ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಕೊಳ್ಳಲು ಖೂಬಾ ಆಗ್ರಹ

ಪಾದರಾಯನಪುರ ದಾಂದಲೆ ಪ್ರಕರಣ
Last Updated 21 ಏಪ್ರಿಲ್ 2020, 13:49 IST
ಅಕ್ಷರ ಗಾತ್ರ

ಬೀದರ್‌: ‘ಪಾದರಾಯನಪುರ ದಾಂದಲೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿ ಶಾಸಕ ಜಮೀರ್‌ ಅಹಮ್ಮದ್ ಸೇರಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮಕೈಕೊಳ್ಳಬೇಕು’ ಎಂದು ಸಂಸದ ಭಗವಂತ ಖೂಬಾ ಆಗ್ರಹಿಸಿದರು.

‘ಕ್ವಾರಂಟೈನ್ ಮಾಡಲು ಹೋಗಿದ್ದ ವೈದ್ಯಕೀಯ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳ ಪರವಾಗಿ ಜಮೀರ್ ಮಾತನಾಡಿರುವುದು ಖಂಡನಾರ್ಹ’ ಎಂದು ನಗರದ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

‘ಕ್ವಾರಂಟೈನ್‌ಗೆ ಜನರನ್ನು ರಾತ್ರಿ ಕರೆದುಕೊಂಡು ಹೋಗುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸುವ ಮೂಲಕ ಅಜ್ಞಾನ ಪ್ರದರ್ಶಿಸಿದ್ದಾರೆ. ಕೋವಿಡ್–19 ಸೋಂಕು ಹರಡುವ ಭಯದಿಂದಾಗಿ ಜನ ಸಂಕಷ್ಟದಲ್ಲಿದ್ದಾರೆ. ವೈದ್ಯಕೀಯ ಸಿಬ್ಬಂದಿಗೆ ನೈತಿಕ ‌ಸ್ಥೈರ್ಯ ತುಂಬುವ ಬದಲು ದುಷ್ಕರ್ಮಿಗಳ ಪರವಾನಗಿ ಮಾತನಾಡಿದ್ದಾರೆ’ ಎಂದು ಆರೋಪಿಸಿದರು.

‘ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವುದು ಸ್ವಾಗತಾರ್ಹವಾಗಿದೆ. ಶಾಸಕ ಜಮೀರ್ ಅಹ್ಮದ್‌ ಅವರು ದಾಳಿಕೋರರಿಗೆ ಕುಮ್ಮುಕ್ಕು ನೀಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಪೊಲೀಸರು ತನಿಖೆ ನಡೆಸಿ ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು’ ಎಂದು ಆಗ್ರಹಿಸಿದರು.

ವಿಧಾನ ಪರಿಷತ್‌ ಸದಸ್ಯ ರಘುನಾಥ ಮಲ್ಕಾಪುರೆ, ಬಸವರಾಜ ಹೊಕ್ರಾಣಿ ಹಾಗೂ ಬಸವರಾಜ ಜೋಜನಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT