ಕಳೆದ ಒಂದು ವರ್ಷದಲ್ಲಿ ರಾಜ್ಯ ಸರ್ಕಾರದ ಆಡಳಿತ ನೋಡಿದರೆ ರಾಜ್ಯದಲ್ಲಿ ಅಶಾಂತಿ ಹುಟ್ಟು ಹಾಕಿ, ಬಹುಸಂಖ್ಯಾತರ ಹಿತರಕ್ಷಣೆ ಸಂಪೂರ್ಣ ಹತ್ತಿಕ್ಕಿದೆ. ಕೇವಲ ಅಲ್ಪಸಂಖ್ಯಾತರ ಓಲೈಕೆ, ತುಷ್ಟೀಕರಣ ರಾಜಕಾರಣ ಮಾಡಲಾಗುತ್ತಿದೆ. ಬಹುಸಂಖ್ಯಾತರ ಹಿತರಕ್ಷಣೆಗೆ ಪದವೀಧರ ಮತದಾರರು ಬಿಜೆಪಿಯನ್ನು ಬೆಂಬಲಿಸಬೇಕು. ಬಹುಸಂಖ್ಯಾತರ ಹಿತಾಸಕ್ತಿಗೆ ವಿರುದ್ಧವಾದ ಕಾನೂನುಗಳನ್ನು ತಂದರೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಅದನ್ನು ತಡೆಹಿಡಿಯುವ ಕೆಲಸ ಮಾಡಲಿದೆ ಎಂದು ಹೇಳಿದರು.