಿರುವುದಿಲ್ಲ. ಇಂತಹವರ ಬಳಿ ಹಣ ಪಡೆಯುವುದು ಪಾಪದ ಕೆಲಸ’ ಎಂದು ಹೇಳಿದರು.</p>.<p>‘ಸಾಕಷ್ಟು ಹೋರಾಟದ ಫಲವಾಗಿ ಬೀದರ್-ಔರಾದ್ ನಡುವಿನ ಹೆದ್ದಾರಿ ಕಾಮಗಾರಿ ಶುರುವಾಗಿದೆ. ಆದರೆ ಕೆಲಸ ಸರಿ ಆಗುತ್ತಿಲ್ಲ. ಆದರೂ ತಾಲ್ಲೂಕಿನ ಇಬ್ಬರೂ ಸಚಿವರಿದ್ದರೂ ಈ ಬಗ್ಗೆ ಚಕಾರ ಎತ್ತುತ್ತಿಲ್ಲ’ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪುರ ಹೇಳಿದರು.</p>.<p>‘ನಾನು ಅನೇಕ ಬಾರಿ ಕಾಮಗಾರಿ ಸ್ಥಳಕ್ಕೆ ಹೋಗಿ ಪರಿಶೀಲಿಸಿದ್ದೇನೆ. ಯಾವುದೇ ಕಾರಣಕ್ಕೆ ಕಳಪೆ ಕಾಮಗಾರಿ ಆಗುವುದಕ್ಕೆ ಬಿಡುವುದಿಲ್ಲ’ ಎಂದು ಸಚಿವರು ಭರವಸೆ ನೀಡಿದರು.</p>.<p>ಕಮಲನಗರ ತಹಶೀಲ್ದಾರ್ ರಮೇಶ ಪೆದ್ದೆ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>