ಶನಿವಾರ, ಮಾರ್ಚ್ 25, 2023
29 °C

ಬೀದರ್- ಮುಂಬೈ ರೈಲು ಪುನರಾರಂಭ: ಸಂಸದ ಭಗವಂತ ಖೂಬಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೋವಿಡ್ ಕಾರಣ ಸ್ಥಗಿತಗೊಳಿಸಲಾಗಿದ್ದ ವಾರದಲ್ಲಿ ಮೂರು ದಿನ ಸಂಚರಿಸುವ ಬೀದರ್-ಮುಂಬೈ ರೈಲು ಸೇವೆ ಪುಃನರಾರಂಭಗೊಂಡಿದೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.

ರೈಲು ಸಂಚಾರ ಸ್ಥಗಿತಗೊಂಡಿದ್ದರಿಂದ ಕ್ಷೇತ್ರದ ಜನರಿಗೆ ಅನಾನುಕೂಲವಾಗಿತ್ತು. ಕಾರಣ, ಮುಂಬೈನಲ್ಲಿ ಮಧ್ಯ ರೈಲ್ವೆ ಮುಖ್ಯ ವ್ಯವಸ್ಥಾಪಕರನ್ನು ಭೇಟಿ ಮಾಡಿ, ರೈಲು ಸಂಚಾರ ಪುಃನರಾರಂಭಿಸಲು ಮನವಿ ಮಾಡಿದ್ದೆ. ಅದರ ಫಲಶ್ರುತಿಯಿಂದಾಗಿ ರೈಲು ಸಂಚಾರ ಶುರು ಮಾಡಲಾಗಿದೆ ಎಂದು ಹೇಳಿದ್ದಾರೆ.

02043 ಸಂಖ್ಯೆಯ ರೈಲು ಬುಧವಾರ, ಶುಕ್ರವಾರ ಮತ್ತು ಶನಿವಾರ ರಾತ್ರಿ 9ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಲ್‍ನಿಂದ ಹೊರಟು ಥಾಣೆ, ಕಲ್ಯಾಣ ಜಂಕ್ಷನ್, ಪುಣೆ, ದೌಂಡ್, ಬಾರ್ಸಿ ಟೌನ್, ಉಸ್ಮಾನಾಬಾದ್, ಲಾತೂರ್‌, ಲಾತೂರ್ ರಸ್ತೆ, ಉದಗಿರ್, ಭಾಲ್ಕಿ ಮಾರ್ಗವಾಗಿ ಮರುದಿನ ಬೆಳಿಗ್ಗೆ 9.10ಕ್ಕೆ ಬೀದರ್‌ಗೆ ಬರಲಿದೆ ಎಂದು ಹೇಳಿದ್ದಾರೆ.

02044 ಸಂಖ್ಯೆಯ ರೈಲು ಗುರುವಾರ, ಶನಿವಾರ ಹಾಗೂ ಭಾನುವಾರ ರಾತ್ರಿ 7.50ಕ್ಕೆ ಬೀದರ್‌ದಿಂದ ಹೊರಟು ಮರುದಿನ ಬೆಳಿಗ್ಗೆ 7.55ಕ್ಕೆ ಮುಂಬೈ ತಲುಪಲಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಜನ ರೈಲಿನ ಸುದುಪಯೋಗ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು