<p><strong>ಬೀದರ್:</strong> ‘ಕೋವಿಡ್–19 ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಎಂತಹುದೇ ಪರಿಸ್ಥಿತಿ ಉದ್ಭವಿಸಿದರೂ ಎದುರಿಸಲು ಸಿದ್ಧರಾಗಿರಬೇಕು’ ಎಂದು ನೂತನ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್., ಅವರು ವೈದ್ಯರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ವೈದ್ಯಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಜಿಲ್ಲೆಯಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವುದು ಎಚ್ಚರಿಕೆಯ ಗಂಟೆಯಾಗಿದೆ. ಬ್ರಿಮ್ಸ್ ಆಸ್ಪತ್ರೆಯಲ್ಲಿ ಅಗತ್ಯ ಬೆಡ್, ವೆಂಟಿಲೇಟರ್ ಮೊದಲಾದ ಸೌಕರ್ಯಗಳಿಗೆ ಒತ್ತು ಕೊಡಬೇಕು’ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಮಾತನಾಡಿ, ‘ರೋಗಿಗಳ ಚಿಕಿತ್ಸೆಗೆ ಎಲ್ಲ ವೈದ್ಯಕೀಯ ಸಾಮಗ್ರಿ ಲಭ್ಯ ಇರುವಂತೆ ನೋಡಿಕೊಳ್ಳಬೇಕು. ಪ್ರಯೋಗಾಲಯ ಸಾಮರ್ಥ್ಯ ಹೆಚ್ಚಿಸುವ ಕಡೆ ಗಮನ ಹರಿಸಬೇಕು’ ಎಂದು ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ಮಾತನಾಡಿ, ‘ಕೋವಿಡ್–19 ಗೆ ಸಂಬಂಧಿಸಿದಂತೆ ಈವರೆಗೆ ಸಿದ್ಧಪಡಿಸಿರುವ ಬೆಡ್ಗಳ ಸಂಖ್ಯೆ ಎಷ್ಟು, ಐಸೊಲೇಶನ್ ವಿಶೇಷ ವಾರ್ಡ್ಗಳು ಎಷ್ಟು ಎನ್ನುವುದನ್ನು ಕೋವಿಡ್– 19 ಪೋರ್ಟಲ್ನಲ್ಲಿ ಪ್ರತಿದಿನ ಅಪ್ಡೇಟ್ ಮಾಡಬೇಕು’ ಎಂದು ತಿಳಿಸಿದರು.</p>.<p>ಬ್ರಿಮ್ಸ್ ನಿರ್ದೇಶಕ ಡಾ. ಶಿವಕುಮಾರ ಮಾತನಾಡಿ, ‘ಸ್ಟಾಫ್ ನರ್ಸ್ಗಳು, ಎಕ್ಸ್ರೇ ಟೆಕ್ನಿಶಿಯನ್ ಸೇರಿದಂತೆ ಬ್ರಿಮ್ಸ್ ಆಸ್ಪತ್ರೆಗೆ ಮಾನವ ಸಂಪನ್ಮೂಲದ ಅಗತ್ಯ ಇದೆ’ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಧಿಕಾರಿ ಅಕ್ಷಯ್ ಶ್ರೀಧರ, ಭಂವರಸಿಂಗ್ ಮೀನಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಕೋವಿಡ್–19 ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಎಂತಹುದೇ ಪರಿಸ್ಥಿತಿ ಉದ್ಭವಿಸಿದರೂ ಎದುರಿಸಲು ಸಿದ್ಧರಾಗಿರಬೇಕು’ ಎಂದು ನೂತನ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್., ಅವರು ವೈದ್ಯರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ವೈದ್ಯಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಜಿಲ್ಲೆಯಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವುದು ಎಚ್ಚರಿಕೆಯ ಗಂಟೆಯಾಗಿದೆ. ಬ್ರಿಮ್ಸ್ ಆಸ್ಪತ್ರೆಯಲ್ಲಿ ಅಗತ್ಯ ಬೆಡ್, ವೆಂಟಿಲೇಟರ್ ಮೊದಲಾದ ಸೌಕರ್ಯಗಳಿಗೆ ಒತ್ತು ಕೊಡಬೇಕು’ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಮಾತನಾಡಿ, ‘ರೋಗಿಗಳ ಚಿಕಿತ್ಸೆಗೆ ಎಲ್ಲ ವೈದ್ಯಕೀಯ ಸಾಮಗ್ರಿ ಲಭ್ಯ ಇರುವಂತೆ ನೋಡಿಕೊಳ್ಳಬೇಕು. ಪ್ರಯೋಗಾಲಯ ಸಾಮರ್ಥ್ಯ ಹೆಚ್ಚಿಸುವ ಕಡೆ ಗಮನ ಹರಿಸಬೇಕು’ ಎಂದು ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ಮಾತನಾಡಿ, ‘ಕೋವಿಡ್–19 ಗೆ ಸಂಬಂಧಿಸಿದಂತೆ ಈವರೆಗೆ ಸಿದ್ಧಪಡಿಸಿರುವ ಬೆಡ್ಗಳ ಸಂಖ್ಯೆ ಎಷ್ಟು, ಐಸೊಲೇಶನ್ ವಿಶೇಷ ವಾರ್ಡ್ಗಳು ಎಷ್ಟು ಎನ್ನುವುದನ್ನು ಕೋವಿಡ್– 19 ಪೋರ್ಟಲ್ನಲ್ಲಿ ಪ್ರತಿದಿನ ಅಪ್ಡೇಟ್ ಮಾಡಬೇಕು’ ಎಂದು ತಿಳಿಸಿದರು.</p>.<p>ಬ್ರಿಮ್ಸ್ ನಿರ್ದೇಶಕ ಡಾ. ಶಿವಕುಮಾರ ಮಾತನಾಡಿ, ‘ಸ್ಟಾಫ್ ನರ್ಸ್ಗಳು, ಎಕ್ಸ್ರೇ ಟೆಕ್ನಿಶಿಯನ್ ಸೇರಿದಂತೆ ಬ್ರಿಮ್ಸ್ ಆಸ್ಪತ್ರೆಗೆ ಮಾನವ ಸಂಪನ್ಮೂಲದ ಅಗತ್ಯ ಇದೆ’ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಧಿಕಾರಿ ಅಕ್ಷಯ್ ಶ್ರೀಧರ, ಭಂವರಸಿಂಗ್ ಮೀನಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>