<p><strong>ಹುಮನಾಬಾದ್:</strong> ವಿದ್ಯಾರ್ಥಿಗಳು ಬುದ್ದ, ಬಸವ, ಅಂಬೇಡ್ಕರಂತಹ ವ್ಯಕ್ತಿಗಳ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ ವೈ.ಆರ್.ನಂದಿಹಳ್ಳಿ ಹೇಳಿದರು.</p>.<p>ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಗುರುವಾರ ಆಯೋಜಿಸಿದ್ದ ದ್ವಿತೀಯ ಪಿಯುಸಿ, ಮತ್ತು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ಬಿಳ್ಕೋಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ದೇಶವನ್ನು ಮುನ್ನಡೆಸುವಂತಹ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದ್ದು, ಪೋಷಕರ ಆಸೆ ಮತ್ತು ನಿಮ್ಮ ಜೀವನದಲ್ಲಿ ಸಾಧನೆ ಮಾಡಬೇಕಾದರೆ ಗುಣಮಟ್ಟದ ಶಿಕ್ಷಣ ಕಲಿಸಬೇಕು ಎಂದು ಸಲಹೆ ನೀಡಿದರು.</p>.<p>ಕಾಲೇಜು ವಸತಿ ನಿಲಯದ ಮೇಲ್ವಿಚಾರಕ ಗುಂಡಪ್ಪ ಕುಂದಾ, ಬಸವಕಲ್ಯಾಣ ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಶಿವಕುಮಾರ ಬಿರಾದಾರ ಮಾತನಾಡಿದರು.</p>.<p>ಮೇಲ್ವಿಚಾರಕರಾದ ಪಪ್ಪು ಮೇತ್ರೆ, ಪುಷ್ಪಾ ದಾಂಡೆಕರ್, ಗೌತಮ ಚಿಂತಲಗೇರಾ, ಅಂಬಣ್ಣ , ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ರಾಹುಲ್ ರತ್ನಾಕರ್, ಮುಖಂಡ ಪ್ರಶಾಂತ ಜಾನವೀರ ಇದ್ದರು. ಪ್ರಕಾಶ ದೊಡ್ಡಮನಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್:</strong> ವಿದ್ಯಾರ್ಥಿಗಳು ಬುದ್ದ, ಬಸವ, ಅಂಬೇಡ್ಕರಂತಹ ವ್ಯಕ್ತಿಗಳ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ ವೈ.ಆರ್.ನಂದಿಹಳ್ಳಿ ಹೇಳಿದರು.</p>.<p>ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಗುರುವಾರ ಆಯೋಜಿಸಿದ್ದ ದ್ವಿತೀಯ ಪಿಯುಸಿ, ಮತ್ತು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ಬಿಳ್ಕೋಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ದೇಶವನ್ನು ಮುನ್ನಡೆಸುವಂತಹ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದ್ದು, ಪೋಷಕರ ಆಸೆ ಮತ್ತು ನಿಮ್ಮ ಜೀವನದಲ್ಲಿ ಸಾಧನೆ ಮಾಡಬೇಕಾದರೆ ಗುಣಮಟ್ಟದ ಶಿಕ್ಷಣ ಕಲಿಸಬೇಕು ಎಂದು ಸಲಹೆ ನೀಡಿದರು.</p>.<p>ಕಾಲೇಜು ವಸತಿ ನಿಲಯದ ಮೇಲ್ವಿಚಾರಕ ಗುಂಡಪ್ಪ ಕುಂದಾ, ಬಸವಕಲ್ಯಾಣ ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಶಿವಕುಮಾರ ಬಿರಾದಾರ ಮಾತನಾಡಿದರು.</p>.<p>ಮೇಲ್ವಿಚಾರಕರಾದ ಪಪ್ಪು ಮೇತ್ರೆ, ಪುಷ್ಪಾ ದಾಂಡೆಕರ್, ಗೌತಮ ಚಿಂತಲಗೇರಾ, ಅಂಬಣ್ಣ , ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ರಾಹುಲ್ ರತ್ನಾಕರ್, ಮುಖಂಡ ಪ್ರಶಾಂತ ಜಾನವೀರ ಇದ್ದರು. ಪ್ರಕಾಶ ದೊಡ್ಡಮನಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>