<p><strong>ಹುಲಸೂರ</strong>: ‘ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ಉದ್ದೇಶದಿಂದ ಹಾಲಹಳ್ಳಿ ಗ್ರಾಮದಲ್ಲಿ ಮಕ್ಕಳ ಸ್ನೇಹಿ ಕಲಿಕಾಕೇಂದ್ರಗಳನ್ನು ತೆರೆಯಲಾಗುತ್ತಿದೆ’ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಮಹೇಶ್ ಪಾಟೀಲ್ ತಿಳಿಸಿದರು.</p>.<p>ತಾಲ್ಲೂಕಿನ ಹಾಲಹಳ್ಳಿ ಗ್ರಾಮದಲ್ಲಿ ಮಕ್ಕಳ ಸ್ನೇಹಿ ಕಲಿಕಾ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ‘ಮಕ್ಕಳಲ್ಲಿ ಶೈಕ್ಷಣಿಕ ಚಟುವಟಿಕೆ ಹಿಂದುಳಿದಿದೆ. ಮಕ್ಕಳು ಮೊಬೈಲ್, ಟ್ಯಾಬ್ಗಳ ಮೊರೆಹೋಗಿದ್ದಾರೆ. ಅವರಲ್ಲಿ ಓದಿನ ಆಸಕ್ತಿ ಮೂಡಿಸಲು ಇಂತಹ ಕಲಿಕಾ ಕೆಂದ್ರದ ಅಗತ್ಯವಿದೆ’ ಎಂದರು.</p>.<p>ಶುಭೋದಯ ರೈತ ಒಕ್ಕೂಟದ ನಿರ್ದೇಶಕ ಅಶೋಕ ಸಜ್ಜನ ಮಾತನಾಡಿ, ‘ಕಲಿಕಾ ಕೇಂದ್ರಗಳಿಂದ ಮಕ್ಕಳ ಬೌದ್ಧಿಕಮಟ್ಟ ಸುಧಾರಣೆಗೊಳ್ಳುವುದರ ಜೊತೆಗೆ ಓದಿನ ಬಗ್ಗೆ ಆಸಕ್ತಿ ಮೂಡಿಸಲು ಸಾಧ್ಯವಾಗುತ್ತದೆ. ಇದನ್ನು ಸಮುದಾಯದತ್ತ ಕಾರ್ಯಕ್ರಮವಾಗಿಸಲು ಸಂಸ್ಥೆಯು ಸಂಪೂರ್ಣವಾಗಿ ಸಹಕರಿಸುವುದು’ ಎಂದರು.</p>.<p>ಈ ಸಂದರ್ಭದಲ್ಲಿ ದತ್ತಾತ್ರೇಯ.ಸಿ.ಪಾಟೀಲ್, ಶ್ರೀಶೈಲ ಪಾಟೀಲ್, ಬಸವರಾಜ್ ಮಠಪತಿ, ಗಣೇಶ್ ಕಾಳೆ, ಕಲಿಕಾ ಕೇಂದ್ರದ ಶಿಕ್ಷಕಿ ವಿದ್ಯಾ ಸೇರಿ ಮಕ್ಕಳು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ</strong>: ‘ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ಉದ್ದೇಶದಿಂದ ಹಾಲಹಳ್ಳಿ ಗ್ರಾಮದಲ್ಲಿ ಮಕ್ಕಳ ಸ್ನೇಹಿ ಕಲಿಕಾಕೇಂದ್ರಗಳನ್ನು ತೆರೆಯಲಾಗುತ್ತಿದೆ’ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಮಹೇಶ್ ಪಾಟೀಲ್ ತಿಳಿಸಿದರು.</p>.<p>ತಾಲ್ಲೂಕಿನ ಹಾಲಹಳ್ಳಿ ಗ್ರಾಮದಲ್ಲಿ ಮಕ್ಕಳ ಸ್ನೇಹಿ ಕಲಿಕಾ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ‘ಮಕ್ಕಳಲ್ಲಿ ಶೈಕ್ಷಣಿಕ ಚಟುವಟಿಕೆ ಹಿಂದುಳಿದಿದೆ. ಮಕ್ಕಳು ಮೊಬೈಲ್, ಟ್ಯಾಬ್ಗಳ ಮೊರೆಹೋಗಿದ್ದಾರೆ. ಅವರಲ್ಲಿ ಓದಿನ ಆಸಕ್ತಿ ಮೂಡಿಸಲು ಇಂತಹ ಕಲಿಕಾ ಕೆಂದ್ರದ ಅಗತ್ಯವಿದೆ’ ಎಂದರು.</p>.<p>ಶುಭೋದಯ ರೈತ ಒಕ್ಕೂಟದ ನಿರ್ದೇಶಕ ಅಶೋಕ ಸಜ್ಜನ ಮಾತನಾಡಿ, ‘ಕಲಿಕಾ ಕೇಂದ್ರಗಳಿಂದ ಮಕ್ಕಳ ಬೌದ್ಧಿಕಮಟ್ಟ ಸುಧಾರಣೆಗೊಳ್ಳುವುದರ ಜೊತೆಗೆ ಓದಿನ ಬಗ್ಗೆ ಆಸಕ್ತಿ ಮೂಡಿಸಲು ಸಾಧ್ಯವಾಗುತ್ತದೆ. ಇದನ್ನು ಸಮುದಾಯದತ್ತ ಕಾರ್ಯಕ್ರಮವಾಗಿಸಲು ಸಂಸ್ಥೆಯು ಸಂಪೂರ್ಣವಾಗಿ ಸಹಕರಿಸುವುದು’ ಎಂದರು.</p>.<p>ಈ ಸಂದರ್ಭದಲ್ಲಿ ದತ್ತಾತ್ರೇಯ.ಸಿ.ಪಾಟೀಲ್, ಶ್ರೀಶೈಲ ಪಾಟೀಲ್, ಬಸವರಾಜ್ ಮಠಪತಿ, ಗಣೇಶ್ ಕಾಳೆ, ಕಲಿಕಾ ಕೇಂದ್ರದ ಶಿಕ್ಷಕಿ ವಿದ್ಯಾ ಸೇರಿ ಮಕ್ಕಳು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>